ಚಿಕ್ಕಮಗಳೂರು : 8 ತಿಂಗಳಲ್ಲಿ ಬರೋಬ್ಬರಿ 12 ಸಾವಿರ ಜನರಿಗೆ ನಾಯಿ ಕಡಿತ
ಚಿಕ್ಕಮಗಳೂರು, ಅಕ್ಟೋಬರ್ 04 : ಚಿಕ್ಕಮಗಳೂರಿನಲ್ಲಿ ಬೀದಿ ನಾಯಿಗಳ ಕಾಟ ಅಷ್ಟಿಷ್ಟಲ್ಲ, ಬರೊಬ್ಬರಿ 8 ತಿಂಗಳಿಗೆ 12 ಸಾವಿರ ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಈ ದಾಳಿಯಿಂದ ಚಿಕ್ಕಮಗಳೂರು ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದು, ರಾತ್ರಿಯ ವೇಳೆ ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದೆ.
ಬೈಕ್ನಲ್ಲಿ ಹೋಗುವವರಿಗೆ, ಸೈಕಲ್ನಲ್ಲಿ ಹೋಗುವವರಿಗೆ, ರಸ್ತೆಯಲ್ಲಿ ಸಂಚಾರ ಮಾಡುವವರೇ ಬೀದಿ ನಾಯಿಗಳ ಟಾರ್ಗೆಟ್ ಆಗಿದ್ದು, ಪುಟ್ಟ ಪುಟ್ಟ ಮಕ್ಕಳ ಮೇಲೂ ನಿರಂತರ ಬೀದಿ ನಾಯಿಗಳ ದಾಳಿ ನಡೆಸುತ್ತಿವೆ. ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ಹರ ಸಾಹಸ ಪಡುವಂತಾಗಿದೆ.

ಚಿಕ್ಕಮಗಳೂರು ನಗರದಲ್ಲಿಯೇ ಆರು ಸಾವಿರಕ್ಕೂ ಅಧಿಕ ಬೀದಿ ನಾಯಿಗಳು ಕಚ್ಚಿರುವ ಪ್ರಕರಣ ದಾಖಲಾಗಿದ್ದು, ಈ ಅಂಕಿ ಅಂಶ ನೋಡಿ ಸಾರ್ವಜನಿಕರನ್ನೇ ಬೆಚ್ಚಿ ಬೀಳಿಸಿದೆ. ಚಿಕ್ಕಮಗಳೂರು ನಗರ ಸೇರಿದಂತೆ, ಜಿಲ್ಲೆಯ ಜನರಲ್ಲಿ ಈಗ ಎದುರಾಗಿರುವ ಶ್ವಾನ ಭೀತಿ ಅದು ಬೀದಿಯಲ್ಲಿರೋ ಶ್ವಾನಗಳು. ರಾತ್ರಿ ಸಮಯದಲ್ಲಂತೂ ಕಾಲ್ನಡಿಗೆ ಬೈಕ್ ನಲ್ಲಿ ಓಡಾಡೋಕು ಭಯ ಪಡುತ್ತಿದ್ದು, 8 ತಿಂಗಳಲ್ಲಿ ಬರೋಬ್ಬರಿ 12 ಸಾವಿರಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶ್ವಾನಗಳ ದಾಳಿ ಹಾಗೂ ಕಚ್ಚುವ ಪ್ರಕರಣ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷವೇ ಅಧಿಕವಾಗಿದ್ದು, ಕೇವಲ 8 ತಿಂಗಳಲ್ಲಿ 12 ಸಾವಿರದ ಗಡಿ ದಾಟಿದೆ. ಇದರಲ್ಲಿ ಗರಿಷ್ಠ 95 ರಷ್ಟು ಪ್ರಮಾಣದಲ್ಲಿ ಬೀದಿ ಶ್ವಾನಗಳೇ ದಾಳಿ ನಡೆಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಚಿಕ್ಕಮಗಳೂರು ನಗರದಲ್ಲಿ 6 ಸಾವಿರ ಪ್ರಕರಣಗಳಿದ್ದರೇ, ಕಡೂರು 1,756 ತರೀಕೆರೆ 1,168 ಎನ್.ಆರ್ ಪುರ 588, ಕೊಪ್ಪದಲ್ಲಿ 969, ಶೃಂಗೇರಿ 433, ಮೂಡಿಗೆರೆ 391 ಪ್ರಕರಣಗಳು ದಾಖಲಾಗಿದೆ.

ಶ್ವಾನ ದಾಳಿಯಿಂದ ಬಂದವರಿಗೆ ಈವರೆಗೂ ಚಿಕಿತ್ಸೆ ನೀಡಲಾಗಿದ್ದು, ಇಂಜೆಕ್ಷನ್ಗೆ ಈವರೆಗೂ ತೊಂದರೆಯಾಗಿಲ್ಲ. ಮುಂದೆಯೂ ತೊಂದರೆಯಾಗದಂತೆ ಜಿಲ್ಲಾ ಆರೋಗ್ಯ ಇಲಾಖೆ ಎಚ್ಚರಿಕೆಯ ಕ್ರಮ ವಹಿಸಿದ್ದು, ಕಳೆದ ವರ್ಷ 13 ಸಾವಿರ ಪ್ರಕರಣಗಳಿದ್ವು ಈ ಬಾರಿ 8 ತಿಂಗಳಲ್ಲಿಯೇ 12 ಸಾವಿರ ದಾಖಲಾಗಿದೆ ಎಂಬ ಅಂಕಿ ಅಂಶವನ್ನು ಜಿಲ್ಲಾ ಆರೋಗ್ಯ ಇಲಾಖೆ ಹೊರ ಹಾಕಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications