ಕೊರೊನಾ ಭೀತಿ: ಚಿಕ್ಕಮಗಳೂರು ಪ್ರವಾಸಕ್ಕೆ ಜಿಲ್ಲಾಧಿಕಾರಿಯಿಂದ ನಿರ್ಬಂಧ

ಚಿಕ್ಕಮಗಳೂರು, ಜೂನ್ 29: ಮಹಾಮಾರಿ ಕೊರೊನಾ ವೈರಸ್ ಆತಂಕವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ತಮ್ಮ ಪ್ರವಾಸ ರದ್ದುಪಡಿಸುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶಿಸಿದ್ದಾರೆ.

Recommended Video

      Bengaluru Corona Stats : ಇನ್ನೂ ಬೆಂಗಳೂರಲ್ಲಿ ಬದುಕೋದು ತುಂಬಾ ಕಷ್ಟ | Oneindia Kannada

      ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದರು. ವಿವಿಧ ಸಂಘಟನೆಗಳು ಮತ್ತು ಜನಪ್ರತಿನಿಧಿಗಳು ನಿರ್ಬಂಧಕ್ಕೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕ್ರಮ ಕೈಗೊಂಡು ಆದೇಶ ಹೊರಡಿಸಿದ್ದಾರೆ.

      ಪ್ರವಾಸಿಗರು ಕೊರೊನಾ‌ ವೈರಸ್ ನಿಯಮ‌ ಪಾಲಿಸದ ಹಿನ್ನೆಲೆ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ, ದೇವಿರಮ್ಮ ಬೆಟ್ಟ ಸೇರಿದಂತೆ ಜಿಲ್ಲೆಯ ಪ್ರಮುಖ‌ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

      Restriction For Chikkmagaluru Trip: DC Order

      ಭಾನುವಾರ ಸಾವಿರಾರು ಜನ ಚಿಕ್ಕಮಗಳೂರಿನ ಗಿರಿ ಪ್ರದೇಶಕ್ಕೆ ಆಗಮಿಸಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ನಿರ್ಬಂಧ ಹೇರಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+