Get Updates
Get notified of breaking news, exclusive insights, and must-see stories!

ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳು: ಹಾಡುಗಾರು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

ಚಿಕ್ಕಮಗಳೂರು, ಡಿಸೆಂಬರ್‌, 02: ರಾಜ್ಯ ರಾಜಕೀಯದಲ್ಲಿ ವಿಧಾನಸಭೆಗೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ಮೂರು ಪಕ್ಷಗಳಿಂದಲೂ ಚುನಾವಣೆಗೆ ಸಕಲ ತಯಾರಿಗಳು ನಡೆಯುತ್ತಿದೆ. ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ಎಚ್ಚೆತ್ತುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮುಂದಾಗುತ್ತಿದ್ದಾರೆ. ಆದರೆ ಹಾಳಾಗಿರುವ ರಸ್ತೆಗಳನ್ನು ದುರಸ್ತಿ ಮಾಡದ ಹಿನ್ನೆಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಕೂಗು ಎದ್ದಿದೆ.

ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ತಾಲೂಕಿನ ಜಯಪುರ ಸಮೀಪದ ಹಾಡುಗಾರು ಗ್ರಾಮಲ್ಲಿ 2023ರ ಎಂಎಲ್‌ಎ ಚುನಾವಣೆಯ ಮೊದಲ ಮತದಾನ ಬಹಿಷ್ಕಾರದ ಕೂಗು ಎದ್ದಿದೆ. ರಸ್ತೆ ದುರಸ್ತಿ ಮಾಡದ ಸರ್ಕಾದ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. ಹಾಗಯೇ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಗ್ರಾಮದಲ್ಲಿ ಸಂಪೂರ್ಣ ಕುಸಿಯುವ ಹಂತ ತಲುಪಿರುವ ರಸ್ತೆಯಲ್ಲಿ ಪ್ರತಿನಿತ್ಯ 450ಕ್ಕೂ ಅಧಿಕ ಜನ ಓಡಾಡುತ್ತಲೇ ಇರುತ್ತಾರೆ. ಈ ರಸ್ತೆರನ್ನು ಇದುವರೆಗೂ ದುರಸ್ತಿ ಮಾಡದ ಸರ್ಕಾರ, ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದು, ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ.

ಬಿಜೆಪಿಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ನನ್ನ ಮೇಲೆ ಯಾವುದೇ ರೌಡಿಶೀಟರ್ ಕೇಸ್ ಇಲ್ಲ. ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದಾರೆ. ಅಮಿತ್ ಶಾ ಜೈಲಿಗೆ ಹೋಗಿ ಬಂದಿದ್ದಾರೆ. ಹಾಗೇ ಅನೇಕ ಬಿಜೆಪಿ ಮುಖಂಡರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ವಿರುದ್ಧ ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಕಿಡಿಕಾರಿದ್ದರು. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ನಾನು ರಾಜಕೀಯ ಪ್ರೇರಿತ ದ್ವೇಷದಿಂದಾಗಿ ಜೈಲಿಗೆ ಹೋಗಿದ್ದೇನೆ, ವಿನಃ ಯಾವುದೇ ಭ್ರಷ್ಟಾಚಾರ ಮಾಡಿ ಹೋಗಿಲ್ಲ. ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಮೊದಲು ಅದನ್ನು ಸರಿಮಾಡಿಕೊಳ್ಳಲಿ ಎಂದಿದ್ದರು. ತಿಹಾರ್ ಜೈಲಿ ಹೋಗಿ ಬಂದವರು ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ಬಡ್ತಿ ಪಡೆದಿದ್ದಾರೆ ಎನ್ನುವ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್‌, ರಾಜಕೀಯ ದ್ವೇಷದಿಂದ ಜೈಲಿಗೆ ಹೋಗಿ ಬಂದಿದ್ದೇನೆ. ಭ್ರಷ್ಟಾಚಾರ ಮಾಡಿ ಅಲ್ಲ ಎಂದು ಕಿಡಿಕಾರಿದ್ದರು.

People representatives who do not repair roads: Warn of voting boycott by Hadugaru villagers

ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ

ಹೀಗೆಯೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕಾರಣಿಗಳ ಕೆಸೆರೆರಚಾಟಗಳು ಶುರುವಾಗಿವೆ. ಒಬ್ಬರ ಮೇಲೆ ಒಬ್ಬರು ಆರೋಪಗಳನ್ನು ಮಾಡುತ್ತಾ ಜನರ ಅಭಿವೃದ್ಧಿ ಕಾರ್ಯಗಳನ್ನೇ ಮರೆತುಬಿಟ್ಟಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮಾಡದ ಹಿನ್ನೆಲೆ ಜನರು ಎಚ್ಚೆತ್ತುಕೊಳ್ಳುತ್ತಿದ್ದು, ಮತದಾನವನ್ನೇ ಬಹಿಷ್ಕರಿಸಲು ಮುಂದಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+