ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ನಿರಂತರ ಮಳೆಗೆ ಮರ, ಕಂಬಗಳು ರಸ್ತೆಪಾಲು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ | Oneindia Kannada

ಚಿಕ್ಕಮಗಳೂರು, ಜೂನ್ 13: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದು, ಮೂಡಿಗೆರೆ, ಕಳಸ ಹಾಗೂ ಬಾಳೆಹೊನ್ನೂರು ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

 ಬತ್ತಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟದಲ್ಲಿ ಹರಿದಿದೆ ನೀರು ಬತ್ತಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟದಲ್ಲಿ ಹರಿದಿದೆ ನೀರು

ಎರಡು ದಿನದಿಂದ ನಿರಂತರವಾಗಿ ಸುರಿದ ಮಳೆಯಿಂದ ಮಲೆನಾಡಿನ ಕುಗ್ರಾಮಗಳ ರಸ್ತೆಗಳು ಓಡಾಡದಂತಾಗಿವೆ. ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ. ಮೇಗಲ್ ಗ್ರಾಮದಲ್ಲಿ ಕೆಸರು ತುಂಬಿದ್ದ ರಸ್ತೆಯಲ್ಲಿ ಬಸ್ ಸಿಕ್ಕಿಕೊಂಡು ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಸುಮಾರು ಒಂದು ಗಂಟೆಗೂ ಅಧಿಕ ಹೊತ್ತು ಪರದಾಡಿದ್ದಾರೆ.

rain in chikkamagaluru brings disruption for life

ಕೊನೆಗೆ ಜಿಬ್ಸಿಗೆ ಬಸ್ಸನ್ನುಕಟ್ಟಿ, ಸ್ಥಳಿಯರ ಸಹಕಾರದೊಂದಿಗೆ ಎಳೆಯಲಾಯ್ತು. ಮೂಡಿಗೆರೆ ತಾಲ್ಲೂಕಿನ ಜಾವಳಿ ಸಮೀಪ ನಿರಂತರ ಮಳೆಯಿಂದ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಕಳೆದ ಮೂರು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು, ಜನ ಕತ್ತಲಲ್ಲಿ ಬದುಕುವಂತಾಗಿದೆ.

English summary
Though rain decreased in chikkamagaluru district, the effects are countless. Some disruptions happen in mudigere, kalasa and balehonnuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X