ಮೂಡಿಗೆರೆಯ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಿಕ್ಕಮಗಳೂರು, ಡಿಸೆಂಬರ್ 4: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆಯೊಂದನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಾಡಾನೆ ಸೆರೆಯಿಂದ ಸದ್ಯ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ತಳವಾರ ಗ್ರಾಮದಲ್ಲಿ ಕಳೆದ ಐದು ದಿನಗಳಿಂದ ಆರು ಸಾಕಾನೆಗಳೊಂದಿಗೆ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಪುಂಡಾನೆಯನ್ನು ಖೆಡ್ಡಾಗೆ ಬೀಳಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಈ ಕಾಡಾನೆಯ ಸೆರೆಯಿಂದ ಇದರ ಜೊತೆಗಿದ್ದ ಮತ್ತೊಂದು ಕಾಡಾನೆ ತಪ್ಪಿಸಿಕೊಂಡು ಗಾಬರಿಯಿಂದ ಓಡಾಡುತ್ತಿರುವ ಬಗ್ಗೆ ಮಾಹಿತಿಯಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸದ್ಯ ಈ ಕಾಡಾನೆ ಸೆರೆಯಿಂದಾಗಿ ಒಟ್ಟು ಎರಡು ಪುಂಡಾನೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದಂತಾಗಿದೆ. ಈ ಹಿಂದೆ ಕಾಡಾನೆ ಸೆರೆಗೆ ಡ್ರೋಣ್ ಬಳಸಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ ತಲೆಕೆಡಿಸಿಕೊಂಡಿದ್ದ ಅರಣ್ಯ ಇಲಾಖೆ ಮತ್ತೆ ಹುಡುಕಾಟ ಆರಂಭಿಸಿದಾಗ ಕಾಡಾನೆ ಸೆರೆಯಾಗಿದೆ.
ತಳವಾರ ಗ್ರಾಮದ ಅಂಚಿನಲ್ಲಿರುವ ಅರಣ್ಯದಲ್ಲಿ ಪುಂಡಾನೆಯನ್ನು ಅರೆವಳಿಕೆ ಮದ್ದು ನೀಡಿ ಖೆಡ್ಡಾಗೆ ಕೆಡವಲಾಗಿತ್ತು. ಆದರೆ ಪುಂಡಾನೆ ಎಚ್ಚರಗೊಂಡಾಗ ಸಾಕಾನೆ ಜೊತೆ ಕಾದಾಟಕ್ಕೆ ಮುಂದಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸಾಕಾನೆಗಳ ಜೊತೆಗೆ ಕಾಡಾನೆ ಕಾದಾಟ ನಡೆಸಿದೆ. ಕೊನೆಯಲ್ಲಿ ಕಾಡಾನೆ ಕಾಲುಗಳಿಗೆ ಕಟ್ಟಿರುವ ಹಗ್ಗಗಳಿಂದ ಬಂಧಿಸಿ, ಸಾಕಾನೆಗಳು ಹರಸಾಹಸ ಪಟ್ಟು ಸೆರೆ ಹಿಡಿದ ಕಾಡಾನೆಯನ್ನು ಕಾಡಿನಿಂದ ಹೊರಕ್ಕೆ ತರಲಾಯಿತು.
ಈ ವೇಳೆ ಸೆರೆಯಾದ ಕಾಡಾನೆಯನ್ನು ನೋಡಲು ಜನರು ಬರಬೇಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದರು. ಆದರೂ ಕೂಡ ನೂರಾರು ಸಂಖ್ಯೆಯಲ್ಲಿ ಜನರು ಕಾಡಿಗೆ ದೌಡಾಯಿಸಿದ್ದರು. ಇನ್ನು ಸೆರೆಯಾದ ಆನೆ ಜೊತೆಗೆ ಜನರಿಗೆ ಉಪಟಳ ನೀಡುತ್ತಿರುವ ಮತ್ತೊಂದು ಪುಂಡಾನೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications