ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ
ಚಿಕ್ಕಮಗಳೂರು, ಆಗಸ್ಟ್ 05: ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಎರಡು ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಇಂದು ಸಂಜೆ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು, ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿದೆ.
Recommended Video
Kabini
Reservoir
ಪ್ರದೇಶದಲ್ಲಿ
ಭಾರೀ
ಮಳೆ;
ಒಳಹರಿವು
ಏರಿಕೆ
|
Oneindia
Kannada
ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದ ಪರಿಣಾಮ ಭಾರೀ ಪ್ರಮಾಣದ ಮಣ್ಣಿನೊಂದಿಗೆ ಬೃಹತ್ ಬಂಡೆಗಳು ರಸ್ತೆಯಲ್ಲಿ ಬಿದ್ದಿವೆ. ಗುಡ್ಡ ಕುಸಿಯುತ್ತಿದ್ದಂತೆ ಕೊಟ್ಟಿಗೆ ಹಾರದಲ್ಲಿ ಪೊಲೀಸರು ವಾಹನಗಳನ್ನು ಘಾಟ್ ಪ್ರವೇಶಿಸದಂತೆ ತಡೆದು ನಿಲ್ಲಿಸುತ್ತಿದ್ದಾರೆ.
ಚಿಕ್ಕಮಗಳೂರಿನ ಎರಡು ತಾಲೂಕಿನಲ್ಲಿ ಮುಂದಿನ 48 ಗಂಟೆ ರೆಡ್ ಅಲರ್ಟ್
ಜೊತೆಗೆ ಮಳೆಯಿಂದಾಗಿ 6 ಎಕರೆ ಬಾಳೆ ತೋಟ ಸಂಪೂರ್ಣ ನಾಶವಾಗಿರುವ ವರದಿಯಾಗಿದೆ. ಮೂಡಿಗೆರೆ ತಾಲೂಕಿನ ಕೆಂಬತ್ ಮಕ್ಕಿಯಲ್ಲಿ ರಾಜಣ್ಣ ಎಂಬುವವರಿಗೆ ಸೇರಿದ 9 ಸಾವಿರ ಬಾಳೆ ಗಿಡಗಳು ಬಿರುಗಾಳಿ ಸಹಿತ ಮಳೆಗೆ ನಾಶವಾಗಿವೆ.
Comments
English summary
Rain continues in chikkamagaluru district and villupuram mangaluru highway closed as landslide happened in charmadi ghat