ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ನಿರ್ಭೀತಿಯ ಓಡಾಟ
ಚಿಕ್ಕಮಗಳೂರು, ಮೇ 17: ಕೊರೊನಾ ವೈರಸ್ ಆತಂಕದಿಂದ ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ಓಡಾಟ ಕಡಿಮೆಯಾದ ಹಿನ್ನೆಲೆಯಲ್ಲಿ ಗ್ರಾಮಗಳ ಅಂಚಿಗೆ ಬರುತ್ತಿದ್ದ ಕಾಡಾನೆಗಳು ಹಾಗೂ ಕಾಡುಪ್ರಾಣಿಗಳು ಈಗ ಗ್ರಾಮದೊಳಕ್ಕೆ ಬರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾನಹಳ್ಳಿಯಲ್ಲಿ ನಡೆದಿದೆ.
ಗ್ರಾಮದೊಳಗೆ ಬಂದಿರುವ ಕಾಡಾನೆಗಳ ಹಾವಳಿಯಿಂದ ಬಾನಹಳ್ಳಿಯಲ್ಲಿ ಕಾಫಿ ಮತ್ತು ಬಾಳೆ ಬೆಳೆ ಕೂಡ ನಾಶವಾಗಿದೆ. ಮೂಡಿಗೆರೆ ತಾಲ್ಲೂಕಿನ ಹತ್ತಾರು ಹಳ್ಳಿಗಳಲ್ಲಿ ಕಳೆದ ಒಂದೆರಡು ವರ್ಷಗಳಿಂದಲೂ ಕೂಡ ಕಾಡಾನೆ ಹಾವಳಿ ಮಿತಿ ಮೀರಿದೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸುವವರಿಗೆ ಸಿ.ಟಿ ರವಿ ಚಾಲೆಂಜ್
ಕೆಲವೆಡೆ ಒಂಟಿಸಲಗದ ಕಾಟವಿದ್ದರೆ, ಇನ್ನು ಹಲವೆಡೆ ಕಾಡಾನೆಗಳ ಹಿಂಡು ಮಲೆನಾಡಿಗರ ನಿದ್ದೆಗೆಡಿಸಿದೆ. ಇತ್ತೀಚೆಗೆ ಬಾನಹಳ್ಳಿಯಲ್ಲೂ ಎರಡು ಕಾಡಾನೆಗಳು ತೋಟದಲ್ಲಿ ಓಡಾಡಿದ್ದು ಕಾಫಿ ಹಾಗೂ ಬಾಳೆ ಬೆಳೆ ನಾಶವಾಗಿದೆ.

ಕೊರೊನಾ ವೈರಸ್ ಆತಂಕದಿಂದ ದೇಶವೇ ಲಾಕ್ ಡೌನ್ ಆದ ಮೇಲೆ ನಗರ ಹಾಗೂ ಗ್ರಾಮೀಣ ಭಾಗದಲ್ಲೂ ಜನಸಾಮಾನ್ಯರ ಓಡಾಟ ಕಡಿಮೆಯಾಗಿತ್ತು. ಹೀಗಾಗಿ ಗ್ರಾಮಗಳ ಅಂಚಿನಲ್ಲಿ ಓಡಾಡುತ್ತಿದ್ದ ಕಾಡಾನೆಗಳು ಗ್ರಾಮಗಳ ಒಳಗೆ ಬಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಾಡುತ್ತಿವೆ.

-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications