Get Updates
Get notified of breaking news, exclusive insights, and must-see stories!

ಚಿಕ್ಕಮಗಳೂರು; ವಿಭಿನ್ನವಾಗಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ

ಚಿಕ್ಕಮಗಳೂರು, ಫೆಬ್ರವರಿ 15; ಪ್ರೇಮಿಗಳ ದಿನಾಚರಣೆಯ ದಿನ ಜೋಡಿಯೊಂದು ನಿಶ್ಚಿತಾರ್ಥ ಮಾಡಿಕೊಂಡಿತು. ಚಿಕ್ಕಮಗಳೂರಿನಲ್ಲಿ ನಡೆದ ಈ ನಿಶ್ಚಿತಾರ್ಥ ತುಂಬಾ ವಿಭಿನ್ನವಾಗಿತ್ತು, ಉಂಗುರ ಬದಲಾವಣೆ ಅಲ್ಲಿ ಇರಲಿಲ್ಲ.

ನವಜೀವನಕ್ಕೆ ಕಾಲಿಡುತ್ತಿರುವ ದಂಪತಿಯೊಬ್ಬರು ನಿಶ್ಚಿತಾರ್ಥದ ವೇಳೆ ಉಂಗುರ ಬದಲಿಸಿಕೊಳ್ಳುವ ಬದಲು ಭಾರತಾಂಬೆಯ ಭಾವಚಿತ್ರವನ್ನು ಬದಲಿಸಿಕೊಂಡರು. ಚಿಕ್ಕಮಗಳೂರು ನಗರದ ಹೊರವಲಯದಲ್ಲಿರುವ ಹಿರೇಮಗಳೂರಿನಲ್ಲಿ ರವೀಶ್ ಪಟೇಲ್ ಹಾಗೂ ವಿದ್ಯಾಶ್ರೀ ಎಂಬುವವರ ನಿಶ್ಚಿತಾರ್ಥ ಭಾನುವಾರ ನಡೆಯಿತು.

ನಿಶ್ಚತಾರ್ಥದ ದಿನ ಪರಸ್ಪರ ಉಂಗುರದ ಬದಲು ಭಾರತಾಂಬೆಯ ಫೋಟೋವನ್ನು ಬದಲಿಸಿಕೊಂಡು ವಿಭಿನ್ನವಾಗಿ ನಿಶ್ಚಿತಾರ್ಥ ಆಚರಿಸಿಕೊಂಡಿದ್ದಾರೆ. ವಿದ್ಯಾಶ್ರೀ ಮೂಲತಃ ಚಿಕ್ಕಮಗಳೂರಿನ ಹುಡುಗಿ. ಹಿರೇಮಗಳೂರು ಪೈ ಕಲ್ಯಾಣ ಮಂಟದ ಹಿಂಭಾಗದ ವಧುವಿನ ನಿವಾಸದಲ್ಲಿ ಈ ಅಪರೂಪ ಹಾಗೂ ಅರ್ಥಪೂರ್ಣ ನಿಶ್ಚಿತಾರ್ಥ ನಡೆದಿದೆ.

Chikkamagaluru Unique Engagement Ceremony By Software Engineer

ರವೀಶ್ ಹಾಗೂ ವಿದ್ಯಾಶ್ರೀ ಇಬ್ಬರೂ ಬೆಂಗಳೂರಿನಿಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿದ್ದಾರೆ. ಪ್ರೇಮಿಗಳ ದಿನವನ್ನು ಭಾರತಾಂಬೆಯ ದಿನವೆಂದು ವಿಭಿನ್ನವಾಗಿ ನಿಶ್ಚಿತಾರ್ಥ ಆಚರಿಸಿಕೊಂಡಿದ್ದಾರೆ.

ಈ ವೇಳೆ ರವೀಶ್ ಹಾಗೂ ವಿದ್ಯಾಶ್ರೀ ಕುಟುಂಬದವರು ಜೊತೆಗಿದ್ದು ಮಕ್ಕಳ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಅಪರೂಪ ಹಾಗೂ ಅರ್ಥಪೂರ್ಣ ಕಾರ್ಯಕ್ರಮಕ್ಕೆ ನಾಗಲಕ್ಷ್ಮಿ, ವೆಂಕಟೇಶ್, ಉಷಾ, ಕೇಶವಮೂರ್ತಿ, ಸ್ನೇಹಿತರು ಹಾಗೂ ಬಂಧುಮಿತ್ರರು ಸಾಕ್ಷಿಯಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+