ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದ ಪಿಯುಸಿ ವಿದ್ಯಾರ್ಥಿಗಳು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿಸೆಂಬರ್ 14: ಒಬ್ಬೊರಿಗೊಬ್ಬರು ಜಗಳವಾಡಿಕೊಂಡು ಪಿಯುಸಿ ವಿದ್ಯಾರ್ಥಿಗಳು ಇಬ್ಬರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದಿರುವ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸಂತೇ ಮೈದಾನದಲ್ಲಿ ಘಟನೆ ನಡೆದಿದ್ದು, ವಿನಯ್ ಹಾಗೂ ಗಾಯನ್ ಚಾಕು ಇರಿತಕ್ಕೊಳಗಾದವರು.

ಪೊಲೀಸರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ವ್ಯಕ್ತಿಗೆ ಗುಂಡೇಟುಪೊಲೀಸರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ವ್ಯಕ್ತಿಗೆ ಗುಂಡೇಟು

Puc Students Stabbed Two Other Students In Mudigere

ಕಾಲೇಜಿನಿಂದ ಹಿಂದಿರುಗುವಾಗ ಈ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿದೆ. ಅದು ಗಲಾಟೆ ಮಟ್ಟಕ್ಕೆ ಹೋಗಿದ್ದು, ಸಾಗರ್ ಹಾಗೂ ಚೇತನ್ ಎಂಬುವವರು ವಿನಯ್ ಹಾಗೂ ಗಾಯನ್ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾರೆ. ಮುಖದ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ಎಲ್ಲರೂ ಪ್ರಥಮ ಹಾಗೂ ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ವಿದ್ಯಾರ್ಥಿಗಳ ಬೈಕಿನಲ್ಲಿದ್ದ ಚಾಕು, ಸೈಕಲ್ ಚೈನ್ ಅನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿಚಾರಣೆ ಸಾಗಿದೆ.

English summary
An incident where two PUC students stabbed other two students with a knife while quarreling in Chikkamagaluru today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X