ಮೇ 7ರಂದು ಮತದಾನ: ಮದ್ಯ ಮಾರಾಟ ನಿರ್ಬಂಧ ಮಾಹಿತಿ
ಚಿಕ್ಕಮಗಳೂರು, ಮೇ 04: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತದಾನದ ಹಿನ್ನಲೆಯಲ್ಲಿ ಮದ್ಯ ಮಾರಾಟದ ಮೇಲೆ ನಿರ್ಬಂಧ ವಿಧಿಸಿ ಆದೇಶಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಇವರು ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮಧ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿನ ಅಂಶಗಳು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮದ್ಯ ಮಾರಾಟ ಹಾಗೂ ಮದ್ಯಪಾನವನ್ನು ನಿಷೇಧಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.
ಲೋಕಸಭಾ ಚುನಾವಣೆ -2024ರ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಗೆ ಹೊಂದಿಕೊಂಡಂತೆ ಇರುವ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿ ದಿನಾಂಕ 7/5/2024ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಯು ಮುಕ್ತ ಶಾಂತಿಯುತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಬೇಕೆಂಬ ಉದ್ದೇಶದಿಂದ ಮತದಾನ ಮುಕ್ತಾಯಗೊಳ್ಳುವ ಪೂರ್ವದ 48 ಗಂಟೆ ಅಂದರೆ ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮದ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗಡಿಭಾಗದಲ್ಲಿನ 5 ಕಿ. ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಶುಷ್ಕ ದಿವಸವೆಂದು ಘೋಷಿಸಲು ಕೋರಲಾಗಿದೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ಮತದಾನ ಪ್ರಕ್ರಿಯೆಯನ್ನು ನಡೆಸುವುದು ಅತೀ ಅವಶ್ಯವಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗದ 5 ಕಿ. ಮೀ. ವ್ಯಾಪ್ತಿಯಲ್ಲಿ ಬರುವ ಮದ್ಯದ ಸನ್ನದುಗಳನ್ನು ಮುಚ್ಚುವುದು ಸೂಕ್ತವೆಂದು ಮನಗಂಡು ಈ ಆದೇಶ ಹೊರಡಿಸಲಾಗಿದೆ.
ಆದೇಶದ ವಿವರ: ಮೀನಾ ನಾಗರಾಜ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಈ ಕುರಿತು ಆದೇಶಿಸಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 135(ಸಿ) ಹಾಗೂ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10(ಬಿ) ರಡಿಯಲ್ಲಿ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಿ ಆದೇಶ ಹೊರಡಿಸಲಾಗಿದೆ.
ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮಧ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಿಗೆ ಹೊಂದಿಕೊಂಡಿರುವ ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗದ 5 ಕಿ. ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬಾ, ಛತ್ರ ಇನ್ನಿತರೆ ಸ್ಥಳಗಳಲ್ಲಿ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸದರಿ ವ್ಯಾಪ್ತಿ ಪ್ರದೇಶದಲ್ಲಿ ಎಲ್ಲಾ ರೀತಿಯಲ್ಲಿ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.
ಏಪ್ರಿಲ್ 26ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನ ಮುಕ್ತಾಯಗೊಂಡಿದೆ. ಮೇ 7ರ ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಉತ್ತರ ಕನ್ನಡ, ಧಾರವಾಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications