ಚಿಕ್ಕಮಗಳೂರು; ಮಗನ ಸಾವಿನ ಪ್ರತೀಕಾರ, ವೈದ್ಯರ ಹತ್ಯೆ ಯತ್ನ
ಚಿಕ್ಕಮಗಳೂರು, ಜೂನ್ 01; ತರೀಕೆರೆ ಪಟ್ಟಣದಲ್ಲಿ ಖಾಸಗಿ ಆಸ್ಪತ್ರೆ ವೈದ್ಯನ ಹತ್ಯೆಯತ್ನ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಅಗ್ನಿಶಾಮಕ ಠಾಣೆ ಬಳಿ ಸೋಮವಾರ ಮಾರಣಾಂತಿಕ ಹಲ್ಲೆ ನಡೆದಿತ್ತು.
ಖಾಸಗಿ ಆಸ್ಪತ್ರೆ ವೈದ್ಯ ದೀಪಕ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ವೇಣು, ನಿತಿನ್, ವೆಂಕಟೇಶ್ ಮತ್ತು ಚಂದ್ರಶೇಖರ್ ಎಂದು ಗುರುತಿಸಲಾಗಿದೆ.
ಚಂದ್ರಶೇಖರ್ ಮಗು ಭುವನ್ (9) ಸಾವಿಗೆ ಸೇಡು ತೀರಿಸಿಕೊಳ್ಳಲು ಡಾಕ್ಟರ್ ದೀಪಕ್ ಕೊಲೆಗೆ ಯತ್ನಿಸಲಾಗಿತ್ತು. ಮೇ 29ರಂದು ಬಾಲಕ ಭುವನ್ ಸಾವನ್ನಪ್ಪಿದ್ದ.

ಅಜ್ಜಂಪುರ ತಾಲೂಕಿನ ತಡಗ ಗ್ರಾಮದ ಬಾಲಕ ಭುವನ್ ಜ್ವರದಿಂದ ಬಳಲುತ್ತಿದ್ದ. ವೈದ್ಯ ದೀಪಕ್ ಬಳಿಗೆ ಬಾಲಕನನ್ನು ಕರೆದುಕೊಂಡು ಬರಲಾಗಿತ್ತು. ತರೀಕೆರೆ ಪಟ್ಟಣದಲ್ಲಿ ಬಸವೇಶ್ವರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿತ್ತು.
ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭುವನ್ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಡಾ. ದೀಪಕ್ ಮೇಲೆ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಓವರ್ ಡೋಸ್ ಇಂಜೆಕ್ಷನ್ ನೀಡಿದ ಕಾರಣಕ್ಕೆ ಬಾಲಕ ಸಾವನ್ನಪ್ಪಿದ್ದಾನೆ ಎಂದು ದೀಪಕ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದರು.
ಕೆಲಸ ಮುಗಿಸಿ ದೀಪಕ್ ಸೈಕಲ್ನಲ್ಲಿ ಸೋಮವಾರ ಮನೆಗೆ ತೆರಳುವಾಗ ತರೀಕೆರೆ ಪಟ್ಟಣದ ಅಗ್ನಿಶಾಮಕ ಠಾಣೆ ಬಳಿ ಲಾಂಗು, ಮಚ್ಚಿನಿಂದ ಹಲ್ಲ ನಡೆಸಲಾಗಿತ್ತು. ತಲೆಗೂ ಹಲ್ಲೆ ಮಾಡಲಾಗಿತ್ತು.
ದೀಪಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಪ್ರಕರಣ ನಡೆದ ಒಂದೇ ದಿನದಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications