ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮದ್ಯ ಸಿಗದೇ ಮೂಡಿಗೆರೆಯಲ್ಲಿ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 03: ಲಾಕ್ ಡೌನ್ ನಡುವೆ ಎಲ್ಲಾ ವ್ಯಾಪಾರ, ಮಳಿಗೆಗಳನ್ನು ಮುಚ್ಚಲಾಗಿದೆ. ಆದರೆ ಈ ಸಮಯದಲ್ಲಿ ಕುಡಿಯಲು ಮದ್ಯ ಸಿಗುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳೂ ನಡೆಯುತ್ತಿವೆ. ಉಡುಪಿ, ಹುಬ್ಬಳ್ಳಿ, ರಾಮನಗರ, ಬೆಳಗಾವಿ, ಕಲಬುರಗಿಯಲ್ಲಿಯೂ ಮದ್ಯ ಸಿಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ನಡೆದಿದ್ದವು.

ಇದೀಗ ಚಿಕ್ಕಮಗಳೂರಿನಲ್ಲೂ ಇದೇ ಕಾರಣಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಡಿಯಲು ಮದ್ಯ ಸಿಗುತ್ತಿಲ್ಲ ಎಂದು ಮನನೊಂದು ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಲಾಕ್ ಡೌನ್: ಬೆಳಗಾವಿಯಲ್ಲಿ ಮದ್ಯ ಸಿಗದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆಲಾಕ್ ಡೌನ್: ಬೆಳಗಾವಿಯಲ್ಲಿ ಮದ್ಯ ಸಿಗದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

ಮೂಡಿಗೆರೆ ನಗರದಲ್ಲಿ ಈ ಘಟನೆ ನಡೆದಿದ್ದು, ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯೋಗೀಶ್ (40) ಎಂಬುವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Person Committed Suicide For Not Getting Alcohol In Mudigere

4 ದಿನಗಳ ಹಿಂದೆಯೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತಗೊಂಡಿದೆ. ಲಾಕ್ ಡೌನ್ ನಂತರ, ಕುಡಿಯಲು ಎಣ್ಣೆ ಸಿಗಲಿಲ್ಲ ಎಂದು ಪರಿಚಿತರ ಬಳಿ ಬೇಸರ ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

English summary
person committed suicide for not getting alchohol in this lock down time in mudigere of chikkamagaluru district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X