ಮೂಡಿಗೆರೆ: ಚಾರ್ಮಾಡಿ ಘಾಟ್ ಬಳಿ ಮತ್ತೆ ಮುಂದುವರೆದ ಪ್ರವಾಸಿಗರ ಪುಂಡಾಟ
ಚಿಕ್ಕಮಗಳೂರು, ಆಗಸ್ಟ್, 21: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಪ್ರವಾಸಿಗರು ಮತ್ತೆ ಪುಂಡಾಟ ಮುಂದುವರೆಸಿದ್ದಾರೆ. ಎಚ್ಚರಿಕೆಯ ನಾಮಫಲಕವಿದ್ದರೂ ಅಪಾಯದ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಪ್ರವಾಸಿಗರು ಪುಂಡಾಟ ಮೆರೆಯುತ್ತಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಭಾರೀ ಮಳೆ ಹಿನ್ನೆಲೆ ಪ್ರವಾಸಿಗರ ಪುಂಡಾಟ ಹೆಚ್ಚಾಗಿದ್ದು, ಆಗಿನಿಂದ ಇದಕ್ಕೆಲ್ಲ ಬ್ರೇಕ್ ಹಾಕುವ ನಿಟ್ಟಿನಲ್ಲಿ ಚಾರ್ಮಾಡಿ ಘಾಟ್ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಮತ್ತೇ ಇದೀಗ ಪೊಲೀಸರ ಕಣ್ಣುತಪ್ಪಿಸಿ ಪ್ರವಾಸಿಗರು ಅಪಾಯದ ಸ್ಥಳಗಳಲ್ಲಿರುವ ಬಂಡೆಗಳ ಮೇಲೆ ನಿಂತು ಸೆಲ್ಫಿ ತೆಗೆದುಕೊಂಡು ಪುಂಡಾಟ ಮೆರೆಯುತ್ತಿದ್ದಾರೆ.

ರಸ್ತೆ ಮಧ್ಯಯೇ ವಾಹನಗಳನ್ನು ನಿಲ್ಲಿಸಿ ಎಂಜಾಯ್ ಮಾಡುವುದಲ್ಲದೇ ಸಂಚಾರಕ್ಕೂ ಅಡ್ಡಿ ಮಾಡುತ್ತಿದ್ದಾರೆ. ಇನ್ನು ಇದರಿಂದ ಬೇಸತ್ತ ಸ್ಥಳೀಯರು ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.
ಪ್ರವಾಸಿಗರ ಅಟ್ಟಹಾಸ ಕಂಟಿನ್ಯೂ
ಇನ್ನು ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅಟ್ಟಹಾಸ ಮುಂದುವರೆದ್ದು, ಇದಕ್ಕೆ ಏನಾದರೂ ಮಾಡಿ ಕಡಿವಾಣ ಹಾಕಲೇಬೇಕು ಎನ್ನುವ ಆಲೋಚನೆ ಸ್ಥಳೀಯರದ್ದಾಗಿತ್ತು. ಇದಕ್ಕೆ ಸಮಯ ಒದಗಿಬಂದಿದ್ದು, ಲಿಂಗದಹಳ್ಳಿ ಠಾಣೆಯ ಪೊಲೀಸರು ಪ್ರವಾಸಿಗರಿಂದಲೇ ಕಸವನ್ನು ಬಾಚಿಸುವ ಮೂಲಕ ಪುಂಡಾಟಕ್ಕೆ ಬ್ರೇಕ್ ಹಾಕಿದ್ದರು.
ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ-ಕೆಮ್ಮಣ್ಣುಗುಂಡಿ ರಸ್ತೆ ಮಾರ್ಗದಲ್ಲಿ ಬಿಯರ್ ಬಾಟಲಿ ಎಸೆದು ಪುಂಡಾಟ ಮೆರೆದವರಿದಂಲೇ ಪೊಲೀಸರು ಅಲ್ಲಿನ ಕಸವನ್ನು ಬಾಚಿಸಿದ್ದು, ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಹೀಗೆ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಎಲ್ಲೆಂದರಲ್ಲೇ ಕುಡಿದು ಬಾಟಲ್ ಬಾಟೆಲ್, ಪ್ಲಾಸ್ಟಿಕ್ ಎಸೆದವರಿಗೆ ಪೊಲೀಸರು ಪುಲ್ ಕ್ಲಾಸ್ ತೆಗೆದುಕೊಂಡಿದ್ದರು.
