ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿ.ಹೊಸಹಳ್ಳಿಯಲ್ಲಿ ಹಕ್ಕುಪತ್ರಕ್ಕಾಗಿ ಬಡಕುಟುಂಬ ಗೋಳಾಟ, ಕಣ್ಮುಚಿ ಕುಳಿತ ಅಧಿಕಾರಿಗಳು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್‌, 11: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿ.ಹೊಸಹಳ್ಳಿ ಗ್ರಾಮದ ಬಡಕುಟುಂಬವೊಂದು ಹಕ್ಕುಪತ್ರಕ್ಕಾಗಿ ಅಲೆದಾಡಿ ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಬಿ.ಹೊಸಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಪ್ರಸನ್ನ ಎಂಬುವವರ ಕುಟುಂಬವು ಗುಡಿಸಲಿನಲ್ಲಿ ವಾಸವಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೆ ನಂಬರ್‌ 38ರಲ್ಲಿ ಆಶ್ರಯ ನಿವೇಶನಕ್ಕಾಗಿ ಜಾಗವನ್ನು ಮೀಸಲಿಟ್ಟಿದ್ದರರು. ಮೀಸಲಿಟ್ಟ ನಿವೇಶನದ ಹಕ್ಕುಪತ್ರ ಬಿ.ಹೊಸಹಳ್ಳಿ ಗ್ರಾಮ ಪಂಚಾಯತ್‍ನಲ್ಲಿದೆ. ಆದರೂ ಕೂಡ 2019ರಿಂದ ಹಕ್ಕುಪತ್ರ ನೀಡುತ್ತಿಲ್ಲ ಎಂದು ಪ್ರಸನ್ನ ಆರೋಪಿಸಿದ್ದಾರೆ.

ಹಕ್ಕುಪತ್ರಕ್ಕಾಗಿ ಪ್ರಸನ್ನ ಗೋಳಾಟ

2022ರ ಸೆಪ್ಟೆಂಬರ್‌ 6ರಂದು ಬಿ.ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಟ್ಯಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಪ್ರಸನ್ನ ಅವರ ಪತ್ನಿ ಪಾರ್ವತಿ ಮೃತಪಟ್ಟಿದ್ದರು. ಸದ್ಯ ಪ್ರಸನ್ನ ತಮ್ಮ10 ವರ್ಷದ ಮಗನೊಂದಿಗೆ ಗುಡಿಸಲಿನಲ್ಲಿ ವಾಸವಾಗಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳ ಬಳಿ ಹಲವು ಬಾರಿ ಹಕ್ಕುಪತ್ರ ನೀಡುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ.

ದಂಬದಹಳ್ಳಿಯಲ್ಲಿ ಜಾದು ಕಾರ್ಯಕ್ರಮ: ಮೌಢ್ಯದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿದಂಬದಹಳ್ಳಿಯಲ್ಲಿ ಜಾದು ಕಾರ್ಯಕ್ರಮ: ಮೌಢ್ಯದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ

ಹಕ್ಕುಪತ್ರ ನೀಡದೇ ಇರುವುದರಿಂದ ಪ್ರಸನ್ನ ಅಕ್ಟೋಬರ್‌ 8ರಂದು ಆತ್ಮಹತ್ಯೆಗೆ ಯತ್ನಿಸಿದ್ದರೆಂದು ತಿಳಿದುಬಂದಿದೆ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಸಂದರ್ಭದಲ್ಲಿ ಇದನ್ನು ಗಮನಿಸಿದ ಸಂಬಂಧಿಕರಾದ ದೇವರಾಜ್ ಹಾಗೂ ಜ್ಯೋತಿ ಎಂಬವರು ಪ್ರಸನ್ನನನ್ನು ಕಾಪಾಡಿದ್ದರು. ಮೂಡಿಗೆರೆ ಹಾಗೂ ಹಾಸನದ ಆಸ್ಪತ್ರೆಗೆ ಸೇರಿಸಿ ಪ್ರಸನ್ನನ ಪ್ರಾಣವನ್ನು ಉಳಿಸಿದ್ದರು.

Poor family from B Hosahalli seeks house ownership letter from Gram Panchayat

ಹಕ್ಕುಪತ್ರ ಕೊಡುವುದಾಗಿ ಭರವಸೆ

ಬಳಿಕ ಸಂತ್ರಸ್ಥರು ಜಿಲ್ಲಾಧಿಕಾರಿ ಹಾಗೂ ಶಾಸಕರ ಬಳಿ ಹೋಗಿ ಹಕ್ಕು ಪತ್ರ ಕೊಡುವಂತೆ ಮನವಿ ಮಾಡಿದ್ದರು. ಆದರೂ ಕೂಡ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಲಾಗುತ್ತಿದೆ. ಪತ್ನಿಯನ್ನು ಕಳೆದುಕೊಂಡು ಮಗನೊಂದಿಗೆ ಗುಡಿಸಲಿನಲ್ಲಿ ವಾಸಿಸುತ್ತಿರುವ ಪ್ರಸನ್ನ ಕುಟುಂಬ ಹಕ್ಕುಪತ್ರದ ನಿರೀಕ್ಷೆಯಲ್ಲಿ ಬದುಕು ಸಾಗಿಸುತ್ತಿದೆ. ಕೆಲ ತಿಂಗಳ ಹಿಂದೆ ಹಕ್ಕುಪತ್ರ ವಿತರಣೆ ಸಂದರ್ಭದಲ್ಲಿ ಗಲಾಟೆ ಆಗಿದ್ದು, ಹಕ್ಕುಪತ್ರ ವಿತರಣೆಯಾಗಲಿಲ್ಲ.

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಸಿ.ಟಿ.ರವಿ ಸಖತ್‌ ಸ್ಟೆಪ್ಸ್‌ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಸಿ.ಟಿ.ರವಿ ಸಖತ್‌ ಸ್ಟೆಪ್ಸ್‌

ನಿವೇಶನಕ್ಕೆ ಗುರುತಿಸಿದ್ದ ಜಾಗದ ಸರ್ವೆ ಕಾರ್ಯ ನಡೆಯಬೇಕಿತ್ತು. ಇದೀಗ ಸರ್ವೆ ಕಾರ್ಯ ಆದೊಡನೇ ಹಕ್ಕುಪತ್ರ ವಿತರಿಸಲಾಗುವುದು ಎಂದು ಗ್ರಾಮ ಪಂಚಾಯತಿ ಪಿಡಿಒ ಸಿಂಚನಾ ತಿಳಿಸಿದ್ದಾರೆ. ಸೋಮವಾರ ಸರ್ವೆ ಕಾರ್ಯ ನಡೆಯಲಿದ್ದು, ಸರ್ವೆ ಕಾರ್ಯ ಪೂರ್ಣಗೊಂಡ ಮೇಲೆ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಮೂಡಿಗೆರೆ ತಹಶೀಲ್ದಾರ್ ನಾಗರಾಜ್ ಭರವಸೆ ನೀಡಿದ್ದಾರೆ.

English summary
Poor family member Prasanna in B Hosahalli of Mudigere taluk is seeking House ownership letter from Gram Panchayat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X