ಪರಿಷತ್ ಘಟನೆ ಬಳಿಕ ನೊಂದು ಹೋಗಿದ್ದ ಎಸ್. ಎಲ್. ಧರ್ಮೇಗೌಡ

ಚಿಕ್ಕಮಗಳೂರು, ಡಿಸೆಂಬರ್ 29; " ವಿಧಾನ ಪರಿಷತ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಘಟನೆ ಬಳಿಕ ಅಣ್ಣ ಮನನೊಂದಿದ್ದರು" ಎಂದು ಉಪ ಸಭಾಪತಿ ಎಸ್. ಎಲ್. ಧರ್ಮೇಗೌಡ ಸಹೋದರ ಎಸ್. ಎಲ್. ಭೋಜೇಗೌಡ ಹೇಳಿದ್ದಾರೆ.

Recommended Video

      ಸಜ್ಜನ ರಾಜಕಾರಣಿ , ಈ ಸಾವು ನ್ಯಾಯವೇ? | DKS | Oneindia Kannada

      ಸೋಮವಾರ ರಾತ್ರಿ ಎಸ್. ಎಲ್. ಧರ್ಮೇಗೌಡ (65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಪಾರ್ಥಿವ ಶರೀರವನ್ನು ಕಡೂರಿನ ಸಖರಾಯಪಟ್ಟಣಕ್ಕೆ ತರಲಾಗುತ್ತಿದೆ.

      ಎಸ್. ಎಲ್. ಧರ್ಮೇಗೌಡ ಸಹೋದರ, ವಿಧಾನ ಪರಿಷತ್ ಸದಸ್ಯ ಎಸ್. ಎಲ್‌. ಭೋಜೇಗೌಡ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, "ವಿಧಾನ ಪರಿಷತ್ ಘಟನೆಯಿಂದ ಅಣ್ಣ ಮನ ನೊಂದಿದ್ದರು. ಬೇಸರವಾಗಿದ್ದರೆ ರಾಜೀನಾಮೆ ಕೊಡು. ಬೇಕಿದ್ದರೆ ನಾನೂ ರಾಜೀನಾಮೆ ಕೊಡುವುದಾಗಿ ಹೇಳಿದ್ದೆ" ಎಂದರು.

      SL Boje Gowda Statement On Brother SL Dharme Gowda Death

      "ಇವತ್ತು ರಾಜೀನಾಮೆ ಕೊಡಲು ಹೋಗೋಣ ಎಂದು ಹೇಳಿದ್ದೆ. ಅಷ್ಟರೊಳಗೆ ಅಣ್ಣ ನನಗೆ ಬಹಳ ಮೋಸ ಮಾಡಿಬಿಟ್ಟರು. ಅಷ್ಟು ಭೀಕರವಾಗಿ ಸಾಯಲು ಅವರಿಗೆ ಧೈರ್ಯವಾದರೂ ಹೇಗೆ ಬಂತು?" ಎಂದು ಭೋಜೇಗೌಡರು ಕಣ್ಣೀರು ಹಾಕಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+