ಚಿಕ್ಕಮಗಳೂರು; ಗಾಡಿಗೆ ಬೆಂಕಿ ಹಾಕಿದ ಬೀದಿ ಬದಿ ವ್ಯಾಪಾರಿ
ಚಿಕ್ಕಮಗಳೂರು, ಮೇ 17: ಜೀವನಕ್ಕಾಗಿ ನಾನಾ ರೀತಿಯ ಕೆಲಸ ಮಾಡುತ್ತೇವೆ. ಬೀದಿ ಬದಿ ವ್ಯಾಪಾರಿಯೊಬ್ಬ ಸ್ವಾಭಿಮಾನದಿಂದ ಹತ್ತಾರು ವರ್ಷದಿಂದ ವ್ಯಾಪಾರ ಮಾಡುತ್ತಾ ಬದುಕು ಕಟ್ಟಿಕೊಂಡಿದ್ದರು. ಏಕಾಏಕಿ ನಗರಸಭೆ ಅಧಿಕಾರಿಗಳು ಕಿರುಕುಳ ನೀಡಿದ ಹಿನ್ನೆಲೆ ನನ್ನ ಗಾಡಿ ಮುಟ್ಟಬೇಡಿ, ನಾನೇ ಬೆಂಕಿ ಹಚ್ಚುತ್ತೇನೆ ಎಂದು ನಗರಸಭೆ ಅಧಿಕಾರಿಗಳ ಎದುರು ವ್ಯಾಪಾರಿ ಗಾಡಿಗೆ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದಲ್ಲಿ ನೂರಾರು ಜನರು ಬೀದಿ ಬದಿ ವ್ಯಾಪಾರ ಮಾಡುತ್ತಾ ಬದುಕು ಕಟ್ಟಿಕೊಂಡಿದ್ದಾರೆ.ಮಲ್ಲಂದೂರು ರಸ್ತೆಯ ಬೀದಿಯಲ್ಲಿ ಪ್ರತಿನಿತ್ಯ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡಿಕೊಂಡು 200-300 ರೂ. ದುಡಿದು ಕಷ್ಟಪಟ್ಟು ಜೀವನ ನಡೆಸುತ್ತಿದ್ದರು.
ಆದರೆ ನಗರಸಭೆ ಅಧಿಕಾರಿಗಳು ರಸ್ತೆಬದಿ ವ್ಯಾಪಾರ ನಡೆಸಬಾರದು ಎಂದು ವ್ಯಾಪಾರಿಗಳಿಗೆ ಸೂಚಿಸಿದ್ದರು. ಈ ರಸ್ತೆಯಲ್ಲೇ ವ್ಯಾಪಾರ ನಡೆಸುತ್ತಿದ್ದವರಲ್ಲಿ ಬಡ ವ್ಯಾಪಾರಿಯೊಬ್ಬ ಹಣ್ಣು ತರಕಾರಿಗಳನ್ನು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇಂದು ಈ ವ್ಯಾಪಾರಿಯ ಗಾಡಿಯನ್ನು ಹೊತ್ತೊಯ್ಯಲು ನಗರಸಭೆ ಸಿಬ್ಬಂದಿ ಬಂದಿದ್ದರು. ಇದರಿಂದ ರೊಚ್ಚಿಗೆದ್ದ ಬಡ ವ್ಯಾಪಾರಿಯು, ನಮ್ಮ ಹೊಟ್ಟೆ ಮೇಲೆ ಹೊಡಿಯುತಿದ್ದೀರಾ?, ನಾನೇ ಬೆಂಕಿ ಹಾಕಿತ್ತೀನಿ ಎಂದು ತನ್ನ ಗಾಡಿಗೆ ತಾನೇ ಬೆಂಕಿ ಹಾಕಿ ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಈ ವೇಳೆ ಸ್ಥಳೀಯೊಬ್ಬರು ವೀಡಿಯೋ ಮಾಡಿದ್ದು ತನ್ನ ಅಳಲು ತೋಡಿಕೊಂಡಿರುವ ಬಡವ್ಯಾಪಾರಿ ನಗರಸಭೆ ಅವರು 500-1,000ವರೆಗೆ ಹಣ ಕೇಳುತ್ತಾರೆ. ಅದನ್ನು ಎಲ್ಲಿಂದ ತಂದು ಕೊಡಲಿ?. ಫೈನಾನ್ಸ್ಗೆ ಹಣ ಕಟ್ಟುವುದೇ ಕಷ್ಟವಾಗಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಇವರಿಗೆ ಹೇಗೆ ನೀಡುವುದು? ಎಂದು ಬೇಸರ ವ್ಯಕ್ತಪಡಿಸಿದ್ದಾನೆ.
ಇದೀಗ ಚಿಕ್ಕಮಗಳೂರು ನಗರಸಭೆಯ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಶಾಸಕ ಸಿ. ಟಿ. ರವಿ ಬಳಿ ಹೋಗಿ ನೋವು ಹೇಳಿದ್ದೀನಿ, ಅವರು ನನ್ನ ಕಷ್ಟಕ್ಕೆ ಸ್ಪಂದಿಸಿಲ್ಲ, ನೀವು ನನಗೆ ಸಂಬಳ ಕೊಡುತ್ತೀರಾ? ಇಲ್ಲ ತಾನೇ ಮತ್ತೆ ಯಾಕೆ ತೊಂದರೆ ಕೊಡುತ್ತೀರಾ? ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಧಿಕಾರಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Recommended Video
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications