ಭದ್ರೆಯ ಒಡಲಲ್ಲಿ ಮೈನವಿರೇಳಿಸುವ ರಾಫ್ಟಿಂಗ್; ನೀವು ಹೋಗೋದು ಯಾವಾಗ?
ಚಿಕ್ಕಮಗಳೂರು, ಸೆಪ್ಟೆಂಬರ್ 30: ಚಿಕ್ಕಮಗಳೂರಿನಲ್ಲಿ ಸಾಮಾನ್ಯವಾಗಿ ಕಾರು rally ನಡೆಯುತ್ತಿತ್ತು. ಇದೀಗ ರಿವರ್ ರಾಫ್ಟಿಂಗ್ ಕೂಡ ಇಲ್ಲಿ ಜನಪ್ರಿಯವಾಗುತ್ತಿದೆ. ವರುಣನ ರುದ್ರನರ್ತನದ ಬಳಿಕ ಕಾಫಿನಾಡು ಶಾಂತಗೊಂಡಿದ್ದು, ಸಾಧಾರಣ ಮಳೆಯಾಗುತ್ತಿದೆ. ನದಿ, ಹಳ್ಳ-ತೊರೆಗಳು ಮೈದುಂಬಿ ಹರಿಯುತ್ತಿವೆ. ಅಪಾಯದ ಮಟ್ಟವಲ್ಲದಿದ್ದರೂ ಮೈದುಂಬಿ ಹರಿಯುತ್ತಿರುವ ಭದ್ರೆಯ ಒಡಲಿನಲ್ಲಿ ಸಾಹಸಮಯ ರಾಫ್ಟಿಂಗ್ ಕೂಡ ರೋಮಾಂಚನಕಾರಿಯಾಗಿರಲಿದೆ. ಮೈ ನವಿರೇಳಿಸುವ ಈ ಸಾಹಸದಲ್ಲಿ ಪಾಲ್ಗೊಳ್ಳಲು ಪ್ರವಾಸಿಗರೂ ಮುಗಿ ಬೀಳುತ್ತಿದ್ದಾರೆ.
ಈ ಮೈದುಂಬಿ ಹರಿಯುತ್ತಿರುವ ಭದ್ರೆಯ ಒಡಲಲ್ಲಿ ಸಾಹಸಮಯ ರಾಫ್ಟಿಂಗ್ ನಡೆಸುವುದೇ ಒಂದು ಮಜಾ. ಜಿಲ್ಲೆಯಲ್ಲಿ ಸುಮಾರು 300 ಕಿ.ಮೀ. ವ್ಯಾಪ್ತಿಯಲ್ಲಿ ವೇಗವಾಗಿ ಭದ್ರೆ ಹರಿಯುತ್ತಾಳೆ. ಮಳೆಗಾಲದಲ್ಲಿ ಮೂಡಿಗೆರೆ ತಾಲೂಕಿನ ಬಾಳೆಹೊಳೆ ಬಳಿ ಕಳೆದ ಹತ್ತು ವರ್ಷಗಳಿಂದ ರಾಫ್ಟಿಂಗ್ ನಡೆಯುತ್ತಿದೆ. ಪ್ರವಾಹದಂತೆ ಹರಿಯುವ ಭದ್ರೆ ನದಿಯಲ್ಲಿ ಬೋಟ್ ಮೇಲೆ ಕೂತು ಇಳಿಜಾರಿನಲ್ಲಿ ಧುಮ್ಮಿಕ್ಕುವುದೇ ರೋಮಾಂಚನ.

ಜಿಲ್ಲೆಯ ಏಸ್ ಪ್ಯಾಡಲರ್ರ್ಸ್ ಸಂಸ್ಥೆ ಮೊದಲ ಬಾರಿಗೆ ಭದ್ರೆಯ ಒಡಲಲ್ಲಿ ರಾಫ್ಟಿಂಗ್ ಏರ್ಪಡಿಸಿದೆ. ಏಸ್ ಸಂಸ್ಥೆ ಭದ್ರಾ ನದಿಯಲ್ಲಿ ಸಮೀಕ್ಷೆ ನಡಿಸಿ, ಅಪಾಯವಿಲ್ಲದೆ ರಾಫ್ಟಿಂಗ್ ನಡೆಸಲು ಜಿಲ್ಲಾಡಳಿತ ಅನುಮತಿಯೂ ನೀಡಿದೆ. ಕುದುರೆಮುಖ, ಕಳಸ ಸೇರಿದಂತೆ ಘಟ್ಟಪ್ರದೇಶದಲ್ಲಿ ಮಳೆಯಾಗುತ್ತಿದೆ. ಈ ನಡುವೆಯೂ ಪ್ರವಾಸಿಗರು ರಾಫ್ಟಿಂಗ್ ನ ಮೋಜು ಅನುಭವಿಸುತ್ತಿದ್ದಾರೆ.

ಹಿಮಾಚಲ ಪ್ರದೇಶ, ಉತ್ತರಪ್ರದೇಶ, ಸೇರಿದಂತೆ ಉತ್ತರ ಭಾರತದಿಂದ ಬಂದಿರುವ ಗೈಡ್ ಗಳು ನಿರ್ದೇಶನ ನೀಡುತ್ತಾರೆ. 4 ರಿಂದ 10 ಕಿ.ಮೀ. ವರೆಗೂ ಸಾಗಬಹುದಾದ ರಾಫ್ಟಿಂಗ್ ನಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಪಾಲ್ಗೊಳ್ಳುತ್ತಿರುವುದು ಆಯೋಜಕರಿಗೂ ಉತ್ಸಾಹ ತಂದಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಇಲ್ಲಿನ ರಾಫ್ಟಿಂಗ್ ಗಾಗಿ ಬರುತ್ತಿದ್ದಾರೆ. ಸರ್ಕಾರ ಕೂಡ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಇಲ್ಲಿ ವಿದ್ಯಾರ್ಥಿಗಳಿಗೆ ರಾಫ್ಟಿಂಗ್ ಆಯೋಜಿಸಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications