ವಿಕ್ರಾಂತ್ ರೋಣ ಶೋ ವೇಳೆ ಝಳುಪಿಸಿದ ಲಾಂಗು, ಮಚ್ಚು; ಥಿಯೇಟರ್ನಲ್ಲೇ ಗ್ಯಾಂಗ್ಗಳ ರಣರಣ ಕದನ
ಚಿಕ್ಕಮಗಳೂರು, ಜುಲೈ, 28 : ಚಿಕ್ಕಮಗಳೂರಿನಲ್ಲಿ ಇಂದು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನದ ವೇಳೆ ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಅಲ್ಲದೆ ಮಿಲನ್ ಥಿಯೇಟರ್ನಲ್ಲಿ ಲಾಂಗ್-ಮಚ್ಚುಗಳು ಜಳಪಿಸಿದ್ದು, ಭರತ್ ಎಂಬಾತನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾನೆ.
ಇಂದು ನಟ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗಿದ್ದು, ಕೆಲವರು ಚಿಕ್ಕಮಗಳೂರು ನಗರದ ಮಿಲನ್ ಥಿಯೇಟರ್ನಲ್ಲಿ ಗೂಂಡಾಗಳಂತೆ ವರ್ತನೆಯನ್ನು ಮೆರೆದಿದ್ದಾರೆ. ಥಿಯೇಟರ್ನಲ್ಲಿ ಮ್ಯಾಟ್ನಿ ಶೋ ಆರಂಭವಾಗುತ್ತಿದ್ದಂತೆ ಬಾಗಿಲ ಪಕ್ಕದ ಸೀಟ್ನಲ್ಲಿ ಕೂತಿದ್ದ ಒಂದು ಯುವಕರ ಗುಂಪು ಮೇಲಿಂದ ಮೇಲೆ ಸುಮ್ಮನೆ ಅಡ್ಡದಿಡ್ಡಿಯಾಗಿ ಹೊರಗಡೆ ಹೋಗೂದು, ಒಳಗಡೆ ಬರೋದು ಮಾಡಿದ್ದಾರೆ.
ಈ ವೇಳೆ ಮತ್ತೊಂದು ಗುಂಪಿನ ಯುವಕರು ಎಷ್ಟು ಸಲ ಹೊರಗೆ ಹೋಗಿ ಬರುತ್ತಿರೋ ಎಂದು ಕೇಳಿದ್ದಾರೆ. ಆಗ ಈ ಎರಡು ಯುವಕರ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಮಾರಾಮಾರಿ ನಡೆದಿದ್ದು, ಲಾಂಗ್-ಮಚ್ಚುಗಳಿಂದ ಹಲ್ಲೆ ಮಾಡಿಕೊಂಡಿದ್ದಾರೆ.

ಥಿಯೇಟರ್ ಒಳಗೆ ಆರಂಭವಾದ ಜಗಳ ಟಾಕೀಸ್ನ ಹೊರಾಂಗಣದಲ್ಲೂ ಮುಂದುವರೆದು ಹಿಗ್ಗಾಮುಗ್ಗಾ ಥಳಿಸಿಕೊಂಡಿದ್ದಾರೆ. ಕೆಲವರು ಘರ್ಷಣೆಯಲ್ಲಿ ಕೆಳಗಡೆ ಬಿದ್ದರೂ ಕೂಡ ಲಾಂಗ್ ಬೀಸಿ ಹಲ್ಲೆ ಮಾಡಿದ ಕಾರಣ ಭರತ್ ಎಂಬ ಯುವಕನಿಗೆ ತೀವ್ರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ನಂತರ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಿದ್ದಾರೆ. ಇನ್ನು ಈ ಬಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭರತ್ ಹೇಳಿಕೆ ನೀಡಿದ್ದು, ಗಣೇಶ್, ಪ್ರೀತಂ, ಈಶ್ವರ್, ಜೀವನ್, ಪ್ರಜ್ವಲ್, ಪನ್ನು, ಸಚಿನ್ ಸೇರಿದಂತೆ ಇನ್ನು ನಾಲ್ಕು ಜನ ನನ್ನ ಮೇಲೆ ಹಲ್ಲೆ ಮಾಡಿದ್ದರೆ ಎಂದಿದ್ದಾನೆ.
ಸ್ಥಳದಲ್ಲಿ ಚಾಕು ಇರಿತವೂ ನಡೆದಿದ್ದು, ರಂಪಾಟವನ್ನೇ ಮಾಡಿದ್ದರು. ನಾಲ್ಕು ಜನರ ಗುಂಪೊಂದು ಭರತ್ನನ್ನು ಚಾಕುವಿನಿಂದ ಚುಚ್ಚಿ ಹೊಡೆದಿದ್ದು, ಆತನ ತಲೆ ಫುಲ್ ಓಪನ್ ಆಗಿದೆ ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಭರತ್ ಕಡೆಯವರ ಹುಡುಗರು ಕೂಡ ಆಸ್ಪತ್ರೆ ಮುಂಭಾಗ ಸೇರಿ ಆಕ್ರೋಶ ಹೊರಹಾಕಿದ್ದಾರೆ.
ಆಸ್ಪತ್ರೆ ಮುಂಭಾಗ ಯುವಕರ ಗುಂಪನ್ನ ಕಂಡ ಪೊಲೀಸರು ಲಾಠಿ ಬಿಸಿ ಅವರೆಲ್ಲರನ್ನೂ ಚದುರಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೇಲ್ನೋಟಕ್ಕೆ ಹಲ್ಲೆಗೆ ಹಳೇ ವೈಷಮ್ಯವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications