ಚಿಕ್ಕಮಗಳೂರು; ವಿಭಿನ್ನವಾಗಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ
ಚಿಕ್ಕಮಗಳೂರು, ಫೆಬ್ರವರಿ 15; ಪ್ರೇಮಿಗಳ ದಿನಾಚರಣೆಯ ದಿನ ಜೋಡಿಯೊಂದು ನಿಶ್ಚಿತಾರ್ಥ ಮಾಡಿಕೊಂಡಿತು. ಚಿಕ್ಕಮಗಳೂರಿನಲ್ಲಿ ನಡೆದ ಈ ನಿಶ್ಚಿತಾರ್ಥ ತುಂಬಾ ವಿಭಿನ್ನವಾಗಿತ್ತು, ಉಂಗುರ ಬದಲಾವಣೆ ಅಲ್ಲಿ ಇರಲಿಲ್ಲ.
ನವಜೀವನಕ್ಕೆ ಕಾಲಿಡುತ್ತಿರುವ ದಂಪತಿಯೊಬ್ಬರು ನಿಶ್ಚಿತಾರ್ಥದ ವೇಳೆ ಉಂಗುರ ಬದಲಿಸಿಕೊಳ್ಳುವ ಬದಲು ಭಾರತಾಂಬೆಯ ಭಾವಚಿತ್ರವನ್ನು ಬದಲಿಸಿಕೊಂಡರು. ಚಿಕ್ಕಮಗಳೂರು ನಗರದ ಹೊರವಲಯದಲ್ಲಿರುವ ಹಿರೇಮಗಳೂರಿನಲ್ಲಿ ರವೀಶ್ ಪಟೇಲ್ ಹಾಗೂ ವಿದ್ಯಾಶ್ರೀ ಎಂಬುವವರ ನಿಶ್ಚಿತಾರ್ಥ ಭಾನುವಾರ ನಡೆಯಿತು.
ನಿಶ್ಚತಾರ್ಥದ ದಿನ ಪರಸ್ಪರ ಉಂಗುರದ ಬದಲು ಭಾರತಾಂಬೆಯ ಫೋಟೋವನ್ನು ಬದಲಿಸಿಕೊಂಡು ವಿಭಿನ್ನವಾಗಿ ನಿಶ್ಚಿತಾರ್ಥ ಆಚರಿಸಿಕೊಂಡಿದ್ದಾರೆ. ವಿದ್ಯಾಶ್ರೀ ಮೂಲತಃ ಚಿಕ್ಕಮಗಳೂರಿನ ಹುಡುಗಿ. ಹಿರೇಮಗಳೂರು ಪೈ ಕಲ್ಯಾಣ ಮಂಟದ ಹಿಂಭಾಗದ ವಧುವಿನ ನಿವಾಸದಲ್ಲಿ ಈ ಅಪರೂಪ ಹಾಗೂ ಅರ್ಥಪೂರ್ಣ ನಿಶ್ಚಿತಾರ್ಥ ನಡೆದಿದೆ.

ರವೀಶ್ ಹಾಗೂ ವಿದ್ಯಾಶ್ರೀ ಇಬ್ಬರೂ ಬೆಂಗಳೂರಿನಿಲ್ಲಿ ಸಾಫ್ಟ್ವೇರ್ ಇಂಜಿನಿಯರ್ಗಳಾಗಿದ್ದಾರೆ. ಪ್ರೇಮಿಗಳ ದಿನವನ್ನು ಭಾರತಾಂಬೆಯ ದಿನವೆಂದು ವಿಭಿನ್ನವಾಗಿ ನಿಶ್ಚಿತಾರ್ಥ ಆಚರಿಸಿಕೊಂಡಿದ್ದಾರೆ.
ಈ ವೇಳೆ ರವೀಶ್ ಹಾಗೂ ವಿದ್ಯಾಶ್ರೀ ಕುಟುಂಬದವರು ಜೊತೆಗಿದ್ದು ಮಕ್ಕಳ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಅಪರೂಪ ಹಾಗೂ ಅರ್ಥಪೂರ್ಣ ಕಾರ್ಯಕ್ರಮಕ್ಕೆ ನಾಗಲಕ್ಷ್ಮಿ, ವೆಂಕಟೇಶ್, ಉಷಾ, ಕೇಶವಮೂರ್ತಿ, ಸ್ನೇಹಿತರು ಹಾಗೂ ಬಂಧುಮಿತ್ರರು ಸಾಕ್ಷಿಯಾಗಿದ್ದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications