ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ಗೆ ವಿದ್ಯುತ್ ತಂತಿ ತಗುಲಿ ಮೂವರು ಧಾರುಣ ಸಾವು
ಚಿಕ್ಕಮಗಳೂರು, ಸೆಪ್ಟೆಂಬರ್ 7 : ಗಣಪತಿ ವಿಸರ್ಜನೆ ಮಾಡಿ ಹಿಂದಿರುಗುತ್ತಿದ್ದ ವೇಳೆ ಟ್ಯಾಕ್ಟರ್ ನಲ್ಲಿದ್ದ ಮಂಟಪಕ್ಕೆ ಮಾಡಿದ್ದ ಅಲಂಕೃತ ಕಮಾನಿಗೆ ವಿದ್ಯುತ್ ತಂತಿ ತಗುಲಿ ಮೂವರು ಮೃತ ಪಟ್ಟು, 6 ಮಂದಿ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತರನ್ನು ಜಿ.ಹೊಸಳ್ಳಿ ಗ್ರಾಮದ ರಾಜು(50), ಪಾರ್ವತಿ(28) ಹಾಗೂ ರಚನಾ(22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಂಗೀತಾ(18) ಎಂಬ ಯುವತಿ ಹಾಗೂ ಹಾಗೂ ಪಲ್ಲವಿ(13) ಎಂಬ ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌರಿ(40) ಮಹಿಳೆ ವಿದ್ಯುತ್ ಪ್ರವಹಿಸಿ ಅಸ್ವಸ್ಥರಾಗಿದ್ದು, ಅವರಿಗೆ ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚೌತಿ ಹಬ್ಬದ ಅಂಗವಾಗಿ ಜಿ.ಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಗಿದ್ದು, ಮಂಗಳವಾರ ರಾತ್ರಿ ಟ್ರ್ಯಾಕ್ಟರ್ ಮೂಲಕ ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ನದಿಯಲ್ಲಿ ವಿಸರ್ಜನೆ ಮಾಡಲಾಗಿತ್ತು. ಹಿಂದಿರುಗುತ್ತಿದ್ದ ವೇಳೆ ಟ್ಯಾಕ್ಟರ್ಗೆ ಕಟ್ಟಲಾಗಿದ್ದ ಕಮಾನು ರಸ್ತೆ ಬದಿಯಲ್ಲಿದ್ದ ವಿದ್ಯುತ್ ತಂತಿಗೆ ತಗುಲಿದೆ. ಪರಿಣಾಮ ಟ್ಯಾಕ್ಟರ್ನಲ್ಲಿ ಕುಳಿತಿದ್ದವರಿಗೆ ವಿದ್ಯುತ್ ಪ್ರವಹಿಸಿದೆ. ಟ್ಯಾಕ್ಟರ್ ಚಾಲಕ ಟ್ರ್ಯಾಕ್ಟರ್ನ ಇಂಜಿನ್ ಮೇಲೆ ಕುಳಿತಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದು ಬಂದಿದೆ.

ಕತ್ತಲ್ಲಿ ನಡೆದ ಅವಘಡ
ಕಳೆದ ರಾತ್ರಿ ಗಣಪತಿ ವಿಸರ್ಜಿಸಿ ಮನೆಗೆ ಹಿಂತಿರುವಾಗ ಈ ಅಗಘಡ ಸಂಭವಿಸಿದ್ದು ಚಾಲಕನ ನಿರ್ಲಕ್ಷ್ಯ ದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ, ಖುಷಿ ಖುಷಿಯಿಂದ ಗಣೇಶನ ವಿಸರ್ಜಿಸಿ ಮಾಡಿ ಮನೆಗೆ ವಾಪಸ್ಸು ಆಗುವ ವೇಳೆ ಈ ಅಪಘಾತ ಸಂಭವಿಸಿದ್ದು ಜಿ ಹೊಸಳ್ಳಿ ಗ್ರಾಮದಲ್ಲಿ ಸೂತಕ ಛಾಯೆ ಆವರಿಸಿದೆ.
ಜೀವನ್ಮರಣ ಹೋರಾಟದಲ್ಲಿರುವ ಬಾಲಕಿ, ಓರ್ವ ಯುವತಿ
ಇನ್ನು ಘಟನೆಯಲ್ಲಿ ಇನ್ನು ಇಬ್ಬರು ಜೀವನ್ಮರಣ ಹೋರಾಟದಲ್ಲಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಟ್ರಾಕ್ಟರ್ ನಲ್ಲಿ ಕುಳಿತ್ತಿದ್ದ ಸಂಗೀತ ಹಾಗೂ ಪಲ್ಲವಿ ಎಂಬುವವರು ಜೀವನ್ಮರಣ ಹೋರಾಟ ಮಾಡುತ್ತಿದ್ದಾರೆ. ಹಬ್ಬದ ವಾತಾವರಣ ವಿದ್ದ ಮನೆಯಲ್ಲಿಗ ನೀರವ ಮೌನ ಆವರಿಸಿದ್ದು ಮಕ್ಕಳು ಬದುಕುಳಿಯಲ್ಲಿ ಎಂದು ದೇವರಲ್ಲಿ ತಂದೆ ತಾಯಿ ಬೇಡಿಕೊಳ್ಳುತ್ತಿದ್ದಾರೆ. ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications