ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ, 15 ಜನರಿಗೆ ಗಾಯ
ಚಿಕ್ಕಮಗಳೂರು, ಅಕ್ಟೋಬರ್, 16: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ.
ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಕೆಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೂಲತಃ ಕಾರವಾರ ಜಿಲ್ಲೆಯ ಶಿರಸಿ ಮೂಲದ್ದಾಗಿದೆ ಎಂದು ತಿಳಿದುಬಂದಿದೆ.

ರಸ್ತೆ ಮಧ್ಯೆ ಪಲ್ಟಿಯಾದ ಟಿಟಿ ವಾಹನ ಸುಮಾರು 50 ಅಡಿಯಷ್ಟು ದೂರ ರಸ್ತೆಯಲ್ಲಿ ಉಜ್ಜಿಕೊಂಡು ಹೋಗಿದೆ. ವಾಹನ ಚಾಲಕ ಅತಿಯಾದ ವೇಗವಾಗಿ ಇದ್ದ ಕಾರಣದಿಂದಲೇ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಂತಹ ದುರ್ಘಟನೆ ಸಂಭವಿಸಿಲ್ಲ. ವಾಹನ ಪಟ್ಟಿಯಾದ ಕೂಡಲೇ ಸ್ಥಳೀಯರು ಗಾಡಿಯಲ್ಲಿದ್ದವರನ್ನು ಹೊರ ತಂದು ಯೋಗಕ್ಷೇಮ ವಿಚಾರಿಸಿದ್ದಾರೆ. ಕೆಲವರನ್ನು ಕೂಡಲೇ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಸಾರಿಗೆ ಬಸ್
ಮತ್ತೊಂದೆಡೆ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ (KSRTC) ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಆಗುಂದ ಗ್ರಾಮದಲ್ಲಿ ನಡೆದಿದೆ.
ಅರಸೀಕೆರೆಯಿಂದ ಹುಳಿಯಾರಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಆಗುಂದ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ್ದು, ಈ ವೇಳೆ ನಾಲ್ಕೈದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅರಸೀಕೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಭಾರೀ ಅನಾಹುತ ತಪ್ಪಿದೆ. ಸದ್ಯ ಅರಸೀಕೆಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನುವ ಮಾಹಿತಿ ಎಂದು ತಿಳಿದುಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications