ಚಿಕ್ಕಮಗಳೂರು; ವಿಭಿನ್ನವಾಗಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ
ಚಿಕ್ಕಮಗಳೂರು, ಫೆಬ್ರವರಿ 15; ಪ್ರೇಮಿಗಳ ದಿನಾಚರಣೆಯ ದಿನ ಜೋಡಿಯೊಂದು ನಿಶ್ಚಿತಾರ್ಥ ಮಾಡಿಕೊಂಡಿತು. ಚಿಕ್ಕಮಗಳೂರಿನಲ್ಲಿ ನಡೆದ ಈ ನಿಶ್ಚಿತಾರ್ಥ ತುಂಬಾ ವಿಭಿನ್ನವಾಗಿತ್ತು, ಉಂಗುರ ಬದಲಾವಣೆ ಅಲ್ಲಿ ಇರಲಿಲ್ಲ.
ನವಜೀವನಕ್ಕೆ ಕಾಲಿಡುತ್ತಿರುವ ದಂಪತಿಯೊಬ್ಬರು ನಿಶ್ಚಿತಾರ್ಥದ ವೇಳೆ ಉಂಗುರ ಬದಲಿಸಿಕೊಳ್ಳುವ ಬದಲು ಭಾರತಾಂಬೆಯ ಭಾವಚಿತ್ರವನ್ನು ಬದಲಿಸಿಕೊಂಡರು. ಚಿಕ್ಕಮಗಳೂರು ನಗರದ ಹೊರವಲಯದಲ್ಲಿರುವ ಹಿರೇಮಗಳೂರಿನಲ್ಲಿ ರವೀಶ್ ಪಟೇಲ್ ಹಾಗೂ ವಿದ್ಯಾಶ್ರೀ ಎಂಬುವವರ ನಿಶ್ಚಿತಾರ್ಥ ಭಾನುವಾರ ನಡೆಯಿತು.
ನಿಶ್ಚತಾರ್ಥದ ದಿನ ಪರಸ್ಪರ ಉಂಗುರದ ಬದಲು ಭಾರತಾಂಬೆಯ ಫೋಟೋವನ್ನು ಬದಲಿಸಿಕೊಂಡು ವಿಭಿನ್ನವಾಗಿ ನಿಶ್ಚಿತಾರ್ಥ ಆಚರಿಸಿಕೊಂಡಿದ್ದಾರೆ. ವಿದ್ಯಾಶ್ರೀ ಮೂಲತಃ ಚಿಕ್ಕಮಗಳೂರಿನ ಹುಡುಗಿ. ಹಿರೇಮಗಳೂರು ಪೈ ಕಲ್ಯಾಣ ಮಂಟದ ಹಿಂಭಾಗದ ವಧುವಿನ ನಿವಾಸದಲ್ಲಿ ಈ ಅಪರೂಪ ಹಾಗೂ ಅರ್ಥಪೂರ್ಣ ನಿಶ್ಚಿತಾರ್ಥ ನಡೆದಿದೆ.

ರವೀಶ್ ಹಾಗೂ ವಿದ್ಯಾಶ್ರೀ ಇಬ್ಬರೂ ಬೆಂಗಳೂರಿನಿಲ್ಲಿ ಸಾಫ್ಟ್ವೇರ್ ಇಂಜಿನಿಯರ್ಗಳಾಗಿದ್ದಾರೆ. ಪ್ರೇಮಿಗಳ ದಿನವನ್ನು ಭಾರತಾಂಬೆಯ ದಿನವೆಂದು ವಿಭಿನ್ನವಾಗಿ ನಿಶ್ಚಿತಾರ್ಥ ಆಚರಿಸಿಕೊಂಡಿದ್ದಾರೆ.
ಈ ವೇಳೆ ರವೀಶ್ ಹಾಗೂ ವಿದ್ಯಾಶ್ರೀ ಕುಟುಂಬದವರು ಜೊತೆಗಿದ್ದು ಮಕ್ಕಳ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಅಪರೂಪ ಹಾಗೂ ಅರ್ಥಪೂರ್ಣ ಕಾರ್ಯಕ್ರಮಕ್ಕೆ ನಾಗಲಕ್ಷ್ಮಿ, ವೆಂಕಟೇಶ್, ಉಷಾ, ಕೇಶವಮೂರ್ತಿ, ಸ್ನೇಹಿತರು ಹಾಗೂ ಬಂಧುಮಿತ್ರರು ಸಾಕ್ಷಿಯಾಗಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications