ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜೂನ್ 21: ಕರ್ನಾಟಕ, ಕೇರಳ, ಆಂಧ್ರ ಸೇರಿದಂತೆ ವಿವಿಧೆಡೆ ಕಳ್ಳತನ ಮಾಡಿದ್ದ ವ್ಯಕ್ತಿಯೊಬ್ಬನನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಡೂರು ಮೂಲದ ಮಹಮದ್ ಖಾಲಿದ್ ಬಂಧಿತ ವ್ಯಕ್ತಿ. ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹದಿನೇಳು ಕಡೆಗಳಲ್ಲಿ ಕಳ್ಳತನದಲ್ಲಿ ಭಾಗಿಯಾಗಿದ್ದ ಈತ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತನಿಂದ 23,80,000 ಮೌಲ್ಯದ ಚಿನ್ನಾಭರಣವನ್ನು, ಕೃತ್ಯಕ್ಕೆ ಬಳಸಿದ್ದ 5 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

 ವಿದೇಶದಲ್ಲಿದ್ದುಕೊಂಡೇ ಬೆಂಗಳೂರು ಮನೆಗೆ ನುಗ್ಗಿದ ಕಳ್ಳನನ್ನು ಹಿಡಿದ ಟೆಕ್ಕಿ ವಿದೇಶದಲ್ಲಿದ್ದುಕೊಂಡೇ ಬೆಂಗಳೂರು ಮನೆಗೆ ನುಗ್ಗಿದ ಕಳ್ಳನನ್ನು ಹಿಡಿದ ಟೆಕ್ಕಿ

ಆರೋಪಿಯು ಈ ಹಿಂದೆ ಕೇರಳದ ಕಾಸರಗೋಡಿನಲ್ಲಿ ಶ್ರೀಗಂಧದ ಕಳುವು ಹಾಗೂ ರಕ್ತಚಂದನದ ಕಳವು ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ. ಇನ್ನು ಹಲವೆಡೆ ಕಳ್ಳತನ ಮಾಡಿ ಮೈಸೂರಿನಲ್ಲಿ 9 ವರ್ಷ ಜೈಲಿನಲ್ಲಿದ್ದ. ಏಳು ತಿಂಗಳ ಹಿಂದಷ್ಟೇ ಜೈಲಿನಿಂತ ಈತನನ್ನು ಬಿಡುಗಡೆಗೊಳಿಸಲಾಗಿತ್ತು. ಬಿಡುಗಡೆ ನಂತರವೂ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.

Police arrested an interstate thief

ತಲೆ ಮರೆಸಿಕೊಂಡಿರುವ ಇತರ ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡಿರುವ ಪೊಲೀಸರು, ಹುಡುಕಾಟ ಮುಂದುವರೆಸಿದ್ದಾರೆ.

English summary
Police arrested an interstate thief in chikkamagaluru. police seized 23,80,000 worth gold and 5 lakh worth car from him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X