ಚಿಕ್ಕಮಗಳೂರಿನಲ್ಲಿ 51ಕ್ಕೂ ಹೆಚ್ಚು ಬಂದೂಕುಗಳು ಪೊಲೀಸರ ವಶಕ್ಕೆ, ಈ ನಿರ್ಧಾರ ಏಕೆ?
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 51ಕ್ಕೂ ಹೆಚ್ಚು ಬಂದೂಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು, ಫೆಬ್ರವರಿ, 24: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ, ಮತ್ತು ಪರವಾನಗಿ ಇದ್ದವರ ಬಳಿಯೂ 51ಕ್ಕೂ ಹೆಚ್ಚು ಬಂದೂಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಾಗಾದರೆ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದು ಯಾಕೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇತ್ತೀಚಿಗೆ ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಬಿದಿರೆ ಗ್ರಾಮದಲ್ಲಿ ರಮೇಶ್ ಎಂಬಾತ ಬದೂಕಿನಿಂದ ಗುಂಡು ಹಾರಿಸಿದ್ದು, ಇದರ ಪರಿಣಾಮ ಬೈಕ್ನಲ್ಲಿ ಹೋಗುತ್ತಿದ್ದ ಸಹೋದರಿಬ್ಬರು ಮೃತಪಟ್ಟಿದ್ದರು. ಈ ಘಟನೆ ಎಚ್ಚೆತ್ತ ಪೊಲೀಸ್ ಇಲಾಖೆ ಅಕ್ರಮ ಬಂದೂಕುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬಂದೂಕುಗಳನ್ನು ವಶಪಡಿಸಿಕೊಂಡಿದ್ದು ಏಕೆ?
ಘಟನೆಯಲ್ಲಿ ಪ್ರವೀಣ್ ಹಾಗೂ ಪ್ರಕಾಶ್ ಮೃತರಾಗಿದ್ದರು. ಘಟನೆಯ ಬಳಿಕ ಕಾರ್ಯ ಪ್ರವೃತ್ತವಾದ ಪೊಲೀಸ್ ಇಲಾಖೆ ಪರವಾನಿಗೆ ಹೊಂದಿರುವ 10 ಬಂದೂಕು ಸೇರಿದಂತೆ ಪರವಾನಿಗೆ ರಹಿತ 41 ಬಂದೂಕು, ಎರಡು ರಿವಾಲ್ವಾರ್ಗಳು ವಶಕ್ಕೆ ಪಡೆದಿದೆ. ಹಾಗೂ ಈ ಸಂಬಂಧ 3 ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ತಿಳಿಸಿದ್ದಾರೆ.
ಎಲ್ಲೆಲ್ಲಿ ಎಷ್ಟು ಬಂದೂಕುಗಳ ವಶ?
ಈ ಸಂಬಂಧ ಬಾಳೆಹೊನ್ನೂರಿನಲ್ಲಿ ಎರಡು, ಬಾಳೂರು ಒಂದು, ಕಳಸ ಎರಡು ಹಾಗೂ ನರಸಿಂಹರಾಜಪುರ ತಾಲೂಕಿನಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಬಾಳೆಹೊನ್ನೂರಿನಲ್ಲಿ 17, ಬಾಳೂರು 21, ಕಳಸ 2 ಹಾಗೂ ನರಸಿಂಹರಾಜಪುರ ತಾಲೂಕಿನಲ್ಲಿ 1 ಬಂದೂಕು ಸೇರಿದಂತೆ ಒಟ್ಟು 41 ಬಂದೂಕು ಹಾಗೂ ಬಾಳೂರಿನಲ್ಲಿ ಎರಡು ರಿವಲ್ವಾರ್ ಪರವಾನಿಗೆ ಪಡೆಯದಿರುವುದು ಬೆಳಕಿಗೆ ಬಂದಿದೆ. ಒಟ್ಟು 51 ಬಂದೂಕು, ಎರಡು ರಿವಲ್ವಾರ್ಗಳನ್ನು ವಶಕ್ಕೆ ಪಡೆಯಲಾಗಿದೆ.
ದಾಳಿ ವೇಳೆ ಬಾಳೆಹೊನ್ನೂರಿನಲ್ಲಿ 2, ಬಾಳೂರು 8 ಪರವಾನಿಗೆ ಹೊಂದಿರುವ ಬಂದೂಕುಗಳು ಪತ್ತೆಯಾಗಿವೆ. ಬಾಳೆಹೊನ್ನೂರು ಮತ್ತು ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂದೂಕು ದುರಸ್ಥಿಪಡಿಸುವ ಸ್ಥಳದ ಮೇಲೆ ದಾಳಿ ನಡೆಸಲಾಗಿತ್ತು.

ಬಂದೂಕು ದುರಸ್ಥಿ ಪಡಿಸುತ್ತಿದ್ದ ಕೊಪ್ಪ ತಾಲೂಕು ಅಡುಗೆಬೈಲ್ ಗ್ರಾಮದ ನೇತ್ರಕೊಂಡ ಕೂಲಿ ಲೈನ್ನಲ್ಲಿ ವಾಸವಾಗಿದ್ದ ಸದಾಶಿವಚಾರಿ, ಮೂಡಿಗೆರೆ ತಾಲೂಕು ಬಾಳೂರು ಹೋಬಳಿ ಕೆಳಗೂರು ಗ್ರಾಮದ ಸುಧಾಕರ್ ಆಚಾರ್, ಬಾಳೆಹೊನ್ನೂರು ಪಟ್ಟಣದ ರಂಭಾಪುರಿ ಮಠ ರಸ್ತೆ ನಿವಾಸಿ ರಾಮಚಂದ್ರಚಾರಿ ಅವರನ್ನು ವಶಕ್ಕೆಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications