ಉಕ್ಕಿ ಹರಿದ ತುಂಗಾ ನದಿ; ಹರಿಹರಪುರದಲ್ಲಿ ನೂರಾರು ಹೆಕ್ಟೇರ್ ಗದ್ದೆ, ತೋಟಗಳು ಜಲಾವೃತ
ಚಿಕ್ಕಮಗಳೂರು, ಜುಲೈ, 25: ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವೆಡೆ ನದಿ, ಹಳ್ಳ, ಜಲಾಪಾತಗಳು ಅಪಾಯದ ಮಟ್ಟ ಮೀರಿ ಬೋರ್ಗರೆಯುತ್ತಿವೆ. ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆರಾಯನ ಆರ್ಭಟ ಮುಂದುವರೆದಿದೆ. ತುಂಗಾ ನದಿ ಉಕ್ಕಿ ಹರಿದಿದ್ದು, ನದಿ ಪಾತ್ರದ ತೋಟ, ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ.
ತುಂಗಾ ನದಿ ಉಕ್ಕಿ ಹರಿದ ಪರಿಣಾಮ ಕೊಪ್ಪ ತಾಲೂಕಿನ ನರಸೀಪುರ, ಹರಿಹರಪುರದ ನೂರಾರು ಹೆಕ್ಟೇರ್ನ ಗದ್ದೆ-ತೋಟಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನು ಗದ್ದೆಗಳು ಸಂಪೂರ್ಣ ಜಲಾವೃತವಾಗಿದ್ದರಿಂದ ಇಲ್ಲಿನ ರೈತರು ಕಂಗಾಲಾಗಿದ್ದಾರೆ.

ಸಖರಾಯಪಟ್ಟಣ ಬಳಿ ಮಳೆ ಅವಾಂತರ
ಭಾರೀ ಮಳೆ ಹಿನ್ನೆಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸುತ್ತ-ಮುತ್ತಲಿನ ಹೊಲ-ಗದ್ದೆ, ತೋಟಗಳು ಜಲಾವೃತವಾಗಿವೆ. ಮತ್ತೊಂದೆಡೆ 15 ದಿನದ ಹಿಂದೆ ಸಂಪೂರ್ಣ ಖಾಲಿಯಾಗಿದ್ದ ಕಡೂರು ತಾಲೂಕಿನ ಮದಗದ ಕೆರೆ ಇದೀಗ ಮುಕ್ಕಾಲು ಭಾಗ ತುಂಬಿದ್ದು, ಇಲ್ಲಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದಂತಾಗಿದೆ.
ಜಿಲ್ಲೆ ಪ್ರವಾಸ ಮುಂದೂಡುವಂತೆ ಮನವಿ
ಮಳೆಯಿಂದ ಈಗಾಗಲೇ ಜಿಲ್ಲೆಯಲ್ಲಿ ಹಲವು ಜಲಪಾತ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೆ ನದಿ, ಜಲಪಾತಗಳು, ಭೂ ಕುಸಿತದ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಮಳೆ ಕಡಿಮೆಯಾಗುವವರೆಗೂ ಜಿಲ್ಲೆ ಪ್ರವಾಸ ಮುಂದೂಡುವಂತೆ ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ಉಮಾಪ್ರಶಾಂತ್ ಮನವಿ ಮಾಡಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications