ವಿನಯ್ ಗುರೂಜಿ ವಿರುದ್ಧ ಪೋಸ್ಟ್; ಕ್ಷಮೆ ಯಾಚಿಸಿದ ಆರೋಪಿಗಳು

ಚಿಕ್ಕಮಗಳೂರು, ಜೂನ್ 7: ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದವರು ತಪ್ಪೊಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ.

ಕೆಲವೇ ದಿನಗಳ ಹಿಂದೆ, ಭೂತಾರಾಧನೆ, ನಾಗಾರಾಧನೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿನಯ್ ಗುರೂಜಿ ವಿರುದ್ಧ ಕರಾವಳಿ ಭಾಗದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಒಂದೂವರೆ ಎರಡು ಕೋಟಿ ರೂಪಾಯಿ ಖರ್ಚು ಮಾಡಿ ನಾಗಮಂಡಲ ಮಾಡುವ ಬದಲು ಜನರಿಗೆ ರಸ್ತೆ ಮಾಡಬಾರದಾ ಎನ್ನುವ ಹೇಳಿಕೆಗೆ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ವಿನಯ್ ಗುರೂಜಿ ತೇಜೋವಧೆ ಮಾಡುವಂಥ ಪೋಸ್ಟ್ ಗಳನ್ನು ಹಾಕಲಾಗಿತ್ತು. ಮಂಗಳೂರು ಮೂಲದ ವ್ಯಕ್ತಿ ಸ್ವಾಮೀಜಿ ತೇಜೋವಧೆ ಮಾಡಿ ಪೋಸ್ಟ್ ಮಾಡಿದ್ದು ಸಾಕಷ್ಟು ಚರ್ಚೆಯಾಗಿತ್ತು. ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳೂ ಬಂದಿದ್ದವು.

the accused have apolized vinay guruji

ಇದಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಭಕ್ತರು ಪೋಸ್ಟ್ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದರು. ಇಂದು ಕೊಪ್ಪದ ಗೌರಿಗದ್ದೆ ಸ್ವರ್ಣಪೀಠೀಕೇಶ್ವರಿ ದತ್ತಾಶ್ರಮಕ್ಕೆ ಬಂದ ಆರೋಪಿಗಳು ಗುರೂಜಿ ಬಳಿ ಕ್ಷಮೆ ಯಾಚಿಸಿದ್ದಾರೆ.

ವಿನಯ್ ಗುರೂಜಿ ನಡೆದಾಡುವ ದೇವರು ಎಂದೇ ಖ್ಯಾತಿ. ರಾಜ್ಯದಲ್ಲೆಡೆ ಲಕ್ಷಾಂತರ ಭಕ್ತರನ್ನು ಹೊಂದಿರುವ ವಿನಯ್ ಗುರೂಜಿ, ಈಚೆಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+