ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ "ಹುಲಿಯಾ" ಅಲ್ಲ, "ಇಲಿಯಾ" ಎಂದ ಸಿ ಟಿ ರವಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

Karnataka Bypoll results 2019 : CTV Ravi says the public has made the right choice | BJP | CONGRESS

ಚಿಕ್ಕಮಗಳೂರು, ಡಿಸೆಂಬರ್ 9: ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ನಮ್ಮ ನಿರೀಕ್ಷೆಗೆ ತಕ್ಕ ಫಲಿತಾಂಶ ಬಂದಿದೆ ಎಂದು ಚಿಕ್ಕಮಗಳೂರಿನಲ್ಲಿ ಸಚಿವ ಸಿ ಟಿ ರವಿ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ - ಜೆಡಿಎಸ್ ಕಿಚಡಿ ಸರ್ಕಾರ ಬೇಡ ಎಂಬ ಆದೇಶವನ್ನು ಮತದಾರರು ಈ ಫಲಿತಾಂಶದ ಮೂಲಕ ನೀಡಿದ್ದಾರೆ. ಕಾಂಗ್ರೆಸ್ - ಜೆಡಿಎಸ್ ಅಧಿಕಾರಕ್ಕಾಗಿ ಹಗಲು ಕನಸು ಕಾಣುತ್ತಾ ಇದ್ದರು. ಕೆಲವರು ನಾನು ಮುಖ್ಯಮಂತ್ರಿ ಎಂದು ಕೋಟು, ಸೂಟು ಹೊಲಿಸಿಕೊಳ್ಳಲು ತಯಾರಾಗಿದ್ದರು. ಆದರೆ ಕೈ- ದಳಕ್ಕೆ ಮತದಾರರು ತಪರಾಕಿ ಕೊಟ್ಟಿದ್ದಾರೆ" ಎಂದರು.

ರಾಹುಲ್ ಗಾಂಧಿ ವಿರುದ್ಧದ ಸುಕನ್ಯಾ ದೇವಿ ಅತ್ಯಾಚಾರ ಆರೋಪ ಕೆದಕಿದ ಸಿ.ಟಿ ರವಿರಾಹುಲ್ ಗಾಂಧಿ ವಿರುದ್ಧದ ಸುಕನ್ಯಾ ದೇವಿ ಅತ್ಯಾಚಾರ ಆರೋಪ ಕೆದಕಿದ ಸಿ.ಟಿ ರವಿ

"ಮತದಾರರು ಸ್ಥಿರ ಸರ್ಕಾರಕ್ಕೆ ಮತ ಹಾಕಿದ್ದಾರೆ. ಜನರ ದೃಷ್ಟಿಯಲ್ಲಿ ಅನರ್ಹ ಶಾಸಕರು ಅರ್ಹರು. ಅನರ್ಹರು ಎಂದು ಜಪ ಮಾಡುತ್ತಿದ್ದ ಜೆಡಿಎಸ್, ಕಾಂಗ್ರೆಸ್ ನವರಿಗೆ ನೀವು ಅನರ್ಹರು, ನೀವು ಅಯೋಗ್ಯರು ಎಂಬ ಫಲಿತಾಂಶವನ್ನು ಜನ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಹುಲಿಯಾ ಅಲ್ಲ ಇಲಿಯಾ. ಇದು ಯಡಿಯೂರಪ್ಪ ಸರ್ಕಾರ ಸ್ಥಿರವಾಗಿರಬೇಕು ಎಂದು ಜನರು ಕೊಟ್ಟ ಜನಾದೇಶ" ಎಂದು ಸಂತಸ ವ್ಯಕ್ತಪಡಿಸಿದರು.

Siddaramaiah Is Not Huliya He Is Iliya Said CT Ravi In Chikkamagaluru

ಬೂಟಾಟಿಕೆಗೆ ಹೊಸ ಅರ್ಥ ಸಿಕ್ಕಿದೆ: ಸಿ.ಟಿ. ರವಿ ವ್ಯಂಗ್ಯ ಬೂಟಾಟಿಕೆಗೆ ಹೊಸ ಅರ್ಥ ಸಿಕ್ಕಿದೆ: ಸಿ.ಟಿ. ರವಿ ವ್ಯಂಗ್ಯ

ಖಾತೆ ಹಂಚಿಕೆ ಕುರಿತೂ ಅಭಿಪ್ರಾಯ ಹಂಚಿಕೊಂಡ ಅವರು, "ಈ ವಿಷಯ ಮುಖ್ಯಮಂತ್ರಿಗಳ ಪರಮಾಧಿಕಾರ. ಸಿಎಂಗೆ ಅನುಭವ ಇದೆ. ಆ ಸವಾಲನ್ನು ಸರ್ಮರ್ಥವಾಗಿ ಅವರು ನಿರ್ವಹಿಸಿದ್ದಾರೆ. ಸೋತ ಅಭ್ಯರ್ಥಿಗಳಿಗೆ ಪಾರ್ಟಿ ಕಟ್ಟುವ ಕೆಲಸ ಕೊಡುತ್ತೇವೆ" ಎಂದು ಹೇಳಿದ್ದಾರೆ.

English summary
"People gave the result as JDS, Congress are unfit and disqualified. Siddaramaiah is not Hulia is not Iliya” said ct ravi in chikkamagaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X