ಹಾಸನ, ಚಿಕ್ಕಮಗಳೂರಿನಲ್ಲಿ ಮುಂದುವರೆದ ಕಾಡಾನೆಗಳ ಕಾಟ
ಚಿಕ್ಕಮಗಳೂರು, ಡಿಸೆಂಬರ್ 13; ಕಾಫಿನಾಡು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದೆ. ಜನರು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಹಿಡಿಯುವ ಕಾರ್ಯಾಚರಣೆಯ ವೇಳೆ ದಸರಾ ಆನೆ 'ಅರ್ಜುನ' ಸಾವನ್ನಪ್ಪಿದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿಗೆ ಕೊನೆ ಇಲ್ಲದಂತಾಗಿದೆ. ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿರುವ ತೋಟಕ್ಕೆ ದಾಳಿ ಇಟ್ಟ ಕಾಡಾನೆ ಮನೆಯ ಪಕ್ಕದಲ್ಲಿದ್ದ ಬೈನೆ ಮರವನ್ನು ಮನೆಯ ಮೇಲೆ ಕೆಡವಿದ್ದು, ಮನೆಯಲ್ಲಿದ್ದವರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮದ ಪ್ರಶಾಂತ್ ಎಂಬುವವರ ತೋಟಕ್ಕೆ ದಾಳಿ ಇಟ್ಟ ಕಾಡಾನೆ, ಮನೆಯ ಬಳಿ ಇದ್ದ ಬೈನೆ ಮರವನ್ನು ನೆಲಕ್ಕೆ ಕಡೆವಿದೆ. ಈ ವೇಳೆ ಮರ ಪ್ರಶಾಂತ್ ಅವರ ಮನೆಯ ಮೇಲೆ ಬಿದ್ದಿದ್ದು, ಮನೆ ಮಂದಿ ಮತ್ತೊಂದು ಕೊಠಡಿಯಲ್ಲಿದ್ದ ಪರಿಣಾಮ ದೊಡ್ಡ ದುರಂತ ತಪ್ಪಿದೆ.
ಆದರೆ ಮನೆಯ ಗೋಡೆ ಹಾಗೂ ಛಾವಣಿಗೆ ಹಾಕಿದ್ದ ಶೀಟುಗಳಿಗೆ ಭಾರೀ ಹಾನಿಯಾಗಿದೆ. ಬೈನೆ ಮರವನ್ನು ಕೆಡವಿದ ಕಾಡಾನೆ ರಾತ್ರಿ ಇಡೀ ಬೈನೆ ಮರದ ಸೊಪ್ಪು, ತಿರುಳನ್ನು ತಿಂದು ಹಾಕಿದೆ. ಮನೆ ಪಕ್ಕದಲ್ಲೇ ಆನೆ ಇದ್ದರೂ ಪ್ರಶಾಂತ್ ಹಾಗೂ ಮನೆ ಮಂದಿ ಮನೆಯಿಂದ ಹೊರ ಬಾರದೇ ರಾತ್ರಿ ಇಡೀ ಪ್ರಾಣಭೀತಿಯಲ್ಲೇ ಕಾಲ ಕಳೆದಿದ್ದಾರೆ. ಬೈನೆ ಮರವನ್ನು ಪೂರ್ತಿಯಾಗಿ ತಿಂದು ಕಾಡಾನೆ ಸ್ಥಳದಿಂದ ಹೊರಟು ಹೋಗಿದೆ ಎಂದು ತಿಳಿದು ಬಂದಿದೆ.
ಆನೆಗಳ ಜಲಕ್ರೀಡೆ ವಿಡಿಯೋ ವೈರಲ್; ಚಿಕ್ಕಮಗಳೂರು ಜಿಲ್ಲೆಯಲ್ಲಿ ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಹಿಂಡು ಕಂಡಿವೆ. ಆದರೆ ಈ ಬಾರಿ ಯಾವುದೇ ಹಾನಿ ಮಾಡಿಲ್ಲ, ಬದಲಾಗಿ ಹಿನ್ನೀರಿನಲ್ಲಿ ಜಲಕ್ರೀಡೆಯಲ್ಲಿ ತಲ್ಲೀನವಾಗಿವೆ. ಎನ್. ಆರ್. ಪುರ ತಾಲೂಕಿನ ಕುಸುಬೂರು ಗ್ರಾಮದ ಕೆರೆಯಲ್ಲಿ ಬೀಡುಬಿಟ್ಟಿರುವ 12 ಕಾಡಾನೆಗಳ ಹಿಂಡು ಜಲಕ್ರೀಡೆಯಲ್ಲಿ ತೊಡಗಿದ್ದವು. ತನ್ನ ಮರಿಗಳ ಜೊತೆ ನೀರಲ್ಲಿ ಈಜಾಡುತ್ತಾ, ಕಾಲ ಕಳೆದ ಕಾಡಾನೆಗಳ ಹಿಂಡಿನ ದೃಶ್ಯವನ್ನು ಜನರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. 0
ಕಾಡಾನೆಗಳ ಕಂಡು ಸ್ಥಳೀಯ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕೊಪ್ಪ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳು ನರಸಿಂಹರಾಜಪುರದ ಭದ್ರಾ ಹಿನ್ನೀರಿನ ಕುಸುಬೂರು, ಮುತ್ತಿನಕೊಪ್ಪ, ಸಾತ್ಕೋಳ, ಮುಂಡುಗೋಡು ಸೇರಿದಂತೆ ಹತ್ತಾರು ಹಳ್ಳಿಯ ಜನರಲ್ಲಿ ಆತಂಕ ಮೂಡಿಸಿವೆ.
ಹಾಸನದಲ್ಲಿ ಕಾಡಾನೆ ದಾಳಿ; ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ ಘಟನೆ ಹಾಸನದಲ್ಲಿ ನಡೆದಿದೆ. ಬೈಕ್ನಿಂದ ಇಳಿದ ರೈತನನ್ನು ಅರ್ಧ ಕಿಲೋಮೀಟರ್ವರೆಗೂ ಆನೆ ಅಟ್ಟಿಸಿಕೊಂಡು ಹೋಗಿದೆ.
ಸಕಲೇಶಪುರ ತಾಲ್ಲೂಕಿನ ಮತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರುದ್ರೇಗೌಡ ಎಂಬುವವರು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ. ಓಡಿ ಸುಸ್ತಾಗಿ ಕೆಳಗೆ ಬಿದ್ದ ರುದ್ರೇಗೌಡರನ್ನು ಸ್ಥಳೀಯರು ನೀರು ಕುಡಿಸಿ ಸಂತೈಸಿದರು.
ಕಾಡಾನೆ ರಸ್ತೆ ಪಕ್ಕದ ಕಾಫಿ ತೋಟದೊಳಗೆ ಹೋಗಿದೆ ಎಂಬ ಮಾಹಿತಿ ಇದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ಮಾಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications