ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಲ್ಕನೇ ಬಾರಿ ಕನ್ನ; ನಾಲ್ಕು ಲಕ್ಷವಿದ್ದ ಹುಂಡಿ ಕಳವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮೇ 30: ಚಿಕ್ಕಮಗಳೂರಿನ ಕಡೂರು ತಾಲೂಕು ಸಖರಾಯಪಟ್ಟಣದಲ್ಲಿನ ದೇವಸ್ಥಾನವೊಂದರಲ್ಲಿ ಹುಂಡಿಗಳು ಕಳುವಾಗಿರುವ ಘಟನೆ ನಡೆದಿದೆ.

 ಬೆಂಗಳೂರಲ್ಲಿ ರೈಲ್ವೆ ಪ್ರಯಾಣಿಕರ ಮೊಬೈಲ್ ಕದಿಯೋದು ಇವರೇ ನೋಡಿ ಬೆಂಗಳೂರಲ್ಲಿ ರೈಲ್ವೆ ಪ್ರಯಾಣಿಕರ ಮೊಬೈಲ್ ಕದಿಯೋದು ಇವರೇ ನೋಡಿ

ಇಲ್ಲಿನ ಇತಿಹಾಸ ಪ್ರಸಿದ್ಧ ಶಕುನ ರಂಗನಾಥ ಸ್ವಾಮಿ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ದೇವಸ್ಥಾನದಲ್ಲಿದ್ದ 4 ಹುಂಡಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ನಾಲ್ಕು ಹುಂಡಿಗಳಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಹಣ್ಣವಿದ್ದುದಾಗಿ ತಿಳಿದುಬಂದಿದೆ. ಎಂಟಕ್ಕೂ ಹೆಚ್ಚು ಜನ ಕಳ್ಳರು ಸೇರಿ ಹುಂಡಿಗಳನ್ನು ತೆಗೆದುಕೊಂಡು ಹೋಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಈ ದೇವಾಲಯದಲ್ಲಿ ಹುಂಡಿ ಕಳುವಾಗುತ್ತಿರುವ ಘಟನೆ ಇದೇ ಮೊದಲೇನಲ್ಲ. ಸತತ ನಾಲ್ಕನೇ ಬಾರಿ ಹುಂಡಿ ಕಳ್ಳತನ ನಡೆದಿದೆ.

robbery in chikkamagaluru temple

ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಡಾಗ್ ಸ್ಕ್ವಾಡ್ ತಂಡದಿಂದಲೂ ತನಿಖೆ ನಡೆಸಲಾಗಿದೆ.

English summary
robbers stolen the hundi in temple. The incident took place at the famous Sakuna Ranganatha Swamy Temple in chikkamagaluru.It is estimated that over four lakhs were there.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X