Lok Sabha Election 2024:ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮತದಾರರ ಸಂಪೂರ್ಣ ವಿವರ
ಚಿಕ್ಕಮಗಳೂರು, ಮಾರ್ಚ್ 20 : ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ನ್ನು ಘೋಷಣೆ ಮಾಡಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ ನಡೆಯಲಿದ್ದು, ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು ಜಿಲ್ಲೆಯಾದ್ಯಂತ ಶನಿವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ನೀತಿ ಸಂಹಿತೆಯನ್ನು ಪ್ರತಿಯೊಂದು ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮಾರ್ಚ್ 28 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 04 ಕೊನೆಯ ದಿನವಾಗಿದ್ದು, ಏಪ್ರಿಲ್ 05 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 08 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಏಪ್ರಿಲ್ 26ಕ್ಕೆ ಮತದಾನ ನಡೆಯಲಿದ್ದು, ಜೂನ್ 04 ಕ್ಕೆ ಮತ ಎಣಿಕೆ ನಡೆಯಲಿದೆ. ಜೂನ್ 06 ಕ್ಕೆ ಚುನಾವಣೆ ಪ್ರಕ್ರಿಯೆಗಳು ಮುಕ್ತಾಯವಾಗುತ್ತದೆ ಎಂದು ಹೇಳಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಒಟ್ಟು 15,72,958 ಮತದಾರರಿದ್ದಾರೆ. ಕುಂದಾಪುರ, ಉಡುಪಿ, ಕಾಪು, ಕಾರ್ಕಳ ತಾಲ್ಲೂಕುಗಳು ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 8,12,157 ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ ಸೇರಿದಂತೆ ನಾಲ್ಕು ತಾಲ್ಲೂಕುಗಳಲ್ಲಿ 7,60,801 ಮತದಾರರಿದ್ದಾರೆ. ಕಡೂರು ತಾಲ್ಲೂಕು ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ್ದು, 2,07,134 ಮತದಾರರಿದ್ದು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ ಎಂದರು.
ಮಾದರಿ ನೀತಿ ಸಂಹಿತೆ ಶನಿವಾರದಿಂದಲೇ ಜಾರಿಗೆ ಬಂದಿರುವುದರಿಂದ ರಾಜಕೀಯ ಸಭೆ ಸಮಾರಂಭಕ್ಕೆ ಪರವಾನಗಿ ಕಡ್ಡಾಯವಾಗಿದೆ. ಜಿಲ್ಲಾಧಿಕಾರಿಗಳ ಕಛೇರಿ ಅಥವಾ ತಾಲ್ಲೂಕು ಮಟ್ಟದಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಅಥವಾ ಸುವಿಧಾ ಮೂಲಕ ಪರವಾನಗಿ ಪಡೆಯಬೇಕು. ಅತಿಥಿ ಗೃಹಗಳು ಜಿಲ್ಲಾ ಚುನಾವಣಾಧಿಕಾರಿಗಳ ಅಧಿಗ್ರಹಣದಲ್ಲಿರುವುದರಿಂದ ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿಗಳಿಗೆ ಪ್ರವಾಸ ಮಂದಿರ ನಿಷೇಧಿಸಲಾಗಿದೆ
ಮತದಾರರ ಮೇಲೆ ಪ್ರಭಾವ ಬೀರುವ ಸರ್ಕಾರಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಆದರೆ ಕುಡಿಯುವ ನೀರು, ಬರ ಪರಿಹಾರ ಕಾರ್ಯಗಳು ಎಂದಿನಂತೆ ನಡೆಯಲಿದೆ. ಇದಕ್ಕೆ ಅಡ್ಡಿಯಿಲ್ಲ ಎಂದು ಹೇಳಿದ ಅವರು. ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯಲು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.
ಚುನಾವಣೆ ಘೋಷಣೆಯಾಗಿರುವುದರಿಂದ ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಮತ್ತು ಖಾಸಗಿ ಹೆದ್ದಾರಿ ಫಲಕಗಳ ಮೇಲಿನ ಸರ್ಕಾರಿ ಯೋಜನೆಗಳ ಪ್ರಚಾರದ ಬಂಟಿಂಗ್ಸ್, ಬ್ಯಾನರ್ಸ್, ಭಿತ್ತಿಪತ್ರ ಹಾಗೂ ಕಟೌಟ್ಗಳನ್ನು ತೆರವುಗೊಳಿಸಲು ಈಗಾಗಲೇ ಕ್ರಮವಹಿಸಲಾಗಿದೆ ಎಂದ ಅವರು ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸದವರು ನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕದ ಹತ್ತು ದಿನಗಳ ಮುಂಚಿತವಾಗಿ ಆನ್ಲೈನ್ ಮೂಲಕ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ ಎಂದ ಅವರು 85 ವರ್ಷ ಮೇಲ್ಪಟ್ಟ ವಯೋವೃದ್ಧರು, ವಿಶೇಷ ಚೇತನರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಮತದಾರರ ಮನೆಗೆ 12-ಡಿ ನಮೂನೆ ನೀಡಿ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಚುನಾವಣೆ ಅಕ್ರಮ ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದ್ದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು 1950 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರುಸಲ್ಲಿಸಬಹುದಾಗಿದೆ. ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ನೇತೃತ್ವದಲ್ಲಿ ಕ್ಯಾಶ್ ರಿಡ್ರೆಸಲ್ ಸಮಿತಿ ರಚಿಸಲಾಗಿದೆ ಎಂದರು.
ಇನ್ನು ಜಿಲ್ಲೆಯಾದ್ಯಂತ ಪರವಾನಗಿ ಹೊಂದಿರುವ ಹತ್ತು ಸಾವಿರಕ್ಕೂ ಹೆಚ್ಚು ಬಂದೂಕುಗಳ ಸನ್ನದುದಾರರಿದ್ದು, ಬಂದೂಕುಗಳನ್ನು ತಮ್ಮ ವ್ಯಾಪ್ತಿಯ ಸಂಬಂಧಿಸಿದ ಪೊಲೀಸ್ ಠಾಣೆಗೆ ಕೂಡಲೇ ಒಪ್ಪಿಸುವಂತೆ ತಿಳಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications