ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಮೂಡಿಗೆರೆಯಾದ್ಯಂತ ಸೂತಕದ ಛಾಯೆ
ಚಿಕ್ಕಮಗಳೂರು, ಜುಲೈ 30: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಳಿಯ, ಕಾಫಿನಾಡಿನ ಹೆಸರಾಂತ ಉದ್ಯಮಿ, ದೇಶ, ವಿದೇಶಗಳಲ್ಲಿ ಕಾಫಿ ಡೇ ಉದ್ಯಮದ ಮೂಲಕ ಹೆಸರಾಗಿರುವ ಮೂಡಿಗೆರೆ ತಾಲೂಕಿನ ಸಿದ್ದಾರ್ಥ ಅವರ ನಾಪತ್ತೆ ಪ್ರಕರಣದಿಂದಾಗಿ ಜಿಲ್ಲೆ ಹಾಗೂ ಮೂಡಿಗೆರೆ ತಾಲೂಕಿನ ಜನತೆ ದಿಗ್ಭ್ರಾಂತರಾಗಿದ್ದಾರೆ.
ಸಿದ್ದಾರ್ಥ ಅವರು ನಾಪತ್ತೆಯಾದ ಸುದ್ದಿ ಹರಡಿದಾಗಿನಿಂದ ಜಿಲ್ಲೆಯ ರಾಜಕಾರಣಿಗಳು, ಜನರು ಚಿಂತಾಕ್ರಾಂತರಾಗಿದ್ದಾರೆ. ಸಿದ್ದಾರ್ಥ ಅವರು ಎಲ್ಲೇ ಇದ್ದರೂ ಬದುಕಿ ಬರಲಿ ಎಂದು ಆಶಿಸುತ್ತಿದ್ದಾರೆ.
ಸಿದ್ದಾರ್ಥ ಅವರ ನಾಪತ್ತೆ ಸುದ್ದಿಯಿಂದಾಗಿ ಮೂಡಿಗೆರೆಯಲ್ಲಿರುವ ಅವರ ತಂದೆ ಗಂಗಯ್ಯ ಹೆಗ್ಡೆ ಹಾಗೂ ತಾಯಿ, ಸಂಬಂಧಿಕರು ಕಣ್ಣೀರಿಡುತ್ತಿದ್ದು, ಮೂಡಿಗೆರೆಯಾದ್ಯಂತ ಸೂತಕದ ಛಾಯೆ ಆವರಿಸಿದೆ.

ಸಿದ್ದಾರ್ಥ ಅವರ ತಂದೆ ಗಂಗಯ್ಯ ಹೆಗ್ಡೆ ಸ್ವಾತಂತ್ರ ಹೋರಾಟಗಾರರಾಗಿದ್ದು, ಇವರ ಕುಟುಂಬ ಸಾಧನೆಯಿಂದಾಗಿ ಜಿಲ್ಲೆಯಾದ್ಯಂತ ಮನೆ ಮಾತಾಗಿದೆ. ರಾಜ್ಯಾದ ಹೆಸರಾಂತ ರಾಜಕಾರಣಿಗಳು ಹಾಗೂ ಖ್ಯಾತ ಉದ್ಯಮಿಗಳು ಮೂಡಿಗೆರೆಯ ಸಿದ್ದಾರ್ಥ ಅವರ ಮನೆಗೆ ಬೇಟಿ ನೀಡುತ್ತಿದ್ದು, ಕುಟುಂಬದವರಿಗೆ ಸಾಂತ್ವಾನ ಹೇಳುತ್ತಿದ್ದಾರೆ.
ಸಿದ್ದಾರ್ಥ ಕುಟುಂಬ ಉದ್ಯಮ ಮಾತ್ರವಲ್ಲದೇ ಕಾಫಿ ಬೆಳೆಗಾರರಾಗಿದ್ದು, ಸುಮಾರು 12 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಸಮಾಜ ಸೇವೆಗೂ ಹೆಸರಾಗಿರುವ ಸಿದ್ದಾರ್ಥ ಕುಟುಂಬ ಚಿಕ್ಕಮಗಳೂರು ನಗರ ಸಮೀಪದಲ್ಲಿ ಬಡವರಿಗೆ ಉಚಿತ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದು, ಕಾಮಗಾರಿ ಆರಂಭವಾಗಿದೆ.
ಚಿಕ್ಕಮಗಳೂರಿನಲ್ಲಿ ಸಿದ್ದಾರ್ಥ ಮಾಲೀಕತ್ವದ ಎಬಿಸಿ ಕಾಫಿ ಕಂಪೆನಿ, ಸೆರಾಯ್ ಹೋಟೆಲ್ ಹಾಗಾ ಅಂಬರ್ ವ್ಯಾಲಿ ಹೆಸರಿನ ಬೋರ್ಡಿಂಗ್ ಶಾಲೆ ಹೊಂದಿದ್ದು, ಈ ಸಂಸ್ಥೆಗಳ ಮೂಲಕ ಜಿಲ್ಲೆಯ ಸಾವಿರಾರು ಮಂದಿಗೆ ಉದ್ಯೋಗದಾತರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯನಾಗಿರುವ ಇವರು ತಮ್ಮ ಇಬ್ಬರು ಮಕ್ಕಳನ್ನು ಅಮೇರಿಕಾದಲ್ಲಿ ವಿದ್ಯಾಭ್ಯಾಸಕ್ಕೆ ಬಿಟ್ಟಿದ್ದಾರೆ.

ಸಿದ್ದಾರ್ಥ ಅವರ ಕಾಫಿ ಡೇ ಉದ್ಯಮ ದೇಶಾದ್ಯಂತ ಹರಡಿದ್ದು ಜಗತ್ತಿನ 219 ದೇಶಗಳಲ್ಲಿ ಇವರ ಕಾಫಿ ಡೇ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ ಕೀನ್ಯಾ, ಶ್ರೀಲಂಕ ದೇಶಗಳಲ್ಲೂ ಇವರ ಮಾಲೀಕತ್ವದ ಕಾಫಿ ತೋಟಗಳಿವೆ.
ಸಿದ್ಧಾರ್ಥ ನಾಪತ್ತೆ, ಆತ್ಮಹತ್ಯೆ ಸುದ್ದಿಯಿಂದಾಗಿ ಜಿಲ್ಲೆಗೆ ಬರಸಿಡಿಲು ಬಡಿದಂತಾಗಿದ್ದು, ಅವರು ಕ್ಷೇಮವಾಗಿದ್ದಾರೆಂಬ ಸುದ್ದಿ ಬರಲಿ ಎಂದು ಜನತೆ ಆಶಿಸುತ್ತಿದ್ದಾರೆ.
ಬಿ.ಎಲ್.ಶಂಕರ್, ಟಿಡಿ ರಾಜೇಗೌಡ, ಮೋಟಮ್ಮ, ಸಿಟಿ ರವಿ, ನಿಂಗಯ್ಯ, ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಕೆಶಿಯಂತಹ ರಾಜಕಾರಣಿಗಳು ಇವರ ಕುಟುಂಬದ ಆಪ್ತರಾಗಿದ್ದು, ಸಿದ್ದಾರ್ಥ ಅವರ ಪತ್ತೆಗೆ ಶ್ರಮಿಸುತ್ತಿದ್ದಾರೆಂದು ತಿಳಿದು ಬಂದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications