ಚಿಕ್ಕಮಗಳೂರು; ಪ್ರಪಾತದಲ್ಲಿ ಬಿದ್ದಿದ್ದ ಟೆಕ್ಕಿ ಶವ ಹೊರತೆಗೆದ ಪೊಲೀಸ್
ಚಿಕ್ಕಮಗಳೂರು, ಡಿಸೆಂಬರ್ 11; ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ರಾಣಿಝರಿ ಜಲಪಾತದ ನಾಪತ್ತೆಯಾಗಿದ್ದ ಟೆಕ್ಕಿ ಭರತ್ ಮೃತದೇಹವನ್ನು ಭಾನುವಾರ ಸಂಜೆ ಪ್ರಪಾತದಿಂದ ಮೇಲಕ್ಕೆ ತೆರಲಾಗಿದೆ. ಸುಮಾರು 4 ಸಾವಿರ ಅಡಿ ಪ್ರಪಾತದಿಂದ ಹಾರಿ ಬೆಂಗಳೂರು ಮೂಲಕ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬೆಂಗಳೂರು ಮೂಲದ ಟೆಕ್ಕಿ ಭರತ್ ಮೃತದೇಹವನ್ನು ಪ್ರಪಾತದಿಂದ ಮೇಲಕ್ಕೆ ತರಲಾಗಿದೆ. ಶನಿವಾರ ಸಂಜೆ ವೇಳೆ ಮೃತದೇಹ ಪತ್ತೆಯಾಗಿದ್ದರೂ ದಟ್ಟಕಾಡು, ಕಾಡುಪ್ರಾಣಿಗಳ ಕಾಟ, ಕತ್ತಲಲ್ಲಿ 4 ಸಾವಿರ ಅಡಿ ಪ್ರಪಾತದಿಂದ ಮೃತದೇಹ ಹೊರತರುವುದು ಕಷ್ಟಸಾಧ್ಯ ಎಂದು ಪೊಲೀಸರು, ಅರಣ್ಯ ಸಿಬ್ಬಂದಿಗಳು ಸೇರಿದಂತೆ ಸ್ಥಳಿಯರು ಕಾರ್ಯಾಚರಣೆ ನಿಲ್ಲಿಸಿದ್ದರು.

ಭಾನುವಾರ ಕಾರ್ಯಚರಣೆ; ಭಾನುವಾರ ರಾಣಿಝರಿ ಜಲಪಾತದ ಕಡೆಯಿಂದ ಪ್ರಪಾತಕ್ಕೆ ಇಳಿದ 25 ಜನರ ತಂಡ ಹರಸಾಹಸಪಟ್ಟು ಮೃತದೇಹವನ್ನು ಮೇಲಕ್ಕೆ ತಂದಿದ್ದಾರೆ. 4 ಸಾವಿರ ಅಡಿಯ ಪ್ರಪಾತದಿಂದ ಮೃತದೇಹವನ್ನ ತರುವುದು ಅಷ್ಟು ಸುಲಭವಲ್ಲ.
ಆದರೆ 25 ಜನರ ತಂಡ ಸುಮಾರು 5 ಕಿ. ಮೀ. ಮೃತದೇಹವನ್ನು ಹೊತ್ತು ತಂದು ತೀರಾ ಕಡಿದಾದ ಪ್ರದೇಶದಲ್ಲಿ ಮರದಿಂದ ಮರಕ್ಕೆ ಹಗ್ಗ ಕಟ್ಟಿಕೊಂಡು ಮೃತದೇಹ ಹೊತ್ತುಕೊಂಡು ಹಗ್ಗದ ಮೂಲಕ ಬೆಟ್ಟ ಹತ್ತಿದ್ದಾರೆ.
ರಾಣಿಝರಿ ವ್ಯೂ ಪಾಯಿಂಟ್ನಿಂದ ಮೃತದೇಹವಿದ್ದ 4 ಸಾವಿರ ಅಡಿ ಪ್ರಪಾತಕ್ಕೆ ಸುಮಾರು 14 ಕಿ. ಮೀ. ಆಗಲಿದೆ. ಸ್ಥಳೀಯರು, ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮೇತದೇಹವನ್ನು ಹರಸಾಹಸಪಟ್ಟು ಮೇಲಕ್ಕೆ ತಂದರು. ಭರತ್ ಮೃತದೇಹ ಸಂಪೂರ್ಣ ಛಿದ್ರವಾಗಿತ್ತು. ತಂಪಾದ ವಾತಾವರಣದಿಂದ ಕೊಳೆತು ಹೋಗಿತ್ತು.
ಮೃತದೇಹವನ್ನು ಅದು ಸಿಕ್ಕ ಜಾಗದಲ್ಲಿಯೇ ಪ್ಯಾಕ್ ಮಾಡಿ ಕಡಿದಾದ ಬೆಟ್ಟವನ್ನು ಹತ್ತಿ ಮೇಲಕ್ಕೆ ತಂದಿದ್ದಾರೆ. ಟೆಕ್ಕಿ ಭರತ್ ನಾಪತ್ತೆ ಕುರಿತು ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಸೆಂಬರ್ 6ರಂದು ಚಿಕ್ಕಮಗಳೂರು ಜಿಲ್ಲೆಯ ರಾಣಿಝರಿ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಆತ ತನ್ನ ಮೊಬೈಲ್, ಬೈಕ್, ಐಡಿ ಕಾರ್ಡ್, ಬಟ್ಟೆಯನ್ನು ಗುಡ್ಡದ ತುದಿಯಲ್ಲಿ ಬಿಟ್ಟು ನಾಪತ್ತೆಯಾಗಿದ್ದ.
ಯಾರ ಸಂಪರ್ಕಕ್ಕೂ ಆತ ಸಿಗುತ್ತಿಲ್ಲ ಎಂದು ಮೂರು ದಿನಗಳ ಬಳಿಕ ಅವರ ಕುಟುಂಬಸ್ಥರು ಪ್ರಕರಣ ದಾಖಲಿಸಿ ಹುಡುಕಲು ಮುಂದಾಗಿದ್ದರು. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಧರ್ಮಸ್ಥಳ ವಿಪತ್ತು ನಿರ್ವಹಣ ತಂಡ, ಬಣಕಲ್ ಸಮಾಜ ಸೇವಕ ಆರೀಫ್ ಮತ್ತು ಅವರ ಸ್ನೇಹಿತರು ಭರತ್ ಶೋಧ ಕಾರ್ಯದಲ್ಲಿ ತೊಡಗಿದ್ದರು. ಡ್ರೋಣ್ ಕ್ಯಾಮರಾಗಳನ್ನು ಬಳಸಿಯೂ ಶೋಧ ನಡೆಸಲಾಗಿತ್ತು. ಶನಿವಾರ ಭರತ್ ಮೃತಪಟ್ಟಿರುವುದು ತಿಳಿದಿತ್ತು.
ಬೆಂಗಳೂರಿನಲ್ಲಿ ಎಂಎನ್ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕೆಲಸ ಕಳೆದುಕೊಂಡಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಕಾನೂನು ಪ್ರಕ್ರಿಯೆಗಳ ಬಳಿಕ ಶವವನ್ನು ಕುಟುಂಬಸ್ತರಿಗೆ ಹಸ್ತಾಂತರ ಮಾಡಲಾಗುತ್ತದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications