ಕೊಟ್ಟಿಗೆಹಾರದಿಂದ ತೇಜಸ್ವಿ ಸಾಹಿತ್ಯ ವಿಚಾರಧಾರೆ ಕಾರ್ಯಕ್ರಮ ವರದಿ
ಕೊಟ್ಟಿಗೆಹಾರ, ಸೆಪ್ಟೆಂಬರ್ 08: ಬಹುಮುಖ ಪ್ರತಿಭೆಯ ದೈತ್ಯಪ್ರತಿಭೆ ಪೂರ್ಣಚಂದ್ರ ತೇಜಸ್ವಿ ಎಂದು ನಿವೃತ್ತ ಉಪನ್ಯಾಸಕ ಬಿ ತಿಪ್ಪೆರುದ್ರಪ್ಪ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ವತಿಯಿಂದ ನಡೆದ ತೇಜಸ್ವಿ ಸಾಹಿತ್ಯ ವಿಚಾರ ಮಂಥನ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
''ವರ್ತಮಾನದಲ್ಲಿ ತೇಜಸ್ವಿ ವಿಚಾರಧಾರೆ'' ವಿಷಯದ ಕುರಿತು ಚಿಕ್ಕಮಗಳೂರಿನ ನಿವೃತ್ತ ಉಪನ್ಯಾಸಕರಾದ ಬಿ ತಿಪ್ಪೆರುದ್ರಪ್ಪ ಅವರು ಉಪನ್ಯಾಸ ನೀಡಿದರು. ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿಯವರ ನೆನಪಿನ ಕಥಾಸ್ಪರ್ಧೆ 2021ರ ''ತೆರೆದ ಅಂಚೆ'' ಎಂಬ ಕಥಾ ಸಂಕಲನ ಲೋಕಾರ್ಪಣೆ ಮಾಡಿದರು.

ಸಾಹಿತ್ಯ, ಕೃಷಿ, ಪೋಟೋಗ್ರಫಿ, ಫಿಶಿಂಗ್, ಸಂಶೋಧನೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ ತೇಜಸ್ವಿಯವರದ್ದು ವಿಜ್ಞಾನಿಯ ಬುದ್ದಿ, ಕವಿಯ ಹೃದಯ, ತತ್ವಜ್ಞಾನಿಯ ಮನಸ್ಸು. ಕವಿ, ನಾಟಕಕಾರ,ಕಾದಂಬರಿಕಾರ ಹೀಗೆ ಅನೇಕ ಪ್ರಕಾರಗಳಲ್ಲಿ ಕೈಯಾಡಿಸಿದಂತವರು ತೇಜಸ್ವಿ. ಅವರ ಎಲ್ಲಾ ಕಥಾವಸ್ತುವಿಗೆ ಒಂದು ಹಂದರವನ್ನು ಕ್ಯಾನ್ವಾಸನ್ನು ಸೃಷ್ಟಿಮಾಡಿಕೊಟ್ಟಿರುವುದು ಮೂಡಿಗೆರೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್ ಮಾತನಾಡಿ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವು ತೇಜಸ್ವಿ ಅವರ ಬದುಕು ಬರಹ ಚಿಂತನೆಗಳನ್ನು ಸಮಾಜಕ್ಕೆ ತಲುಪಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಸಭಾಂಗಣ ಹಾಗೂ ತೇಜಸ್ವಿ ಬಳಸುತ್ತಿದ್ದ ವಸ್ತುಗಳ ಮ್ಯೂಸಿಯಂ ನಿರ್ಮಾರ್ಣಗೊಳ್ಳಲಿದೆ ಎಂದರು.
ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿ ನೆನಪಿನ ಕಥಾಸ್ಪರ್ಧೆಯ ತೆರೆದ ಅಂಚೆ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಬಚೂರಿನ ಮಿತ್ರವೃಂದ ತಂಡದ ಡಾ ಜಗದೀಶ್ ಡಿ.ಎಸ್, ಡಾ.ದೊರೆ ಚಿಕ್ಕಹನಸೋಗೆ, ತೇಜಸ್ವಿ ಒಡನಾಡಿ ಬಾಪು ದಿನೇಶ್, ಕನ್ನಡ ಸಂಸ್ಕೃತಿ ಇಲಾಖೆಯ ಹಿರಿಯ ಇಲೆಕ್ಟ್ರಿಷಿಯನ್ ಹಾಗೂ ಸೌಂಡ್ ಸೂಪರ್ ವೈಸರ್ ಶ್ರೀನಿವಾಸ್, ಸಾಹಿತ್ಯಾಸಕ್ತರಾದ ಡಾ.ಮಿರ್ಜಾ ಬಷೀರ್, ಸುಧಾ ಆಡುಕಳ, ಹರೀಶ್ ಟಿ.ಜಿ, ಪೂರ್ಣೇಶ್ ಮತ್ತಾವರ, ನಿಶಾಂತ್, ಸಂಜಯಗೌಡ ಕೊಟ್ಟಿಗೆಹಾರ, ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್, ಸಂಗೀತ ಇದ್ದರು.
ತೇಜಸ್ವಿ ಓದು ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಪಾಕಕ್ರಾಂತಿ ಮತ್ತು ಇತರ ಕಥೆಗಳು ಕೃತಿಯ ಬಗ್ಗೆ ಸಾಹಿತಿಗಳಾದ ರೇಖಾ ನಾಗರಾಜರಾವ್ ಅವರು ಮಾತನಾಡಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರವಾಗಲಿದ್ದು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಫೇಸ್ಬುಕ್ನ ಕೆಪಿಪಿಟ್ರಸ್ಟ್ ಅಧಿಕೃತ ಪೇಜ್ನಲ್ಲಿ ವೀಕ್ಷಿಸಬಹುದಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬಗ್ಗೆ:
ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರು ಈ ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾಗಿದ್ದು, ಸರ್ಕಾರವು ಇವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಸ್ಥಾಪಿಸಲಾಗಿದೆ. ಈ ಮುಖಾಂತರ ತೇಜಸ್ವಿಯವರ ಸಾಹಿತ್ಯ, ಪರಿಸರ, ಫೋಟೋಗ್ರಫಿ, ಚಿತ್ರಕಲೆ, ಕೃಷಿ ಮುಂತಾದ ಹಲವಾರು ವಿಚಾರಧಾರೆಗಳನ್ನು ಯುವಜನಾಂಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಷ್ಠಾನವು ಕಾರ್ಯೋನ್ಮುಖವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಕನ್ನಡ ಸಾಹಿತ್ಯ-ಸಂಸ್ಕೃತಿ ಚಿಂತನೆಯ ಹೊಸ ದಿಗಂತಗಳ ಬಾಗಿಲುಗಳನ್ನು ತೆರೆಸಿದ ಲೇಖಕ. ಕ್ರಿಯಾಶೀಲತೆ ಮತ್ತು ಚಲನಶೀಲತೆ ಅವರ ಸಾಹಿತ್ಯದ ಕೇಂದ್ರ ಆಶಯ. ವ್ಯಕ್ತಿ ವಿಶಿಷ್ಟ ಸಿದ್ಧಾಂತದಿಂದ ಜೀವಕೇಂದ್ರಿತ ಜಗತ್ತಿನ ಶೋಧದ ಕಡೆಗೆ ಅವರ ಸಾಹಿತ್ಯ ವಿಕಾಸವಾಗುತ್ತ ಬೆಳೆಯುತ್ತದೆ. ತಮ್ಮ ಅನುಭವಗಳನ್ನೇ ಕಥನಗಳನ್ನಾಗಿಸಿ, ಅದಕ್ಕೆ ಹೊಸ ವೈಚಾರಿಕತೆ, ದಾರ್ಶನಿಕತೆ ಹಾಗೂ ಉಜ್ವಲ ಕಾಂತಿಯನ್ನು ದೊರಕಿಸಿಕೊಟ್ಟ ಕನ್ನಡದ ಅಪರೂಪದ ಲೇಖಕ ತೇಜಸ್ವಿ.
ಅವರ ಸಾಹಿತ್ಯದ ಅಭಿವ್ಯಕ್ತಿ ವಿಧಾನ, ಸ್ವರೂಪ, ಕಥನಕ್ರಮ, ಭಾಷೆಯ ಬಳಕೆ, ಹೊಸ ನುಡಿಗಟ್ಟುಗಳ ಶೋಧ ತಮ್ಮ ಎಲ್ಲ ಬರಹಗಳಲ್ಲಿ ನಿರಂತರವಾಗಿ ಅನ್ವೇಷಣೆಗೆ ಒಳಪಟ್ಟಿದ್ದವು ಎಂಬುದಕ್ಕೆ ಅವರ ಅಗಾಧ ಕೃತಿಗಳೇ ಸಾಕ್ಷಿಯಾಗಿವೆ. ಅನುವಾದ, ಚಿತ್ರಕಲೆ, ಫೋಟೋಗ್ರಫಿ, ಸಿತಾರ್ ವಾದನ , ಸಂಗೀತ ಆಸ್ವಾದನೆ, ಮೀನು ಶಿಕಾರಿ, ಬೇಟೆ, ಪಕ್ಷಿ ವೀಕ್ಷಣೆ, ಕೃಷಿ, ಯಂತ್ರ ರಿಪೇರಿ, ಚಾರಣ, ಕಂಪ್ಯೂಟರ್ ಬಗೆಗಿನ ಕುತೂಹಲ ಹಾಗೂ ಅದರ ಬಳಕೆಯ ಸಾಧ್ಯತೆಗಳು, ಅಡುಗೆ ಹೀಗೆ ಹತ್ತು ಹಲವು ಇವರ ಆಸಕ್ತಿ, ಅಭಿರುಚಿ, ಕುತೂಹಲಗಳಾಗಿದ್ದವು. ಹಾಗಾಗಿ ತೇಜಸ್ವಿ ಎಂದರೇನೆ ಒಂದು ವಿಸ್ಮಯ, ನಿಗೂಢ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications