ಭದ್ರಾ ಜಲಾಶಯದ ಕಾಲುವೆಯಲ್ಲಿ ಮುಳುಗಿ ಮೂವರು ಸಾವು, ಒಬ್ಬರ ಮೃತದೇಹ ಪತ್ತೆ, ಮುಂದುವರಿದ ಶೋಧಕಾರ್ಯ
ಚಿಕ್ಕಮಗಳೂರು, ಮೇ, 22: ನೀರಿನಲ್ಲಿ ಆಟ ಆಡುವಾಗ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಜಲಾಶಯದ ಬಲದಂಡೆ ಕಾಲುವೆಯಲ್ಲಿ ನಡೆದಿದೆ.
ನೀರಿನಲ್ಲಿ ಆಟವಾಡುವಾಗ ಆಯಾ ತಪ್ಪಿ ಬಿದ್ದಿದ್ದು, ಒಬ್ಬರ ರಕ್ಷಣೆಗೆ ಮತ್ತೊಬ್ಬರು ಹೋದಾಗ ಮೂವರು ಸಾವನ್ನಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ರವಿ (31), ಅನನ್ಯ (17), ಶಾಮವೇಣಿ (16) ಮೃತ ದುರ್ದೈವಿಗಳಾಗಿದ್ದಾರೆ.

ರವಿ ಮೂಲತಃ ಲಕ್ಕವಳ್ಳಿ ನಿವಾಸಿ ಆಹಿದ್ದು, ಇನ್ನು ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳು ಆಗಿದ್ದಾರೆ.ಅನನ್ಯ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರು ಎಂದು ತಿಳಿದುಬಂದಿದೆ. ಲಕ್ಕವಳ್ಳಿಗೆ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇದೀಗ ಅನನ್ಯ ಮೃತದೇಹ ಪತ್ತೆ ಆಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.ಸದ್ಯ ಈ ಪ್ರಕರಣ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎನ್ನುವ ಮಾಹಿತಿ ತಿಳಿಬಂದಿದೆ. ಇನ್ನು ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ, ಪರಿಶೀಲನೆ ನಡೆಸಿದರು.
ವ್ಯಕ್ತಿಯೋರ್ವನ ಬಲಿ ಪಡೆದ ಮಳೆರಾಯ
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಅದರಲ್ಲೂ ರೈತರಿಗೆ ಈ ಮಳೆ ಸಂತಸ ತಂದಿದ್ದರೆ, ಮತ್ತೆ ಕೆಲವೆಡೆ ಅನಾಹುತಗಳು ಸಹ ಸೃಷ್ಟಿಯಾಗಿವೆ. ಹಾಗೆಯೆ ಮೊದಲ ಮಳೆಯೇ ವ್ಯಕ್ತಿಯೋರ್ವನ ಬಲಿ ಪಡೆದುಕೊಂಡ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಗ್ರಾಮದ ಬಳಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಮರ ಮೇಲೆ ಬಿದ್ದ ಹಿನ್ನೆಲೆ, ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಗ್ರಾಮದ ಬಳಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ವೇಣುಗೋಪಾಲ್ (45) ಮೃತಪಟ್ಟ ವ್ಯಕ್ತಿ ಆಗಿದ್ದು, ಇವರು ಚಿಕ್ಕಹಳ್ಳ ಗ್ರಾಮದಲ್ಲಿ ಹೋಮ್ ಸ್ಟೇ ನಡೆಸುತ್ತಿದ್ದರು. ಮೂಡಿಗೆರೆ ಸುತ್ತಮುತ್ತ ಭಾನುವಾರ ಮಧ್ಯಾಹ್ನದ ವೇಳೆ ಬಿರುಗಾಳಿ ಸಮೇತ ಭಾರೀ ಮಳೆಯಾಗಿದ್ದು, ಈ ವೇಳೆ ವೇಣುಗೋಪಾಲ್ ಸ್ಕೂಟಿಯಲ್ಲಿ ತೆರಳುವಾಗ ಮೇಲೆ ಮರ ಬಿದ್ದು ಅವರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉತ್ತರ ಕರ್ನಾಟಕ ಮೂಲದವರಾದ ವೇಣುಗೋಪಾಲ್ ಅವರು ಮೂಡಿಗೆರೆಯಲ್ಲಿ ನೆಲೆಸಿದ್ದರು. ಹೋಮ್ ಸ್ಟೇ ಹಾಗೂ ಮೂಡಿಗೆರೆ ಪಟ್ಟಣದಲ್ಲಿ ಬಳೆ ಅಂಗಡಿ ಇಟ್ಟುಕೊಂಡಿದ್ದರು. ಇನ್ನು ಗಾಳಿಯ ಆರ್ಭಟಕ್ಕೆ ಮೂರು ಮರಗಳು ಏಕಕಾಲದಲ್ಲಿ ಬಿದ್ದ ಪರಿಣಾಮ, ಮರದಡಿ ಸಿಲುಕಿದ ವೇಣುಗೋಪಾಲ್ ಅವರು ಸ್ಥಳದಲ್ಲೇ ವೃತಪಟ್ಟಿದ್ದಾರೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ
ಇನ್ನು ಬಿಸಿಲಿನ ಧಗೆಗೆ ಬೆಂಕಿಯಂತೆ ಕಾದಿದ್ದ ಕಾಫಿನಾಡ ಮಲೆನಾಡು ಭಾಗದ ಭೂಮಿಗೆ ವರುಣದೇವ ತಂಪೆರೆದಿದ್ದಾನೆ. ಭಾನುವಾರ ಸತತ 2 ಗಂಟೆಗಳ ಕಾಲ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿದಿದ್ದು, ಈ ಹಿನ್ನೆಲೆ ಇಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆ ಆಗಿದೆ. ಇದೀಗ ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಮತ್ತೊಂದೆಡೆ ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಡಿ ಘಾಟ್ನಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ ಉಂಟಾಗಿದೆ.
ಮಲೆನಾಡಿಗರಿಗೆ ಮಳೆ ತೀರಾ ಅನಿವಾರ್ಯ ಆಗಿತ್ತು. ಮಳೆ ಇಲ್ಲದೆ ಕೃಷಿಕರಿಗೆ ಕಾಫಿ, ಅಡಿಕೆ ಹಾಗೂ ಮೆಣಸನ್ನು ಉಳಿಸಿಕೊಳ್ಳುವುದೇ ಕಷ್ಟವಾಗಿತ್ತು. ಬೆಳೆಗಳಿಗೆ ನಿತ್ಯ ನೀರಿನ ಸೌಲಭ್ಯ ಕಲ್ಪಿಸುವುದು ಅಸಾಧ್ಯವಾಗಿತ್ತು. ಕಳೆದ ವರ್ಷ ಈ ವೇಳೆ ಮಲೆನಾಡಿನಲ್ಲಿ ಸಮೃದ್ಧ ಮಳೆ ಆಗಿತ್ತು. ಹಾಗಾಗಿ, ಮೇ ಮುಗಿಯುವ ಹಂತಕ್ಕೆ ಬಂದರೂ ಮಳೆಯಾಗದಿದ್ದನ್ನು ಕಂಡು ಮಲೆನಾಡಿಗರು ಆತಂಕಕ್ಕೆ ಒಳಗಾಗಿದ್ದರು.
ನಿತ್ಯ ಸಂಜೆ ವೇಳೆಗೆ ಮೋಡ ಕಡುಗಟ್ಟುತ್ತಿದ್ದರೂ ಮಳೆ ಆಗುತ್ತಿರಲಿಲ್ಲ. ಇದೀಗ, ಭಾರೀ ಗುಡುಗು-ಸಿಡಿಲಿನ ಸಮೇತ ಧಾರಾಕಾರವಾಗಿ ಆಲುಕಲ್ಲು ಮಳೆ ಸುರಿಯುತ್ತಿದ್ದು, ಇದರಿಂದ ಮಲೆನಾಡಿಗರು ಸಂತಸಗೊಂಡಿದ್ದಾರೆ.
ಗಡಿ ಜಿಲ್ಲೆಯಲ್ಲೂ ವರುಣಾರ್ಭಟ
ಭಾನುವಾರ (ಮೇ 21) ರಂದು ಅಬ್ಬರದ ಮಳೆ ಸುರಿದ ಕಾರಣ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಅದೇ ರೀತಿ ಅಬ್ಬರದ ಮಳೆಗೆ ಚಾಮರಾಜನಗರ ಜಿಲ್ಲೆಯ ಹಲವೆಡೆ ಮನೆಗಳು, ದಿನಬಳಕೆ ವಸ್ತುಗಳು, ಕೃಷಿ ಬೆಳೆಗಳು, ಕ್ರೀಡಾಂಗಣ ಸಂಪೂರ್ಣವಾಗಿ ಜಲಾವೃತವಾಗಿವೆ. ಇದರಿಂದ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಹಾಗಾದರೆ ಜಿಲ್ಲೆಯ ಯಾವ ಭಾಗಗಳಲ್ಲಿ ಹೆಚ್ಚು ಹಾನಿ ಆಗಿದೆ ಎಂದು ಇಲ್ಲಿ ತಿಳಿಯಿರಿ.
ಹನೂರು ತಾಲೂಕು ವ್ಯಾಪ್ತಿಯಲ್ಲಿ ವಿವಿಧಡೆ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಕೆಲವಡೆ ಮರಗಳು ಮುರಿದು ಬಿದ್ದಿವೆ. ಇನ್ನೂ ಕೆಲವಡೆ ಮನೆ ಮೇಲ್ಚಾವಣಿ ಹಾರಿ ಹೋಗಿರುವ ಘಟನೆಗಳು ಜರುಗಿವೆ.
ಪಟ್ಟಣ ಸೇರಿದಂತೆ ತಾಲೂಕಿನ ಸುತ್ತಮುತ್ತ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿರುವ ಪರಿಣಾಮ ಕೆಲವಡೆ ಮರಗಳು ಮುರಿದು ಬಿದ್ದು ಸಂಚಾರಕ್ಕೆ ತೊಂದರೆ ಆಗಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಇನ್ನು ಹನೂರು ಪಟ್ಟಣದಲ್ಲಿ ಬಾಲು ಎಂಬುವವರ ಮನೆ ಮೇಲೆ ಇರುವ ನೀರಿನ ಟ್ಯಾಂಕ್ನ ಮೇಲೆ ಮರವೊಂದು ಮುರಿದು ಬಿದ್ದು, ಟ್ಯಾಂಕ್ ಹೊಡೆದು ಹೋಗಿದೆ. ಜೊತೆಗೆ ಮನೆಯ ಮೇಲೆ ಮರ ಬಿದ್ದಿರುವುದರಿಂದ ಗೋಡೆಗೂ ಹಾನಿ ಆಗಿದೆ.
ಅಲ್ಲದೇ ಕೆ.ಇ.ಬಿ ಮುಂಭಾಗ ಇರುವ ಬಡಾವಣೆಯೊಂದರ ಕ್ರಷ್ಣ ನಾಯ್ಡು ಎಂಬುವವರ ಮನೆಯ ಸೀಟ್ ಗಾಳಿಗೆ ಹಾರಿ ಹೋಗಿದ್ದು, ಮತ್ತೊಂದೆಡೆ ಮನೆಯಲ್ಲಿದ್ದ ದಿನಬಳಕೆಯ ವಸ್ತುಗಳು ನೀರುಪಾಲಾಗಿವೆ
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications