ಚಿಕ್ಕಮಗಳೂರು: ತುಂಗೆಯ ರಭಸಕ್ಕೆ ಶೃಂಗೇರಿ ಪಟ್ಟಣ ಜಲಾವೃತ
ಚಿಕ್ಕಮಗಳೂರು, ಆಗಸ್ಟ್ 07: ಮಲೆನಾಡು ಪ್ರದೇಶದಲ್ಲಿ ಮುಂಗಾರುಮಳೆ ತನ್ನ ರುದ್ರ ನರ್ತನ ಮುಂದುವರೆಸಿದ್ದು, ತುಂಗಾನದಿ ಮೈದುಂಬಿ ಹರಿಯುತ್ತಿದೆ. ಶೃಂಗೇರಿ ಪಟ್ಟಣದಲ್ಲಿ ತುಂಗೆಯ ರಭಸಕ್ಕೆ ಹಲವು ಪ್ರದೇಶಗಳು ಮುಳುಗಡೆಯಾಗಿವೆ.
Recommended Video
ಶೃಂಗೇರಿ ಶಾರದಾ ಬೀದಿಯ ಅಕ್ಕಪಕ್ಕದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಕುರುಬರ ಕೇರಿ ಬಳಿಯೂ ನೀರು ನುಗ್ಗಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ರಸ್ತೆಯಲ್ಲಿದ್ದ ಕಾರು ಮುಳುಗಡೆಯಾಗಿದೆ. ಶೃಂಗೇರಿ ದೇವಾಲಯದ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ತುಂಗಾನದಿ ಪಕ್ಕದಲ್ಲಿರುವ ಮನೆಗಳಿಗೂ ಮಳೆ ನೀರು ನುಗ್ಗಿದೆ.

ಮೂಡಿಗೆರೆ ತಾಲೂಕಿನ ಕಳಸ ಸಮೀಪದಲ್ಲಿನ ಚಿಕ್ಕನ ಕುಡಿಗೆ ಹಾಗೂ ಬಲಿಗೆ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮೂರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ ಹೊರನಾಡು ಪಿಡಿಒ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಳಸ-ಚಿಕ್ಕನಕುಡಿಗೆ ಹಾಗೂ ಬಲಿಗೆ-ಮೆಣಸಿನ ಹಾಡ್ಯ ಗ್ರಾಮದ ಸಂಪರ್ಕ ತಾತ್ಕಾಲಿಕ ಕಡಿತಗೊಳಿಸಲಾಗಿದೆ. ಬಲಿಗೆ-ಮೇಣಸಿನ ಹಾಡ್ಯ ಮೂಲಕ ಶೃಂಗೇರಿ ಸಂಪರ್ಕ ಹೊಂದಿದ ರಸ್ತೆ ಇದಾಗಿದ್ದು, ಹೆಬ್ಬಾಳೆ ಸೇತುವೆ ಪದೆ ಪದೇ ಮುಳುಗಡೆಯಾಗುತ್ತಿರುವುದರಿಂದ ಜೆಸಿಬಿ ಹೋಗಲು ವಿಳಂಬವಾಗುತ್ತಿದೆ.

ತುಂಗಾನದಿ ನದಿ ನೀರಿನ ಹರಿವು ಹೆಚ್ಚಳವಾದ ಹಿನ್ನೆಲೆ ಶೃಂಗೇರಿ ಗುರು ನಿವಾಸಕ್ಕೆ ತೆರಳುವ ರಸ್ತೆ ಜಲಾವೃತವಾಗಿದೆ. ಭೋಜನ ಶಾಲೆಗೂ ನೀರು ನುಗ್ಗಿದ್ದು, ಅಪಾಯದ ಮಟ್ಟದಲ್ಲಿ ತುಂಗಾನದಿ ಹರಿಯುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications