ರಾಜ್ಯದಲ್ಲಿ 2770 "ಗ್ರಾಮ ವಾಸ್ತವ್ಯ", ನಾಲ್ಕು ಲಕ್ಷ ಕುಟುಂಬಗಳಿಗೆ ಮೂಲಸೌಲಭ್ಯಗಳ ವ್ಯವಸ್ಥೆ: ಆರ್.ಅಶೋಕ್
ಆರ್. ಅಶೋಕ್ ಅವರು ಹೇಳಿರುವ ಪ್ರಕಾರ "ಗ್ರಮವಾಸ್ತವ್ಯ"ದ ಮೂಲಕ ಇದುವರೆಗೂ ಎಷ್ಟು ಹಳ್ಳಿಗಳಿಗೆ ಮೂಲ ಸೌಕರ್ಯವನ್ನು ಕಲ್ಪಿಸಿದ್ದಾರೆ ಎನ್ನುವುದನ್ನು ನೀವೆ ನೋಡಿ.
ಚಿಕ್ಕಮಗಳೂರು, ಫೆಬ್ರವರಿ, 06: ನಾನು ಕಂದಾಯ ಸಚಿವನಾದ ನಂತರ ಇಡೀ ರಾಜ್ಯದಲ್ಲಿ ಇದುವರೆಗೆ 2770 ಗ್ರಾಮ ವಾಸ್ತವ್ಯಗಳಾಗಿದ್ದು, ನಾಲ್ಕು ಲಕ್ಷ ಕುಟುಂಬಗಳಿಗೆ ಸವಲತ್ತುಗಳನ್ನು ನೀಡಲಾಗಿದೆ ಎಂದು ಆರ್.ಅಶೋಕ್ ಹುಲಿಕೆರೆಯಲ್ಲಿ ಹೇಳಿದರು.
ಕಡೂರು ತಾಲೂಕಿನ ಹುಲಿಕೆರೆಯಲ್ಲಿ ಮಾತಾನಾಡಿದ ಅವರು, ಕಂದಾಯ ಸಚಿವನಾಗಿ ನಾನು 16 ಗ್ರಾಮ ವಾಸ್ತವ್ಯ ಮಾಡಿದ್ದೇನೆ. 71 ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಿ, ಅವುಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಹಾಗೆಯೇ ಗುರುತು ಮಾಡಿರುವ ಡೀಮ್ಡ್ ಫಾರೆಸ್ಟ್ನಿಂದ ಕೈ ಬಿಟ್ಟಿರುವ ಪ್ರದೇಶದಲ್ಲಿ ಸಾಗುವಳಿ ಮಾಡಿರುವವರಿಗೆ "ಆ" ಜಮೀನನ್ನು ಬಿಟ್ಟುಕೊಡಲು ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಒಂಬತ್ತು ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಇತ್ತು. ಅದನ್ನು 6 ಲಕ್ಷ ಹೆಕ್ಟೇರ್ಗೆ ಇಳಿಸಲಾಗಿದೆ. ಆ ಜಮೀನು ಉಳುಮೆ ಮಾಡುತ್ತಿದ್ದರೆ ಅದನ್ನು ಅವರಿಗೆ ಬಿಟ್ಟುಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.
ದಾಖಲೆಗಳು ಮನೆ ಬಾಗಿಲಿಗೆ ಬರಲಿವೆ
ಅಂಗವಿಕಲರು, ವಿಧವಾ ವೇತನ, ವೃದ್ಯಾಪ್ಯ ವೇತನ, ಮಹಿಳೆಯರಿಗೆ ಸವಲತ್ತು ನೀಡಬೇಕು. ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು ಎಂಬುದು ಗ್ರಾಮ ವಾಸ್ತವ್ಯದ ಮೂಲ ಉದ್ದೇಶವಾಗಿದೆ. ಜಮೀನಿನ ಖಾತೆಯನ್ನು ಏಳು ದಿನಗಳೊಳಗೆ ಬದಲಾವಣೆ ಮಾಡಬೇಕು ಎಂದು ಆದೇಶ ನೀಡಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿದ್ದರೆ ಅವರ ವಿರುದ್ಧ ಕೇಸು ಹಾಕಬಾರದು. ಈ ಸಂಬಂಧ ಕಾನೂನು ಜಾರಿಗೆ ತರಲಾಗಿದೆ. ಇನಾಮ್ ಜಮೀನನ್ನು ಯಾರೇ ಉಳುಮೆ ಮಾಡುತ್ತಿದ್ದರೂ ಅವರಿಗೆ ಖಾತೆ ಮಾಡಿಕೊಡಲಾಗುವುದು. ಹಾಗೆಯೇ ಕಂದಾಯ ದಾಖಲೆಯನ್ನು ಮನೆ ಬಾಗಿಲಿಗೆ ತಂದುಕೊಡುವ ಕೆಲಸವಾಗಿದೆ ಎಂದು ಹೇಳಿದರು.

ಗ್ರಾಮದ ಅಭಿವೃದ್ಧಿಗೆ ಕೊಟ್ಟ ಹಣ ಎಷ್ಟು?
ಗ್ರಾಮ ವಾಸ್ತವ್ಯದ ಪ್ರಯುಕ್ತ ಈ ಗ್ರಾಮದ ಅಭಿವೃದ್ಧಿಗೆ ಒಂದು ಕೋಟಿ ರೂಪಾಯಿ ನೀಡಲಾಗುವುದು. ಲಂಬಾಣಿ ತಾಂಡ ಗೊಲ್ಲರಹಟ್ಟಿಯಲ್ಲಿ ವಾಸಿಸುವ 50 ಸಾವಿರ ಕುಟುಂಬಗಳಿಗೆ ಜಮೀನು ನೋಂದಣಿ ಮಾಡಿಕೊಡಲಾಗಿದೆ. ಆಸಿಡ್ ದಾಡಿಗೆ ಒಳಗಾದವರಿಗೆ ಸಹಾಯಧನದ ಮೊತ್ತವನ್ನು 10 ಸಾವಿರಕ್ಕೆ ಏರಿಸಲಾಗಿದೆ ಎಂದರು.
ಗ್ರಾಮ ವಾಸ್ತವ್ಯದ ಉದ್ದೇಶವೇನು?
ನಂತರ ಶಾಸಕ ಸಿ.ಟಿ.ರವಿ ಮಾತನಾಡಿ, ಜನಸ್ನೇಹಿ ಆಡಳಿತ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ವಾಸ್ತವ್ಯ ಮಾಡುವ ಗ್ರಾಮಗಳಿಗೆ ಸಚಿವರು ಒಂದು ಕೋಟಿ ರೂಪಾಯಿ ಅನುದಾನ ನೀಡುತ್ತಾರೆ. ಆ ಗ್ರಾಮಗಳಲ್ಲಿ 5 ಸಾವಿರ ಫಲಾನುಭವಿಗಳಿಗೆ ಸವಲತ್ತು ವಿತರಿಸುತ್ತಾರೆ. 2018 ರಿಂದ ಇದುವರೆಗೆ ಹುಲಿಕೆರೆ ಗ್ರಾಮ ಪಂಚಾಯಿತಿಗೆ 15 ಕೋಟಿ ರೂಪಾಯಿ ನೀಡಲಾಗಿದೆ. ಅಯ್ಯನಕೆರೆಯಿಂದ ಇತರ ಕೆರೆಗಳಿಗೆ ನೀರು ತುಂಬಿಸಲು 25 ಕೋಟಿ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು.

ನಂತರ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, "ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ" ಜಾರಿಗೆ ಬಂದ ನಂತರ ಜಿಲ್ಲೆಯ 111 ಗ್ರಾಮಗಳಿಗೆ ಭೇಟಿ ನೀಡಿ 5699 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅವುಗಳ ಪೈಕಿ 5178 ಅರ್ಜಿಗಳು ವಿಲೇವಾರಿಯಾಗಿವೆ ಎಂದರು. ಹಾಗೆಯೇ ನಂತರ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಶಾಸಕ ಸಿ.ಟಿ.ರವಿ ಅವರ ಅಭಿವೃದ್ಧಿ ಕಾರ್ಯ ಇತರರಿಗೆ ಮಾದರಿಯಾಗಿದೆ ಎಂದು ಹೊಗಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications