ಭದ್ರಾ ಹುಲಿ ಯೋಜನೆ; ಚಿಕ್ಕಮಗಳೂರಿನ ಎನ್.ಆರ್.ಪುರ ಸ್ವಯಂ ಬಂದ್
ಚಿಕ್ಕಮಗಳೂರು, ಅಕ್ಟೋಬರ್ 15: ಭದ್ರಾ ಹುಲಿ ಯೋಜನೆಯ ಬಫರ್ ಝೋನ್, ಸೂಕ್ಷ್ಮ ಪರಿಸರ ವಲಯದ ವಿರುದ್ಧ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಜನರು ಹೋರಾಟಕ್ಕಿಳಿದಿದ್ದಾರೆ. ತಾಲೂಕಿನಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸ್ವಯಂ ಬಂದ್ ಘೋಷಿಸಿಕೊಂಡಿದ್ದಾರೆ.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸೇರಿ ಇಡೀ ತಾಲೂಕು ಸ್ತಬ್ಧವಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಮಲೆನಾಡು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್ ನಡೆಯುತ್ತಿದ್ದು, ಬಂದ್ ನಲ್ಲಿ ಸರ್ವ ಪಕ್ಷ, ವಿವಿಧ ಸಂಘಟನೆ ಹಾಗೂ ರೈತರು ಭಾಗಿಯಾಗಿದ್ದಾರೆ.
ಎನ್.ಆರ್ ಪುರ ಪಟ್ಟಣದಲ್ಲಿ ಬೃಹತ್ ಪಾದಯಾತ್ರೆಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಪಾದಯಾತ್ರೆ ನಡೆಯುತ್ತಿದ್ದು, ಇದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ. ಹಳ್ಳಿಹಳ್ಳಿಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.
ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಸೂಕ್ಷ್ಮ ಪರಿಸರ ವಲಯದಿಂದ ತಾಲೂಕಿನ ಬಹುತೇಕ ಭಾಗವೇ ಇಲ್ಲದಂತಾಗುತ್ತದೆ. ಹಾಗಾಗಿ ಈ ಯೋಜನೆಯನ್ನು ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿದೆ. ಪಕ್ಷಾತೀತವಾಗಿ ತಾಲೂಕಿನ ಎಲ್ಲಾ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಈ ಯೋಜನೆ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.

ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯದ ಹೆಸರಿನಲ್ಲಿ ತಾಲೂಕಿನ ಹತ್ತಾರು ಗ್ರಾಮಗಳು ಕಣ್ಮರೆಯಾಗಲಿವೆ. ಚಿಕ್ಕಮಗಳೂರು ಜಿಲ್ಲೆಯ 51 ಗ್ರಾಮಗಳು ಯೋಜನೆ ವ್ಯಾಪ್ತಿಗೆ ಬರಲಿದ್ದು, 8750 ಕುಟುಂಬ, 75ಕ್ಕೂ ಹೆಚ್ಚು ದೇವಸ್ಥಾನಗಳು, 3 ಚರ್ಚ್, 4 ಮಸೀದಿಗಳು ಈ ಯೋಜನೆ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಈ ಯೋಜನೆಗೆ ಭಾರೀ ವಿರೋಧ ವ್ಯಕ್ತಗೊಂಡಿದೆ.
Recommended Video
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications