ಚಿಕ್ಕಮಗಳೂರಿನಲ್ಲಿ ವಿಷ ಪ್ರಾಶನದ ಹಲಸು ತಿನ್ನಿಸಿದ ದುರುಳರು; ಮೂರು ದನಗಳ ಸಾವು

ಚಿಕ್ಕಮಗಳೂರು, ಜೂನ್ 9: ಕೆಲವೇ ದಿನಗಳ ಹಿಂದೆ ಕೇರಳದ ತಿರುವನಂತಪುರಂನಲ್ಲಿ ಪಟಾಕಿ ತುಂಬಿದ ಅನಾನಸ್ ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಆಹಾರ ಹುಡುಕಿಕೊಂಡು ಕಾಡಿನಿಂದ ಬಂದಿದ್ದ ಗರ್ಭಿಣಿ ಆನೆಗೆ ಸ್ಥಳೀಯರು ಅನಾನಸ್ ನೀಡಿದ್ದು, ಆ ಆನೆಯ ದುರಂತ ಸಾವಿಗೆ ಕಾರಣರಾಗಿದ್ದಕ್ಕೆ ಎಲ್ಲೆಡೆ ಆಕ್ರೋಶ ಕೇಳಿಬಂದಿತ್ತು. ನೋವನ್ನು ತಡೆದುಕೊಳ್ಳಲಾರದೆ, ಏನನ್ನೂ ತಿನ್ನಲಾರದೆ ಆನೆಯು ನೀರಿನಲ್ಲಿ ನಿಂತು ಪಡಬಾರದ ಕಷ್ಟ ಪಟ್ಟು ಪ್ರಾಣ ಬಿಟ್ಟ ಆ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದೀಗ ಅಂಥದ್ದೇ ಒಂದು ಘಟನೆ ಚಿಕ್ಕಮಗಳೂರಿನಲ್ಲಿಯೂ ನಡೆದಿದೆ. ಚಿಕ್ಕಮಗಳೂರಿನ ಬಸರವಳ್ಳಿಯಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಸಾಯಿಸಿದ್ದಾರೆ ದುರುಳರು.

Three Cattle Dies In Chikkamagaluru By Eating Poison Mixed Jackfruit

ಮೇಯಲು ಬಂದ ಮೂರು ದನಗಳು ಈ ಹಲಸನ್ನು ತಿಂದು ಹೊಲದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿವೆ. ಈ ದನಗಳು ಕಿಟ್ಟೇಗೌಡ, ಮಧು ಎಂಬುವರಿಗೆ ಸೇರಿದ್ದಾಗಿವೆ. ತೋಟಕ್ಕೆ ದನಗಳು ನುಗ್ಗುತ್ತವೆಂದು ಈ ರೀತಿ ವಿಷ ಪ್ರಾಶನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕೆ ಪ್ರಾಣಿಗಳ ಜೀವವನ್ನೇ ಲೆಕ್ಕಕ್ಕೆ ತೆಗೆದುಕೊಳ್ಳದೇ ಹೀಗೆ ವಿಷ ಪ್ರಾಶನ ಮಾಡಿರುವುದು ಮಾನವೀಯತೆಯನ್ನೇ ಮರೆತಿರುವುದಕ್ಕೆ ಒಂದು ಉದಾಹರಣೆಯಂತಿದೆ.

ಈ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+