ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆ ನಿಲ್ಲಲೆಂದು ಋಷ್ಯಶೃಂಗನ ಮೊರೆ ಹೋದ ಮಲೆನಾಡಿಗರು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಸೆಪ್ಟೆಂಬರ್ 9: ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ತಿಂಗಳ ಹಿಂದಷ್ಟೇ ಕಾಣಿಸಿಕೊಂಡು ಪ್ರವಾಹ ಸೃಷ್ಟಿಸಿ ಆತಂಕ, ಅನಾಹುತ ತಂದಿತ್ತಿದ್ದ ಮಳೆ ಇದೀಗ ಎರಡನೇ ಬಾರಿ ಭಯದ ವಾತಾವರಣ ತಂದಿತ್ತಿದೆ.

ಕರ್ನಾಟಕದಲ್ಲಿ ಮತ್ತೆ ಮೂರು ದಿನ ಭಾರಿ ಮಳೆ ಮುನ್ಸೂಚನೆಕರ್ನಾಟಕದಲ್ಲಿ ಮತ್ತೆ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಮಳೆ ಸೃಷ್ಟಿಸಿದ್ದ ಅವಾಂತರಕ್ಕೆ ನಲುಗಿ ಹೋಗಿದ್ದ ಚಿಕ್ಕಮಗಳೂರು ಜಿಲ್ಲೆಯ ಜನರು ದಿಕ್ಕೇ ತೋಚದಂತಾಗಿದ್ದಾರೆ. ಮಳೆ ಬಾರದೇ ಇದ್ದರೆ ಸಾಕು ಎಂದು ಬೇಡಿಕೊಳ್ಳುತ್ತಿದ್ದಾರೆ. ಇಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿರುವ ಕಿಗ್ಗಾದ ಋಷ್ಯಶೃಂಗೇಶ್ವರನಿಗೆ ಅತಿವೃಷ್ಟಿ ತಡೆಯಲು ಪ್ರಾರ್ಥಿಸಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಳೆ; ಉತ್ತರ ಕರ್ನಾಟಕದಲ್ಲಿ ಆರಂಭವಾಗಿದೆ ಪ್ರವಾಹಮಹಾರಾಷ್ಟ್ರದಲ್ಲಿ ಮತ್ತೆ ಮಳೆ; ಉತ್ತರ ಕರ್ನಾಟಕದಲ್ಲಿ ಆರಂಭವಾಗಿದೆ ಪ್ರವಾಹ

ಶಾಸಕರು ಹಾಗೂ ಸ್ಥಳೀಯರ ನೇತೃತ್ವದಲ್ಲಿ ಅತಿವೃಷ್ಟಿ ತಡೆಗೆ ವಿಶೇಷ ಪೂಜೆ ನಡೆಯಿತು, ರುದ್ರಾಭಿಷೇಕ, ಪ್ರಾರ್ಥನೆ ಸಲ್ಲಿಸಲಾಯಿತು.

People Offered Special Puja For Rain God In Kigga

ಕಿಗ್ಗಾದ ಋಷ್ಯಶೃಂಗ ಮಳೆ ದೇವರೆಂದೇ ಖ್ಯಾತಿ. ಕಳೆದ ಬಾರಿಯೂ ಮಳೆ ನಿಲ್ಲಲೆಂದು ಋಷ್ಯಶೃಂಗನಿಗೆ ಅಗಿಲು ಸೇವೆ ಅರ್ಪಿಸಲಾಗಿದ್ದು, ಅಚ್ಚರಿಯ ರೀತಿಯಲ್ಲಿ ಮಳೆ ನಿಂತಿತ್ತು.

English summary
The rain has begun in Chikkamagaluru and a special pooja and prayer has been offered to the Rishyasrungesvara of Kigga in Sringeri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X