ಚಾರ್ಮಾಡಿ ಘಾಟ್ನಲ್ಲಿ ಪ್ರವಾಸಿಗರ ಪುಂಡಾಟ
ಈ ಹಿಂದೆ ಚಾರ್ಮಾಡಿಘಾಟಿ ಪ್ರದೇಶದಲ್ಲಿನ ಚಿಕ್ಕಮಗಳೂರು ಮಂಗಳೂರು ರಸ್ತೆಯಲ್ಲಿ ಪ್ರವಾಸಿಗರು ವಾಹನಗಳನ್ನು ನಿಲ್ಲಿಸಿಕೊಂಡು ಅಸಭ್ಯವಾಗಿ ಡ್ಯಾನ್ಸ್ ಮಾಡುವುದು, ಇತರೆ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ದೂರುಗಳು ಕೇಳಿಬಂದಿದ್ದವು. ಬಳಿಕ ಇಲ್ಲಿಗೆ ಪೊಲೀಸ್ ಗಸ್ತು ಹೆಚ್ಚಿಸಿ ಪ್ರವಾಸಿಗರ ಅಸಭ್ಯ ವರ್ತನೆಗೆ ಕಡಿವಾಣ ಹಾಕಲಾಗಿತ್ತು.
ಇದೀಗ ಮತ್ತೆ ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಲ್ಲೊಂದಾಗಿರುವ ದೇವರ ಮನೆಗೆ ಸಾಗುವ ಮಾರ್ಗದಲ್ಲಿ ಪ್ರವಾಸಿಗರು ಅಸಭ್ಯ ವರ್ತನೆ ತೋರುತ್ತಿದ್ದು, ಇದಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕೆಂದು ಇಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ.
ಚಾರ್ಮಾಡಿ ಘಾಟ್ನಲ್ಲಿ ಪ್ರವಾಸಿಗರ ಪುಂಡಾಟ ಇನ್ನು ಇತ್ತೀಚೆಗಷ್ಟೇ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಹುತೇಕ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೆ ಕೆಲವೆಡೆ ಬೆಟ್ಟ, ಗುಡ್ಡಗಳು ಕೂಡ ಕುಸಿದಿವೆ. ಆದ್ದರಿಂದ ಮುಂಜಾಗ್ರತೆಗಾಗಿ ಯಾವುದೇ ಅನಾಹುತಗಳು ಸಂಭವಿಸಬಾರದು ಅನ್ನುವ ನಿಟ್ಟಿನಲ್ಲಿ ಮಳೆ ಕಡಿಮೆಯಾಗುವವರೆಗೂ ಜಿಲ್ಲೆ ಪ್ರವಾಸ ನಿಲ್ಲಿಸಿ ಎಂದು ಚಿಕ್ಕಮಗಳೂರು ಎಸ್ಪಿ ಪ್ರವಾಸಿಗರಲ್ಲಿ ಮನವಿ ಮಾಡಿದ್ದರು. ಆದರೂ ಕೂಡ ಇಂದು ಚಾರ್ಮಾಡಿ ಘಾಟ್ನಲ್ಲಿ ಪ್ರವಾಸಿಗರು ಪುಂಡಾಟ ಮೆರೆದಿದ್ದರು.
ಪ್ರವಾಸಿಗರು ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಡೇಂಜರ್ ಬಂಡೆ ಮೇಲೆ ಹತ್ತಿ ಸೆಲ್ಪೀ ಕ್ಲಿಕ್ಕಿಸಿಕೊಳ್ಳುವ ಮೂಲಕ ಹುಚ್ಚಾಟ ಮೆರೆದಿದ್ದರು. ಇಲ್ಲಿಂದ ಸ್ವಲ್ಪ ಜಾರಿದರೂ ದೊಡ್ಡ ಮಟ್ಟದ ಅಪಾಯ ಸಂಭವಿಸುವುದಂತೂ ಗ್ಯಾರಂಟಿ. ಈಗಾಗಲೇ ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ಜಲಪಾತದಲ್ಲಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆಯೂ ನಡೆದಿತ್ತು.
ಜಿಲ್ಲಾಡಳಿತ, ಪೊಲೀಸ್ ಬೇಡ ಅಂತಾ ಮನವಿ ಮಾಡಿದ್ದರೂ ಕೂಡ ಪ್ರವಾಸಿಗರು ಮಾತ್ರ ಚಾರ್ಮಾಡಿ ಘಾಟಿಯ ಅಪಾಯದ ಸ್ಥಳದಲ್ಲಿರುವ ಕಲ್ಲು, ಬಂಡೆಗಳ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳುವ ಕ್ರೇಜಿಗೆ ಬಿದ್ದಿದ್ದರು.












Click it and Unblock the Notifications