ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೃಂಗೇರಿ ಅತ್ಯಾಚಾರ ಪ್ರಕರಣ: ಆರೋಪಿಗಳ ಬಂಧಿಸುವಂತೆ ಕಾಂಗ್ರೆಸ್ ಧರಣಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಫೆಬ್ರವರಿ 5: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ 17 ಜನರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಪೊಲೀಸ್ ಠಾಣೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಯತ್ನಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಶೃಂಗೇರಿ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರ ಧರಣಿ ನಡೆಸಿದರು.

ಅಪ್ರಾಪ್ತ ಬಾಲಕಿ ಮೇಲೆ 17 ಜನರಿಂದ 5 ತಿಂಗಳು ಅತ್ಯಾಚಾರ; 8 ಜನರ ಬಂಧನಅಪ್ರಾಪ್ತ ಬಾಲಕಿ ಮೇಲೆ 17 ಜನರಿಂದ 5 ತಿಂಗಳು ಅತ್ಯಾಚಾರ; 8 ಜನರ ಬಂಧನ

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಶೃಂಗೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಘೋಷಣೆ ಕೂಗಿದರು. ಬಾಲಕಿ ಮೇಲಿ ಅತ್ಯಾಚಾರಕ್ಕೆ ಬಾಲಕಿ ಚಿಕ್ಕಮ್ಮ ಸಹಕರಿಸಿದ್ದು, ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೋಲಿಸ್ ಆಧಿಕಾರಿಗಳು ತಿಳಿಸಿದ್ದಾರೆ.

Sringeri Rape Case: Congress Protest For Arrest Of Accused

Recommended Video

ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಇಂದು ತೆರೆ | Oneindia Kannada

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು. ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದರಲ್ಲದೆ, ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

English summary
In Chikkamagaluru district held a protest in Sringeri by the Congress party demanding the arrest of the accused in connection with the rape of a 15-year-old girl.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X