Sringeri Bandh: ಶನಿವಾರ ಶೃಂಗೇರಿ ಬಂದ್, ದೇವಾಲಯಕ್ಕೆ ಹೋಗುವ ಭಕ್ತರೇ ಗಮನಿಸಿ
ಚಿಕ್ಕಮಗಳೂರು, ಆಗಸ್ಟ್ 16: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್ಗೆ ಕರೆ ನೀಡಲಾಗಿದೆ. ಆಗಸ್ಟ್ 17ರ ಶನಿವಾರ ಬಂದ್ ನಡೆಯಲಿದ್ದು, ಶೃಂಗೇರಿ, ಕೊಪ್ಪ, ಎನ್. ಆರ್. ಪುರ ತಾಲೂಕು ಕೇಂದ್ರ, ಖಾಂಡ್ಯ ಸೇರಿ ಎಲ್ಲಾ ಹೋಬಳಿ ಕೇಂದ್ರಗಳ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶೃಂಗೇರಿ ದೇವಾಲಯಕ್ಕೆ ತೆರಳುವ ಭಕ್ತರು ಶನಿವಾರ ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ಪ್ರಯಾಣ ಬೆಳೆಸಿ.
ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ 'ಶೃಂಗೇರಿ ಕ್ಷೇತ್ರ ಬಂದ್'ಗೆ ಕರೆ ನೀಡಿದೆ. ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು ಬಂದ್ಗೆ ಬೆಂಬಲ ನೀಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ನಿರೀಕ್ಷೆ ಇದೆ. ತುರ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆ ಬಂದ್ ಆಗಲಿದೆ ಎಂದು ಪ್ರಕಟಣೆ ಹೇಳಿದೆ.

ಯಾವ-ಯಾವ ಸೇವೆ ಲಭ್ಯ?; ಆಗಸ್ಟ್ 17ರ ಶೃಂಗೇರಿ ಕ್ಷೇತ್ರ ಬಂದ್ ವೇಳೆ ಆಸ್ಪತ್ರೆ, ಮೆಡಿಕಲ್ ಸ್ಟೋರ್, ಪೇಪರ್, ಹಾಲು, ಅಂಬ್ಯುಲೆನ್ಸ್, ಅಂಚೆ ಕಛೇರಿ, ಎಟಿಎಂ ಕಾರ್ಯ ನಿರ್ವಹಣೆ ಮಾಡಲಿವೆ. ಸಾರಿಗೆ ಸೇವೆ ಸಂಪೂರ್ಣ ಬಂದ್ ಆಗಲಿದ್ದು, ಖಾಸಗಿ ಬಸ್ಗಳ ಸಂಚಾರ ಸ್ಥಗಿತವಾಗುವ ನಿರೀಕ್ಷೆ ಇದೆ.
ಅಂಗಡಿ, ಬಸ್, ಶಾಲಾ-ಕಾಲೇಜು, ಖಾಸಗಿ ಶಾಲೆಗಳು, ವೈನ್ಸ್ & ಬಾರ್ ಮತ್ತು ರೆಸ್ಟೋರೆಂಟ್, ಆಟೋ & ಟ್ಯಾಕ್ಸಿ, ಲಾರಿ & ಟೆಂಪೋ, ಗೂಡ್ಸ್ ವಾಹನ, ಹೋಟೆಲ್, ಚಿತ್ರಮಂದಿರ, ಜಿಮ್, ಲಾಡ್ಜ್, ಬೀದಿ ಬದಿ ವ್ಯಾಪಾರ, ಬ್ಯಾಂಕ್ಗಳು ಬಾಗಿಲು ಮುಚ್ಚಲಿವೆ ಎಂದು ತಿಳಿಸಲಾಗಿದೆ.
ಸಾಲು ಸಾಲು ರಜೆ, ಶ್ರಾವಣ ಶನಿವಾರದ ದಿನ ಶೃಂಗೇರಿ ಶ್ರೀ ಶಾರದಾಂಬೆ ದೇವಾಲಯಕ್ಕೆ ಹೋಗುವ ಭಕ್ತರು ಸ್ಥಳೀಯ ಪರಿಸ್ಥಿತಿಯನ್ನು ತಿಳಿದು ಪ್ರಯಾಣ ಮಾಡಿ. ಬಸ್, ಟ್ಯಾಕ್ಸಿ, ಹೋಟೆಲ್ ಸೇವೆಗಳು ಬಂದ್ ಆದರೆ, ಅಲ್ಲಿ ಪರದಾಡಬೇಕಾದೀತು.
ಶೃಂಗೇರಿ ಬಂದ್ ಏಕೆ?; ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅರಣ್ಯ ಇಲಾಖೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ. ಇದನ್ನು ಖಂಡಿಸಿ ಮಲೆನಾಡು ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ 'ಶೃಂಗೇರಿ ಕ್ಷೇತ್ರ ಬಂದ್'ಗೆ ಕರೆ ನೀಡಿದೆ. ಶೃಂಗೇರಿ ಮಾತ್ರವಲ್ಲ ಕೊಪ್ಪ, ಎನ್. ಆರ್. ಪುರ ತಾಲೂಕು ಕೇಂದ್ರ, ಖಾಂಡ್ಯ ಸೇರಿ ಎಲ್ಲಾ ಹೋಬಳಿ ಕೇಂದ್ರಗಳನ್ನು ಬಂದ್ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
ಮೂರು ತಾಲೂಕು ಕೇಂದ್ರ, ಎಲ್ಲಾ ಹೋಬಳಿಗಳ ಸಾವಿರಾರು ಜನರು ಶನಿವಾರ ಅರಣ್ಯ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ನಡೆಸಲಿದ್ದಾರೆ. ರೈತರು ಎಷ್ಟು ಮನವಿ ಮಾಡಿದರೂ ಸಹ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸಿರುವ ಸರ್ಕಾರದ ನಿಲುವಿನ ವಿರುದ್ಧ ಆಕ್ರೋಶವನ್ನು ಹೊರಹಾಕಲಿದ್ದಾರೆ.
ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿರುವ ಬಂದ್ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಮಲೆನಾಡು ಭಾಗದಲ್ಲಿ ಖಾಸಗಿ ಬಸ್ಗಳೇ ಅಧಿಕವಾಗಿದ್ದು, ಬಂದ್ ಹಿನ್ನಲೆಯಲ್ಲಿ ಶೃಂಗೇರಿ, ಕೊಪ್ಪ ಸೇರಿ ವಿವಿಧ ಪಟ್ಟಣಗಳಿಗೆ ಶನಿವಾರ ಖಾಸಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಅರಣ್ಯ ಭೂಮಿ ಒತ್ತುವರಿ ತೆರವು ಖಂಡಿಸಿ ಕೊಪ್ಪಳದಲ್ಲಿ ಬೆಳಗ್ಗೆ 10 ಗಂಟೆ ಬೃಹತ್ ಪ್ರತಿಭಟನೆ ನಡೆಯಲಿದೆ. ಶೃಂಗೇರಿಯಲ್ಲಿಯೂ ಸಾವಿರಾರು ಜನರು ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ನಿರೀಕ್ಷೆ ಇದೆ. ಮಲೆನಾಡಿನ ಜನರ ಮೇಲೆ ಸರ್ಕಾರ ದರ್ಪ ತೋರಿಸುತ್ತಿದೆ. ಅನಾದಿ ಕಾಲದಿಂದ ಬದುಕು ಕಟ್ಟಿಕೊಂಡ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಜನರು ಆರೋಪಿಸಿದ್ದಾರೆ.
-
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications