ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗೆ ಭಾಜನರಾದ ಕಾಫಿನಾಡಿನ ಶುಶ್ರೂಷಕಿಯರು
ಚಿಕ್ಕಮಗಳೂರು, ನವೆಂಬರ್ 8: ಜಿಲ್ಲೆಯ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಪಿ.ಎಸ್.ಕಾವೇರಿ, ಸಜೀದಾ ಬಾನು ಆರೋಗ್ಯ ಇಲಾಖೆಯಲ್ಲಿನ ಸೇವೆಯನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಪಿಎಸ್.ಕಾವೇರಿಯವರು ಇತ್ತೀಚೆಗೆ ನಿವೃತ್ತರಾಗಿದ್ದು, ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಜಾವಳಿ ಹಾಗೂ ಚಿಕ್ಕಮಗಳೂರು ತಾಲ್ಲೂಕು ಕೇಂದ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಹಾಗೇ ಸಹೀದಾ ಬಾನು ಅವರು ಸದ್ಯ ತರೀಕೆರೆ ತಾಲ್ಲೂಕು ಲಕ್ಕವಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದು ಇವರ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಮಟ್ಟದ ಫ್ಲಾರೆನ್ಸ್ ಸೈಟಿಂಗೇಲ್ ಪ್ರಶಸ್ತಿನೀಡಿ ಗೌರವಿಸಲಾಗಿದೆ.
ಸುಬ್ರಾಯ ಭಟ್ಟ ಮತ್ತು ಸೀತಮ್ಮ ದಂಪತಿಯ ಪುತ್ರಿಯಾಗಿರುವ ಕಾವೇರಿ ಹಾಸನ ಜಿಲ್ಲೆಯ ಅರಕಲಗೂಡಿನ ಮಲ್ಲಿಪಟ್ಟಣದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. 2021ರಲ್ಲಿ ಚಿಕ್ಕಮಗಳೂರು ತಾಲ್ಲೂಕು ಆರೋಗ್ಯ ಕೇಂದ್ರದಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿಯಾಗಿದ್ದರು.

ಪ್ರಶಸ್ತಿ ಪಡೆದ ಬಗ್ಗೆ ಪ್ರತಿಕ್ರಿಯಿಸಿದ ಕಾವೇರಿ, "ಕಾಯಕ ನಿಷ್ಠೆ, ಪರಿಶ್ರಮ ಗುರುತಿಸಿ ಪ್ರಶಸ್ತಿ ನೀಡಿರುವುದು ಬಹಳ ಸಂತೋಷ ತಂದಿದೆ. ನನ್ನ ಈ ಕಾರ್ಯಕ್ಕೆ ಸಹೋದ್ಯೋಗಿಗಳು ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ರೋಗಿಗಳ ಸೇವೆ ಮಾಡಿದ ತೃಪ್ತಿ ಇದೆ. 32 ವರ್ಷಗಳ ವೃತ್ತಿ ಜೀವನ ಸಾರ್ಥಕ ಭಾವ ಮೂಡಿಸಿದೆ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
1986ರಲ್ಲಿ ಸೊಕ್ಕೆ ಗ್ರಾಮದಲ್ಲಿ ವೃತ್ತಿ ಜೀವನ ಆರಂಭಿಸಿ ಪ್ರಸ್ತುತ ಸೇವೆಯಲ್ಲಿ ಸಕ್ರಿಯರಾಗಹಿರುವ ಸಜೀದಾ ಮಾತಾನಾಡಿ "ರೋಗಿಗಳ ಶುಶ್ರೂಷೆಯಲ್ಲಿ ಸಾರ್ಥಕತೆ ಕಂಡಿದ್ದೇನೆ. ಜನರ ಆರೋಗ್ಯ ಸಂಕಷ್ಟಗಳಿಗೆ ಹಗಲಿರುಳು ಸ್ಪಂದಿಸಿದ್ದೇನೆ. ಕಾರ್ಯನಿರ್ವಹಿಸಿರುವ ಊರುಗಳಲ್ಲಿ ಜನ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ" ಎಂದು ತಿಳಿಸಿದ್ದಾರೆ..
ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು 1973ರಲ್ಲಿ ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದಾದಿಯರು ಮತ್ತು ಶುಶ್ರೂಷಾ ವೃತ್ತಿಪರರು ಸಮಾಜಕ್ಕೆ ಸಲ್ಲಿಸಿದ ಶ್ಲಾಘನೀಯ ಸೇವೆಗಳನ್ನು ಗುರುತಿಸಿ ನೀಡಲಾಗುತ್ತಿದೆ. ಪ್ರಶಸ್ತಿ ವಿಜೇತರ ಪೂರ್ತಿ ಪಟ್ಟಿಯಲ್ಲಿ ನೋಡಲು ಕ್ಲಿಕ್ ಮಾಡಿ
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications