ಚಾರ್ಮಾಡಿ ಘಾಟ್ನಲ್ಲಿ ಪ್ರವಾಸಿಗರ ಹುಚ್ಚಾಟ: ಜಾರುವ ಬಂಡೆಗಳ ಮೇಲೆ ರೀಲ್ಸ್..ಡಾನ್ಸ್
ಚಿಕ್ಕಮಗಳೂರು, ಜುಲೈ 01: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಹದಿನೈದು ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಚಿಕ್ಕಮಗಳೂರು ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಅಲ್ಲಲ್ಲಿ ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿದೆ. ಇಂತಹ ಜಲಪಾತಗಳನ್ನು ನೋಡಲು ಮಳೆಗಾಲದಲ್ಲಿ ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಜೊತೆಗೆ ಪ್ರವಾಸಿಗರ ಹುಚ್ಚಾಟ ಕೂಡ ಮಿತಿ ಮೀರುತ್ತಿದೆ.
ಚಾರ್ಮಾಡಿ ಘಾಟಿಯಲ್ಲಿ ಜಾರುವ ಬಂಡೆಗಳ ಪ್ರವಾಸಿಗರ ಹುಚ್ಚಾಟ ಹೆಚ್ಚಾಗುತ್ತಿದ್ದು, ಜಲಪಾತಗಳ ಮಧ್ಯೆ ಹೋಗಿ ಪ್ರವಾಸಿಗರು ಮೋಜು-ಮಸ್ತಿ ಮಾಡುವ ದೃಶ್ಯಗಳು ಕಂಡು ಬರುತ್ತಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಜಲಪಾತಗಳ ಬಳಿ ಈ ಘಟನೆಗಳು ನಡೆಯುತ್ತಿದ್ದು, ಬಂಡೆಗಳ ಮೇಲೆ ಹತ್ತದಂತೆ ನಾಮಫಲಕ ಇದ್ದರೂ ಸಹ ಪ್ರವಾಸಿಗರು ಡೋಂಟ್ ಕೇರ್ ಎನ್ನುತ್ತಿದ್ದಾರೆ.

ಪ್ರವಾಸಿಗರ ಈ ಹುಚ್ಚಾಟಕ್ಕೆ ಬ್ರೇಕ್ ಹಾಕಲು ಪೊಲೀಸರು ಗಸ್ತು ತಿರುಗುತ್ತಿದ್ದರೂ ಸಹ ಅವರ ಕಣ್ಣು ತಪ್ಪಿಸಿ ಬಂಡೆಗಳ ಮೇಲೆ ಹತ್ತಿ ಅಪಾಯದ ಸ್ಥಳದಲ್ಲಿ ಪ್ರವಾಸಿಗರು ಡ್ಯಾನ್ಸ್, ರೀಲ್ಸ್ಗಳನ್ನು ಮಾಡುತ್ತಿದ್ದಾರೆ. ಪೊಲೀಸರು ಒಂದು ಕಡೆ ಓಡಿಸಿದರೆ ಮತ್ತೊಂದು ಕಡೆ ಹೋಗಿ ಪ್ರವಾಸಿಗರು ಬಂಡೆ ಹತ್ತುತ್ತಿದ್ದಾರೆ. ಅಲ್ಲದೇ ಜಲಪಾತಗಳ ಬಳಿ ಕಾರು ಹಾಗೂ ಇತರ ವಾಹನಗಳನ್ನು ನಿಲ್ಲಿಸಿಕೊಂಡು ರಸ್ತೆ ಬದಿಯೂ ಡ್ಯಾನ್ಸ್ ಮಾಡುತ್ತಿದ್ದು, ಬೇರೆ ಪ್ರವಾಸಿಗರು ಸಂಚರಿಸಲು ತೊಂದರೆ ಕೊಡುತ್ತಿದ್ದಾರೆ.
ಚಾರ್ಮಾಡಿ ಘಾಟ್ ಜಲಪಾತಗಳ ಜಾರುವ ಬಂಡೆಗಳ ಮೇಲೆ ಸ್ವಲ್ಪ ಆಯತಪ್ಪಿದರೂ ದೊಡ್ಡ ಮಟ್ಟದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ಹಿಂದೆ ಕೆಲವರು ಬಿದ್ದು ಕೈ-ಕಾಲು ಮುರಿದುಕೊಂಡಿದ್ದಾರೆ. ಇನ್ನೂ ಕೆಲವರು ಜೀವ ಕಳೆದುಕೊಂಡಿದ್ದಾರೆ. ಹೀಗಿದ್ದರೂ ಸಹ ಪ್ರವಾಸಿಗರು ಇಂತಹ ಅಪಾಯ ಸ್ಥಳಗಳಲ್ಲಿ ಹುಚ್ಚಾಟ ಮೆರೆಯುತ್ತಿದ್ದಾರೆ.
ಪ್ರಾಣದ ಹಂಗು ತೊರೆದು ರೀಲ್ಸ್, ಡಾನ್ಸ್ನಲ್ಲೇ ಮುಳುಗುತ್ತಿರುವುದು ಗಸ್ತು ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೆ ಪ್ರವಾಸಕ್ಕೆ ಹೋಗುವವರು ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಅಪಾಯಕಾರಿ ಸಾಹಸಗಳನ್ನು ಮಾಡದಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications