ಕೆಲಸ ಕೊಡಿಸುವುದಾಗಿ 2 ಕೋಟಿ ವಂಚನೆ; ಆ ದುಡ್ಡಲ್ಲಿ ತಿರುಪತಿಗೆ ಕಾಣಿಕೆ!
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದು ವಂಚನೆ ಎಸಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಚಿಕ್ಕಮಗಳೂರು ಪೊಲೀಸರು, ನಕಲಿ ಗುರುತಿನ ಚೀಟಿ ಮತ್ತು ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ವ್ಯಕ್ತಿಯು ಐದು ಜಿಲ್ಲೆಯ, ಸುಮಾರು 31 ಜನರನ್ನು ನಂಬಿಸಿ, ಅವರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವುದಾಗಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅಕ್ಷಯ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ನಾಗರಬಾವಿ ಬೈರವೇಶ್ವರ ನಗರದ ವಾಸಿ ಪ್ರಭಾಕರ್ ಆರೋಪಿಯಾಗಿದ್ದು, ಈತನ ಜೊತೆಗೆ ಕಾರು ಚಾಲಕ ಶಿವರಾಜ್ ನನ್ನು ವಶಕ್ಕೆ ಪಡೆಯಲಾಗಿದೆ.
ಚಿಕ್ಕಮಗಳೂರು ತಾಲ್ಲೂಕಿನ ಚಿಕ್ಕಗೌಜದ ಗ್ರಾಮದ ಉಮೇಶ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದು, ಇವರನ್ನು ಬಂಧಿಸಲಾಗಿದೆ. ಆರೋಪಿಯಿಂದ 36 ಲಕ್ಷ ರೂ, 738.45 ಗ್ರಾಂ ಚಿನ್ನಾಭರಣ, ಇನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. 48 ಅಭ್ಯರ್ಥಿಗಳ ಮೂಲ ದಾಖಲಾತಿಗಳು, ಪ್ರತಿಷ್ಠಿತ ಕಂಪನಿಗಳ ನಕಲಿ ಲೆಟರ್ ಹೆಡ್, 100 ಅಂಚೆ ಇಲಾಖೆ ಖಾಲಿ ಲೆಟರ್ ಹೆಡ್ ಶೀಟ್ ಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಹೀಗೆ ವಂಚನೆ ಮಾಡಿ ಈತ ಸುಮಾರು 2.5 ಕೋಟಿ ರೂ. ಸಂಗ್ರಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಓಡಾಡಲು 15 ಲಕ್ಷ ಬೆಲೆಯ ಇನೋವಾ ಕಾರು, 2.43 ಕೋಟಿ ಬೆಲೆಬಾಳುವ ಹೊಸ ಮನೆ ಖರೀದಿಗೆ 15.25 ಲಕ್ಷ ರೂ. ಮುಂಗಡ ಹಣ ನೀಡಿದ್ದು, 40 ಲಕ್ಷ ರೂ. ಚಿನ್ನಾಭರಣ ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ತನ್ನ ತಪ್ಪನ್ನು ಕ್ಷಮಿಸು ಎಂದು ತಪ್ಪೊಪ್ಪಿಗೆಗಾಗಿ ತಿರುಪತಿಗೆ ವಾರಕ್ಕೊಮ್ಮೆ ಭೇಟಿ ನೀಡಿ, ದೇವರ ಹುಂಡಿಗೆ 5 ಲಕ್ಷ ರೂಪಾಯಿಯನ್ನು ಕಾಣಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.
ಮುಂಗಡ ಹಣ ಪಡೆಯುತ್ತಿದ್ದ ಪ್ರಭಾಕರ್, ಕೆಲಸ ಸಿಕ್ಕಿದ ಮೇಲೆ ಪೂರ್ತಿ ಹಣ ಕೊಡುವಂತೆ ತಿಳಿಸುತ್ತಿದ್ದ. ಹೇಗೋ ನಂಬಿಕೆ ಗಿಟ್ಟಿಸಿಕೊಂಡು ಹಂತ ಹಂತಗಳಲ್ಲಿ ಹಣ ಪಡೆದುಕೊಳ್ಳುತ್ತಿದ್ದ. ಆದರೆ ಉಮೇಶ್ ಎಂಬುವರಿಗೆ ಅನುಮಾನ ಬಂದಿದ್ದು, ಪಿಯು ಬೋರ್ಡಿಗೆ ತೆರಳಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಗೊತ್ತಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಡಿವೈಎಸ್ಪಿ ನೇತೃತ್ವದಲ್ಲಿ ಹತ್ತು ಮಂದಿಯ ತಂಡ ರಚಿಸಲಾಗಿತ್ತು. ಗುರುವಾರ ಈತ ಚಿಕ್ಕಮಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications