ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ನಿರ್ಭೀತಿಯ ಓಡಾಟ

ಚಿಕ್ಕಮಗಳೂರು, ಮೇ 17: ಕೊರೊನಾ ವೈರಸ್ ಆತಂಕದಿಂದ ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ಓಡಾಟ ಕಡಿಮೆಯಾದ ಹಿನ್ನೆಲೆಯಲ್ಲಿ ಗ್ರಾಮಗಳ ಅಂಚಿಗೆ ಬರುತ್ತಿದ್ದ ಕಾಡಾನೆಗಳು ಹಾಗೂ ಕಾಡುಪ್ರಾಣಿಗಳು ಈಗ ಗ್ರಾಮದೊಳಕ್ಕೆ ಬರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾನಹಳ್ಳಿಯಲ್ಲಿ ನಡೆದಿದೆ.
ಗ್ರಾಮದೊಳಗೆ ಬಂದಿರುವ ಕಾಡಾನೆಗಳ ಹಾವಳಿಯಿಂದ ಬಾನಹಳ್ಳಿಯಲ್ಲಿ ಕಾಫಿ ಮತ್ತು ಬಾಳೆ ಬೆಳೆ ಕೂಡ ನಾಶವಾಗಿದೆ. ಮೂಡಿಗೆರೆ ತಾಲ್ಲೂಕಿನ ಹತ್ತಾರು ಹಳ್ಳಿಗಳಲ್ಲಿ ಕಳೆದ ಒಂದೆರಡು ವರ್ಷಗಳಿಂದಲೂ ಕೂಡ ಕಾಡಾನೆ ಹಾವಳಿ ಮಿತಿ ಮೀರಿದೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸುವವರಿಗೆ ಸಿ.ಟಿ ರವಿ ಚಾಲೆಂಜ್
ಕೆಲವೆಡೆ ಒಂಟಿಸಲಗದ ಕಾಟವಿದ್ದರೆ, ಇನ್ನು ಹಲವೆಡೆ ಕಾಡಾನೆಗಳ ಹಿಂಡು ಮಲೆನಾಡಿಗರ ನಿದ್ದೆಗೆಡಿಸಿದೆ. ಇತ್ತೀಚೆಗೆ ಬಾನಹಳ್ಳಿಯಲ್ಲೂ ಎರಡು ಕಾಡಾನೆಗಳು ತೋಟದಲ್ಲಿ ಓಡಾಡಿದ್ದು ಕಾಫಿ ಹಾಗೂ ಬಾಳೆ ಬೆಳೆ ನಾಶವಾಗಿದೆ.

Wild Elephants Walked In Mudigere Taluk

ಕೊರೊನಾ ವೈರಸ್ ಆತಂಕದಿಂದ ದೇಶವೇ ಲಾಕ್ ಡೌನ್ ಆದ ಮೇಲೆ ನಗರ ಹಾಗೂ ಗ್ರಾಮೀಣ ಭಾಗದಲ್ಲೂ ಜನಸಾಮಾನ್ಯರ ಓಡಾಟ ಕಡಿಮೆಯಾಗಿತ್ತು. ಹೀಗಾಗಿ ಗ್ರಾಮಗಳ ಅಂಚಿನಲ್ಲಿ ಓಡಾಡುತ್ತಿದ್ದ ಕಾಡಾನೆಗಳು ಗ್ರಾಮಗಳ ಒಳಗೆ ಬಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಾಡುತ್ತಿವೆ.

Wild Elephants Walked In Mudigere Taluk
ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಹೋಗುತ್ತಿರುವ ಕಾಡಾನೆಗಳಿಂದ ಕಾಫಿ ತೋಟ ಕೂಡ ಹಾಳಾಗಿವೆ. ಮೂಡಿಗೆರೆಯ ಬಾನಹಳ್ಳಿ, ಭಾರತೀಬೈಲು, ಬೆಳಗೋಡ, ಗೌಡಹಳ್ಳಿ, ದೇವರಮನೆ, ಊರುಬಗೆ, ಸಾರಗೋಡು, ಕೆಂಜಿಗೆ ಸೇರಿದಂತೆ ಸುತ್ತಮುತ್ತ ಕಾಡಾನೆಗಳ ಹಾವಳಿಗೆ ಕಾಫಿನಾಡಿನ ಜನತೆ ಆತಂಕದಿಂದ ಬದುಕುವಂತಾಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+