ಸಹಕಾರ ಸಾರಿಗೆ ಸಂಸ್ಥೆಯ ಆಸ್ತಿ ಮುಟ್ಟುಗೋಲು; ಬೀಗಮುದ್ರೆ
ಚಿಕ್ಕಮಗಳೂರು, ಮೇ 18; ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕೆಸವೆ ರಸ್ತೆಯಲ್ಲಿರುವ ಸಹಕಾರ ಸಾರಿಗೆ (ಟಿಸಿಎಸ್) ಸಂಸ್ಥೆಯ ಆಡಳಿತ ವರ್ಗವೂ ಸಾಲ ಮರು ಪಾವತಿ ಮಾಡದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಶ್ರೀರಾಮ್ ಟ್ರಾನ್ಸ್ಪೋರ್ಟ್ ಕಂಪನಿಯೂ 1 ಎಕರೆ 10 ಗುಂಟೆ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಸಂಸ್ಥೆಯ ಅಧ್ಯಕ್ಷರಾದ ಈ. ಎಸ್. ಧರ್ಮಪ್ಪ ಹಾಗೂ ಆಡಳಿತ ನಿರ್ದೆಶಕರಾಗಿದ್ದ ಗಾಡ್ವಿನ್ ಜಯಪ್ರಕಾಶ್ ಶ್ರೀರಾಮ್ ಟ್ರಾನ್ಸ್ಪೋರ್ಟ್ ಕಂಪನಿಯಲ್ಲಿ ಕೆಸವೆ ರಸ್ತೆಯಲ್ಲಿರುವ ಸಂಸ್ಥೆಯ ಆಸ್ತಿಯನ್ನು ಆಧಾರವಾಗಿ ನೀಡಿ 1 ಕೋಟಿ 20 ಲಕ್ಷ ಸಾಲವನ್ನು ಪಡೆದಿದ್ದರು.
2019ರ ನಂತರ ಸಾಲವನ್ನು ಮರು ಪಾವತಿ ಮಾಡಿರಲಿಲ್ಲ. ಕಂಪನಿಯೂ ಅವರಿಗೆ ನೋಟಿಸ್ ನೀಡಿದ್ದರೂ ಸಹ ಬಡ್ಡಿ ಸಹಿತ 1,31,41,210 ಮೊತ್ತವನ್ನು ಮರು ಪಾವತಿ ಮಾಡಲು ಹಿಂದೇಟು ಹಾಕಿದ್ದ ಕಾರಣ, ಜಿಲ್ಲಾಧಿಕಾರಿಗಳ ನ್ಯಾಯಾಲಯದ ಮೊರೆ ಹೋಗಲಾಗಿತ್ತು.

ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಆದೇಶದಂತೆ ಸೋಮವಾರ ತಾಲೂಕು ದಂಡಧಿಕಾರಿ ಹೆಚ್. ಎಸ್. ಪರಮೇಶ್ ಸಮ್ಮುಖದಲ್ಲಿ ಕೆಸವೆ ರಸ್ತೆಯ ಸರ್ವೆ ನಂ 97ರಲ್ಲಿರುವ 1 ಎಕರೆ 10 ಗುಂಟೆ ಟಿಸಿಎಸ್ ಸಂಸ್ಥೆಯ ಆಸ್ತಿಯನ್ನು ಕಂಪನಿ ವಶಕ್ಕೆ ತೆಗೆದುಕೊಂಡಿದೆ. ಕಛೇರಿಗೆ ಪ್ರವೇಶಿಸದಂತೆ ಬೀಗಮುದ್ರೆ ಹಾಕಲಾಗಿದೆ.
ಈ ಕುರಿತು ಶ್ರೀರಾಮ್ ಟ್ರಾನ್ಸ್ಪೋರ್ಟ್ ಕಂಪನಿಯ ಮ್ಯಾನೇಜರ್ ಸಂತೃಪ್ತ್ ಮಾತನಾಡಿದ್ದು, "2019ರ ನಂತರ ಸಂಸ್ಥೆ ಸಾಲವನ್ನು ಪಾವತಿ ಮಾಡಿಲ್ಲ. ನಾವು ಹಲವು ಭಾರಿ ನೋಟಿಸ್ ನೀಡಿದ್ದೇವೆ. ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗಲಾಗಿತ್ತು. ಜಿಲ್ಲಾಧಿಕಾರಿಗಳು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಮಾಡಿದ್ದಾರೆ. ಆದರಂತೆ ತಾಲೂಕು ಮ್ಯಾಜಿಸ್ಟ್ರೇಟ್ ವಶಕ್ಕೆ ಪಡೆದು ನಮಗೆ ಹಸ್ತಾಂತರ ಮಾಡಿದ್ದಾರೆ. ನಂತರದಲ್ಲಿ ಆಸ್ತಿ ಹರಾಜು ಹಾಕಲಾಗುತ್ತದೆ" ಎಂದು ಹೇಳಿದ್ದಾರೆ.
ಆಸ್ತಿಮುಟ್ಟುಗೋಲು ಹಾಕಿಕೊಳ್ಳುವ ಸಂದರ್ಭದಲ್ಲಿ ತಹಶೀಲ್ದಾರ್ ಪರಮೇಶ್, ರಾಜಸ್ವ ನಿರೀಕ್ಷಕ ಸತೀಶ್, ವೃತ್ತ ನಿರೀಕ್ಷಕ ಗುರಣ್ಣಾ ಹೆಬ್ಬಾಳ್, ಪಿಎಸ್ಐ ರವಿ ಮುಂತಾದವರಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications