ಚಿತ್ರದುರ್ಗಕ್ಕೆ ಭದ್ರಾ ನೀರು ಹರಿಯಲು ಇದ್ದ ತಡೆ ನಿವಾರಣೆ
ಚಿಕ್ಕಮಗಳೂರು, ಜೂನ್ 26 : ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿಗೆ ಇದ್ದ ಅಡೆ-ತಡೆ ನಿವಾರಣೆಯಾಗಿದೆ. ಅಜ್ಜಂಪುರ-ಶಿವಾನಿ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಮುಕ್ತಾಯವಾಗಿದೆ ಎಂದು ನೈಋತ್ಯ ರೈಲ್ವೆ ಘೋಷಣೆ ಮಾಡಿದೆ.
ಶುಕ್ರವಾರ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅಜ್ಜಂಪುರ-ಶಿವಾನಿ ರೈಲ್ವೆ ಅಂಡರ್ ಪಾಸ್ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಈ ಅಂಡರ್ ಪಾಸ್ ಕಾಮಗಾರಿ ಕಾರಣದಿಂದಾಗಿ ವಿಳಂಬವಾಗಿತ್ತು.
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯ ವ್ಯಾಪ್ತಿಗೆ ಬರುವ ಸುಮಾರು 5 ರಿಂದ 6 ಲಕ್ಷ ಎಕರೆ ಕೃಷಿ ಭೂಮಿಗೆ ನೀರಾವರಿ ಯೋಜನೆ ಕಲ್ಪಿಸುವ ಯೋಜನೆಯಾಗಿದೆ.

ಚಿತ್ರದುರ್ಗ ಸಂಸದ ಎ. ನಾರಾಯಣ ಸ್ವಾಮಿ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದರು.
ಸಚಿವರ ಸೂಚನೆಯಂತೆ ರೈಲ್ವೆ ಅಂಡರ್ ಪಾಸ್ ಕಾಮಗಾರಿಯನ್ನು ಕೇವಲ 30 ದಿನಗಳಲ್ಲಿ ಪೂರ್ಣಗೊಳಿಸಲಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ಕೆಲಸಕ್ಕೆ ಅವಕಾಶ ಮಾಡಿಕೊಡಲಾಗಿದೆ.

"ರೈತರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದು ನಮ್ಮ ಕರ್ತವ್ಯ. ನೀರಾವರಿ ಸೌಕರ್ಯ ಒದಗಿಸಿದರೆ ರೈತರಿಗೆ ಆನೆ ಬಲ ನೀಡಿದಂತಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡರೆ ರೈತರಿಗೆ ಸಹಾಯಕವಾಗಲಿದೆ" ಎಂದು ಸುರೇಶ್ ಅಂಗಡಿ ಹೇಳಿದರು.
-
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ











Click it and Unblock the Notifications