ಶೃಂಗೇರಿಯಲ್ಲಿ ಪೌರ ಕಾರ್ಮಿಕರ ಮುಷ್ಕರ, ಪಟ್ಟಣದಲ್ಲಿ ಕಸದ ರಾಶಿ
ಚಿಕ್ಕಮಗಳೂರು, ಡಿಸೆಂಬರ್ 11; ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಪೌರ ಕಾರ್ಮಿಕರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಕೆಲಸ ನಿಲ್ಲಿಸಿ 6 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಾರಣ ಶೃಂಗೇರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಕಂಡುಬರುತ್ತಿದೆ.
ಶೃಂಗೇರಿ ಪಟ್ಟಣ ಪಂಚಾಯಿತಿ ವಿರುದ್ಧ ತಿರುಗಿ ಬಿದ್ದ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಶ್ರೀ ಶಾರದಾಂಬೆ ದೇವಾಲಯದ ಸುತ್ತಮುತ್ತ ಸೇರಿದಂತೆ ಪಟ್ಟಣದಾದ್ಯಂತ ಕಸದ ರಾಶಿಯೇ ಕಾಣುತ್ತಿದೆ.

ಪೌರ ಕಾರ್ಮಿಕರ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಪೌರ ಕಾರ್ಮಿಕರು ಕೆಲಸ ಖಾಯಂಗೊಳಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ ಇದಾಗಿದೆ. ಆದರೆ ಶೃಂಗೇರಿ ಪಟ್ಟಣ ಪಂಚಾಯಿತಿ ಕಾರ್ಮಿಕರ ಬೇಡಿಕೆ ಈಡೇರಿಕೆ ಕುರಿತು ಯಾವುದೇ ಭರವಸೆಯನ್ನು ನೀಡಿಲ್ಲ.
ಸ್ಪಂದಿಸದ ಆಡಳಿತ; 6 ದಿನಗಳಿಂದ ಶೃಂಗೇರಿ ಪಟ್ಟಣದಲ್ಲಿ ಕಸ ಸಂಗ್ರಹವನ್ನು ಪೌರ ಕಾರ್ಮಿಕರು ಸ್ಥಗಿತಗೊಳಿಸಿದ್ದಾರೆ. ಪೌರ ಕಾರ್ಮಿಕರ ಮುಷ್ಕರದಿಂದಾಗಿ ಬಸ್ ನಿಲ್ದಾಣ ಸೇರಿದಂತೆ ಪಟ್ಟಣ ರಸ್ತೆಯ ತುಂಬೆಲ್ಲ ಕಸದ ರಾಶಿಯೇ ಸೇರಿದೆ. ಇದರಿಂದಾಗಿ ಶೃಂಗೇರಿಯ ದೇವಾಲಯಕ್ಕೆ ಬರುವ ಭಕ್ತರು ಸಹ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.
ಪಟ್ಟಣದ ದೇವಾಲಯಕ್ಕೆ ಆಗಮಿಸುತ್ತಿರುವ ಸಾವಿರಾರು ಪ್ರವಾಸಿಗರು, ಭಕ್ತರು ಕಸದ ರಾಶಿಯನ್ನು ಕಂಡು ರಸ್ತೆಯಲ್ಲಿ ಓಡಾಟ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪೌರ ಕಾರ್ಮಿಕರು ಮುಷ್ಕರ ನಡೆಸಿದರೂ ಸ್ಪಂದಿಸದ ಪಟ್ಟಣ ಪಂಚಾಯಿತಿ, ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ನೌಕರರು ಅಸಮಾಧಾನ ಹೊರಹಾಕಿದ್ದಾರೆ.
2022ರಲ್ಲಿಯೂ ಪೌರ ಕಾರ್ಮಿಕರು ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸಿದ್ದರು. ಕಳೆದ 20 ವರ್ಷಗಳಿಂದ ಪೌರ ಕಾರ್ಮಿಕರು, ಚಾಲಕರು, ನೀರು ಸರಬರಾಜು ಹಾಗೂ ಡಾಟಾ ಎಂಟ್ರಿ ಆಪರೇಟರ್ಗಳು ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಇವರಿಗೆ ಉದ್ಯೋಗ ಭದ್ರತೆ ನೀಡಬೇಕು. ಗುತ್ತಿಗೆ ಆಧಾರದ ಮೇಲೆ ನೀತಿಯನ್ನು ರದ್ದುಗೊಳಿಸಿ ಅವರನ್ನು ಖಾಯಂಗೊಳಿಸಬೇಕು ಎಂದು ನೌಕರರು ಒತ್ತಾಯಿಸಿದ್ದರು. ಆಗ ಶಾಸಕರು ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ, ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications