ಚಿಕ್ಕಮಗಳೂರು: ರಾತ್ರೋರಾತ್ರಿ ಸ್ವಾಮಿ ವಿವೇಕಾನಂದ ಮೂರ್ತಿ ನೆಲಸಮ
ಚಿಕ್ಕಮಗಳೂರು, ಜೂನ್ 17: ಭಾರತದ ಕೀರ್ತಿಯನ್ನು ವಿಶ್ವಕ್ಕೆ ಸಾರಿದ ಸಂತ ವಿವೇಕಾನಂದರ ವಿರೂಪ ಮೂರ್ತಿಯನ್ನು ರಾತ್ರೋರಾತ್ರಿ ಕೆಡವಿ ಹಾಕಲಾಗಿದೆ. ಕಳೆದ ಐದು ವರ್ಷದ ಹಿಂದೆ ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆಯಲ್ಲಿ ಸ್ವಾಮಿ ವಿವೇಕಾನಂದ ಮೂರ್ತಿ ಸ್ಥಾಪನೆಯಾಗಿತ್ತು. ಅಂದಿನ ನಗರಸಭೆ ಅಧ್ಯಕ್ಷರಾಗಿದ್ದ ಮುತ್ತಯ್ಯ ನೇತೃತ್ವದಲ್ಲಿ ಮೂರ್ತಿ ಸ್ಥಾಪನೆಗೆ ಕಾರ್ಯಾರಂಭ ಮಾಡಲಾಗಿತ್ತು. ಅವರೇ ಹೇಳುವಂತೆ ಜನರ ಬಳಿ ಹಣ ಸಂಗ್ರಹಿಸಿ ಅಂದಾಜು 30 ಲಕ್ಷ ರೂ. ವೆಚ್ಚದಲ್ಲಿ ವಿವೇಕಾನಂದ ಮೂರ್ತಿ ಸ್ಥಾಪನೆಗೆ ಮುಂದಾಗಿತ್ತು.
Recommended Video
ಗಬ್ಬು ನಾರುವ ಕೆರೆಯ ಮಧ್ಯದಲ್ಲಿ ದ್ವೀಪ ನಿರ್ಮಾಣ ಮಾಡಿ ವಿವೇಕಾನಂದ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಬಿಜೆಪಿ ಮುಖಂಡ ಸಿ.ಟಿ ರವಿ ಆಪ್ತ ಮುತ್ತಯ್ಯ ನೇತೃತ್ವದಲ್ಲಿ ಕಾರ್ಯಯೋಜನೆ ರೂಪಿಸಲಾಯಿತು. ಈ ವೇಳೆ ಮೂರ್ತಿ ನಿರ್ಮಾಣಕ್ಕೆ ಚಿಕ್ಕಮಗಳೂರಿನ ಶಾಂತಿನಿಕೇತನ ಕಲಾ ಮಹಾವಿದ್ಯಾಲಯಕ್ಕೆ ಸಂಪರ್ಕ ಮಾಡಲಾಯಿತು. ನಂತರ ಅದನ್ನು ಬಿಟ್ಟು ಶಿವಮೊಗ್ಗ ಮೂಲದವರಿಗೆ ಮೂರ್ತಿ ನಿರ್ಮಾಣದ ಜವಾಬ್ದಾರಿ ನೀಡಲಾಯಿತು. ಅದು ವಿರೋಪಗೊಂಡ ಕಾರಣ ಸಾಕಷ್ಟು ಪ್ರತಿಭಟನೆಗಳು ನಡೆದವು. ಇದಾದ ಬಳಿಕ ಚಿಕ್ಕಮಗಳೂರಿನ ಏಕಾಂತರಾಮು ಎಂಬುವರಿಗೆ ನೀಡಲಾಯಿತು. ಆಗಲೂ ವಿರೂಪಗೊಂಡ ವಿವೇಕಾನಂದ ಮೂರ್ತಿಗೆ ರೂಪಕೊಡಲು ಸಾಧ್ಯವಾಗಲಿಲ್ಲ.

ವಿರೋಪಗೊಂಡ ವಿವೇಕಾನಂದರ ಮೂರ್ತಿ
ನಂತರ ಬೆಂಗಳೂರು ಮೂಲದ ಕಲಾವಿದ ಮಧುಸೂದನ್ ಎಂಬುವರಿಗೆ ಸರಿಪಡಿಸಲು ಕಾಮಗಾರಿ ಕೊಡಲಾಯಿತಾದರೂ ಅದು ಸಾಧ್ಯವಾಗಲಿಲ್ಲ. ಇದೇ ವಿರೂಪಗೊಂಡ ಮೂರ್ತಿಯನ್ನು ನೋಡಿದ ಜನರು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡಲು ಪ್ರಾರಂಭಿಸಿದ್ದು, ಈ ಚರ್ಚೆ ಬಹಳಷ್ಟು ವೈರಲ್ ಅಯಿತು. ಕೂಡಲೇ ಎಚ್ಚೆತ್ತುಕೊಂಡ ಅವರು ನಿನ್ನೆ ರಾತ್ರೋರಾತ್ರಿ ವಿವೇಕಾನಂದ ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಈಗ ಜನಾಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಮೂರ್ತಿ ಸ್ಥಾಪನೆ
ಸಾರ್ವಜನಿಕ ಕೆರೆಯಲ್ಲಿ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ಜಿಲ್ಲಾಡಳಿತದ ಅನುಮತಿಯನ್ನು ಪಡೆಯದೇ ನಗರಸಭೆ ಅಧ್ಯಕ್ಷರಾಗಿದ್ದ ಬಿಜೆಪಿ ಮುಖಂಡ ಮುತ್ತಯ್ಯ, ಇನ್ನು ಕೆಲ ಬಿಜೆಪಿ ಮುಖಂಡರು ದಂಟರಮಕ್ಕಿ ಕೆರೆಯಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಮೂರ್ತಿ ಸ್ಥಾಪನೆಗೆ ಮುಂದಾಗಿದ್ದರು.
ಈ ವೇಳೆ ದಲಿತ ಸಂಘಟನೆಗಳು ಸಾರ್ವಜನಿಕ ಹಣ ದುರಪಯೋಗ ಹಾಗೂ ಕೆರೆಯ ಪರಿಸರಕ್ಕೆ ಹಾನಿ ಎಂದು ವಿರೋಧಿಸಿ ಪ್ರತಿಭಟನೆ ನಡೆಸಿದರು. ಯಾವುದನ್ನೂ ಲೆಕ್ಕಿಸದೇ ಸ್ವಾಮಿ ವಿವೇಕಾನಂದ ಮೂರ್ತಿ ಸ್ಥಾಪನೆ ಮಾಡಿ ಈಗ ಎಡವಟ್ಟು ಮಾಡಿಕೊಂಡಿದ್ದಾರೆ. ಇನ್ನು ಕೆರೆಯಲ್ಲಿ ಇಂತಹ ಬೃಹತ್ ಕಾಮಗಾರಿ ಕೈಗೊಂಡರೂ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಈವರೆಗೂ ಏನೂ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿರುವುದಕ್ಕೆ ಶಾಸಕ ಸಿ.ಟಿ ರವಿ ಅವರ ಪ್ರಭಾವ ಕಾರಣ ಇರಬಹುದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಅಸ್ತಿತ್ವ ಕಳೆದುಕೊಂಡವಾ? ಜಿಲ್ಲೆಯ ವಿರೋಧ ಪಕ್ಷಗಳು
ದೇಶದ ಸಾಂಸ್ಕೃತಿಕ ಸಂಪತ್ತಾದ, ನಿರ್ಮಾಣ ಹಂತದಲ್ಲಿದ್ದ ವಿವೇಕಾನಂದ ಮೂರ್ತಿಯನ್ನು ರಾತ್ರೋ ರಾತ್ರಿ ಯಾರೋ ಕೆಡವಿ ಹಾಕಿದರೂ ಚಿಕ್ಕಮಗಳೂರು ನಗರ ಅಥವಾ ಜಿಲ್ಲೆಯ ವಿರೋಧ ಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ಯಾವುದೇ ಸಂಘಟನೆಯ ಮುಖಂಡರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ.
ವಿವೇಕಾನಂದ ಮೂರ್ತಿ ಸ್ಥಾಪನೆಯಲ್ಲಿ ನಗರದ ಬಿಜೆಪಿಯ ಪ್ರಭಾವಿಗಳು ಭಾಗಿಯಾಗಿದ್ದರು. ಅದರಲ್ಲೂ ಈ ಕಾಮಗಾರಿ ಜವಾಬ್ದಾರಿ ಹೊತ್ತಿದ್ದ ಮಾಜಿ ನಗರಸಭೆ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಸಚಿವ ಸಿ.ಟಿ ರವಿ ಆಪ್ತ ತಾವೇ ಕಿತ್ತು ಹಾಕಿರುವುದಾಗಿ ( ಪತ್ರಿಕಾಗೋಷ್ಟಿಯಲ್ಲಿ) ಹೇಳಿಕೆ ನೀಡಿದ್ದಾರೆ. ಆದರು ಸಹ ವಿರೋಧ ಪಕ್ಷದ ಯಾವೊಬ್ಬ ಮುಖಂಡರು ಈ ಬಗ್ಗೆ ಚಕಾರ ಎತ್ತದೇ ಇರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.

ಕೆಲ ಮುಖಂಡರ ತಲೆದಂಡಕ್ಕೂ ಸ್ಕೆಚ್ ರೆಡಿ
ವಿವೇಕಾನಂದ ಮೂರ್ತಿ ಸ್ಥಾಪನೆ ಜಿಲ್ಲೆಯಲ್ಲಿ ಬಿಜೆಪಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಎಲ್ಲದಕ್ಕೂ ಹಿಂದೆ ನಿಂತು ಬೆಂಬಲ ನೀಡಿದ ಜಿಲ್ಲೆಯ ಪ್ರಮುಖ ನಾಯಕರೇ ಇದಕ್ಕೂ, ನನಗೂ ಸಂಬಂಧ ಇಲ್ಲ ಎಂಬಂತೆ ಮಾತನಾಡುತ್ತಿರುವುದು ಕೆಳ ಹಂತದ ಬಿಜೆಪಿ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿದೆ. ಮತ್ತೊಂದು ಕಡೆ ವಿವೇಕಾನಂದ ಮೂರ್ತಿ ಸ್ಥಾಪನೆಯ ವಿಚಾರವೇ ಬಿಜೆಪಿಯ ಕೆಳ ಹಂತದ ಮುಖಂಡರ ಒಳಬೇಗುದಿಗೆ ಕಾರಣವಾಗುವ ಜೊತೆಗೆ ಇನ್ನು ಕೆಲ ಮುಖಂಡರ ತಲೆದಂಡಕ್ಕೂ ಸ್ಕೆಚ್ ರೆಡಿಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications