ತೇಜಸ್ವಿ ಪ್ರತಿಷ್ಠಾನದಿಂದ ಆಲೇಕಾನು ರಾಮಗಲ್ಲು ಬೆಟ್ಟಕ್ಕೆ ಚಾರಣ
ಬಣಕಲ್(ಚಿಕ್ಕಮಗಳೂರು), ಡಿಸೆಂಬರ್ 09: ಕೊಟ್ಟಿಗೆಹಾರದಲ್ಲಿರುವ ಕೆಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಪ್ರಕೃತಿ ಅಧ್ಯಯನ ಚಾರಣದ ಅಂಗವಾಗಿ ಕೊಟ್ಟಿಗೆಹಾರದಿಂದ ಆಲೇಕಾನು ರಾಮಗಲ್ಲು ಬೆಟ್ಟಕ್ಕೆ ಚಾರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿದೆಡೆಯಿಂದ ಆಗಮಿಸಿದ ಚಾರಣಿಗರು ಚಾರಣದಲ್ಲಿ ಭಾಗವಹಿಸಿದ್ದರು. 15 ಕಿ.ಮಿ ಕಾಡು ಮತ್ತು ಬಯಲು ಬೆಟ್ಟಗಳ ನಡುವೆ ಸಾಗಿದ ಚಾರಣದ ನಂತರ ರಾಮಗಲ್ಲು ಬೆಟ್ಟದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.
ಚಾರಣಿಗರಾದ ಪ್ರಹ್ಲಾದ್ ಮಾತನಾಡಿ ತೇಜಸ್ವಿಯವರ ಕೃತಿಗಳನ್ನು ಓದಿಕೊಂಡು ಅವರು ನಡೆದಾಡಿದ ಪರಿಸರದಲ್ಲಿ ಕೆಲಕಾಲ ಕಳೆಯುವ ಅವಕಾಶ ಅವಿಸ್ಮರಣೀಯವಾಗಿದ್ದು ಪ್ರಕೃತಿಯ ಸಾಮೀಪ್ಯ ಮನುಷ್ಯನಿಗೆ ಜೀವನೋತ್ಸಾಹ ಹೆಚ್ಚಿಸುತ್ತದೆ ಎಂದರು.

ಚಾರಣಿಗ ರಾಮಚಂದ್ರ ಮಾತನಾಡಿ ಬದುಕಿನ ಜಂಜಾಟಗಳ ನಡುವೆ ಬಿಡುವು ಮಾಡಿಕೊಂಡು ಹಸಿರು ಪರಿಸರ ನಡುವೆ ಕೆಲ ಸಮಯ ಇದ್ದರೆ ಬದುಕನು ಮತ್ತಷ್ಟು ಅರ್ಥಪೂರ್ಣವಾಗಿ ಜೀವಿಸುವ ಉತ್ಸಾಹ ಮೂಡುತ್ತದೆ ಎಂದರು.
ತೇಜಸ್ವಿ ಒಡನಾಡಿ ಬಾಪುದಿನೇಶ್ ಮಾತನಾಡಿ, ತೇಜಸ್ವಿ ಅವರ ಕಾರಣದಿಂದಾಗಿ ಅರಣ್ಯ ಮತ್ತು ಜೀವಸಂಕುಲದ ಬಗ್ಗೆ ಕಾಳಜಿ ವಹಿಸಬೇಕು ಎಂಬ ಅರಿವು ಹೆಚ್ಚಿದೆ. ಮುಂದಿನ ಪೀಳಿಗೆ ಸಮೃದ್ದ ಅರಣ್ಯ ಮತ್ತು ಅಪರೂಪದ ಜೀವಸಂಕುಲವನ್ನು ಉಳಿಸುವ ಅಗತ್ಯವಿದ್ದು ಚಾರಣದ ಮೂಲಕ ಪ್ರಕೃತಿಯ ಸಾಮೀಪ್ಯ ದೊರಕುವುದರಿಂದ ಪರಿಸರ ಉಳಿಸಬೇಕು ಎಂಬ ಅರಿವು ಉಂಟಾಗುತ್ತದೆ ಎಂದರು.
ಸ್ಥಳೀಯರಾದ ಸಂದೀಪ್ ಕೋಳೂರು, ಅತುಲ್ ರಾವ್, ಹರ್ಷ ಬಂಕೇನಹಳ್ಳಿ, ಸುರೇಶ್ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಹಾಗೂ ವಿವಿದೆಡೆಯಿಂದ ಆಗಮಿಸಿದ ಚಾರಣಿಗರು ಇದ್ದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications